<p><strong>ಆಲೂರು: </strong>ತಾಲ್ಲೂಕಿನ ಕಾಡುಭಕ್ತರವಳ್ಳಿ (ಕ್ಯಾತನಹಳ್ಳಿ) ಗ್ರಾಮದಲ್ಲಿ ಶನಿವಾರ ಬೆಳಿಗ್ಗೆ ಕಾಡಾನೆ ದಾಳಿಗೆ ಸಿಲುಕಿ ರೈತಪ್ರಧಾನ್(36) ಎಂಬುವವರು ಮೃತಪಟ್ಟಿದ್ದಾರೆ.</p>.<p>ಮನೆ ಬಳಿಯ ಕಾಫಿ ತೋಟದಲ್ಲಿ ನೀರು ಹಾಯಿಸಲು ಪೈಪ್ ಅಳವಡಿ ಸುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದೆ. ಸೊಂಡಿಲಿನಿಂದ ಎಳೆದುಕೊಂಡು ಹೋಗಿ ನೆಲಕ್ಕೆ ಅಪ್ಪಳಿಸಿದೆ.</p>.<p>ಪ್ರಧಾನ್ ಅವರಿಗೆ ತಂದೆ, ತಾಯಿ, ಪತ್ನಿ ಹಾಗೂ ಇಬ್ಬರು ಮಕ್ಕಳು ಇದ್ದಾರೆ.</p>.<p>ಗ್ರಾಮಸ್ಥರ ಆಕ್ರೋಶ: ಶಾಸಕರು ಹಾಗೂ ಅಧಿಕಾರಿಗಳು ಸ್ಥಳಕ್ಕೆ ಬರುವವರೆಗೂ ಮೃತದೇಹ ತೆಗೆಯುವುದಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.</p>.<p>ಶಾಸಕ ಎಚ್.ಕೆ.ಕುಮಾರಸ್ವಾಮಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಕೆ. ಹರೀಶ್, ಉಪ ವಿಭಾಗಾಧಿಕಾರಿ ಗಿರೀಶ್ ನಂದನ್, ತಹಶೀಲ್ದಾರ್ ಶಿರೀನ್ತಾಜ್, ವಲಯ ಅರಣ್ಯಾಧಿಕಾರಿ ವಿನಯಚಂದ್ರ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು.</p>.<p>ಶಾಸಕ ಎಚ್.ಕೆ. ಕುಮಾರಸ್ವಾಮಿ ಮಾತನಾಡಿ, ‘ಕಾಡಾನೆ ಸಮಸ್ಯೆಯನ್ನು ಬಗೆಹರಿಸಲು ಸರ್ಕಾರದೊಂದಿಗೆ ಹಲವು ಬಾರಿ ಚರ್ಚೆ ಮಾಡಲಾಗಿದೆ. ಚುನಾವಣೆ ನಂತರ ಅಧಿಕಾರಿಗಳು ಹಾಗೂ ಸಚಿವರೊಂದಿಗೆ ಮಾತನಾಡಿ ಶಾಶ್ವತ ಪರಿಹಾರಕ್ಕೆ ಶ್ರಮಿಸುತ್ತೇನೆ’ ಎಂದು ಹೇಳಿದರು.</p>.<p>‘ಕಾಡಾನೆ ಹಾವಳಿ ತಡೆಗೆ ಯೋಜನೆ ರೂಪಿಸದಿದ್ದರೆ ಪಾದಯಾತ್ರೆ ಕೈಗೊಂಡು ಜಿಲ್ಲಾ ಕೇಂದ್ರ ಅಥವಾ ಬೆಂಗಳೂರಿನಲ್ಲಿ ರೈತರೊಂದಿಗೆ ಪ್ರತಿಭಟನೆ ನಡೆಸಲಾ ಗುವುದು’ ಎಂದು ತಿಳಿಸಿದರು.</p>.<p>‘ಕಾಡಾನೆ ದಾಳಿಗೆ ಸಿಲುಕಿ ನಷ್ಟಕ್ಕೊಳಗಾದ ರೈತರಿಗೆ ವಿತರಿಸುವ ₹1.2 ಕೋಟಿ ಪರಿಹಾರ ಕೂಡಲೇ ನೀಡಬೇಕು. ಮೃತ ಪ್ರಧಾನ್ಗೆ ₹2 ಲಕ್ಷ ಪರಿಹಾರ ನೀಡಲಾಗುವುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆಲೂರು: </strong>ತಾಲ್ಲೂಕಿನ ಕಾಡುಭಕ್ತರವಳ್ಳಿ (ಕ್ಯಾತನಹಳ್ಳಿ) ಗ್ರಾಮದಲ್ಲಿ ಶನಿವಾರ ಬೆಳಿಗ್ಗೆ ಕಾಡಾನೆ ದಾಳಿಗೆ ಸಿಲುಕಿ ರೈತಪ್ರಧಾನ್(36) ಎಂಬುವವರು ಮೃತಪಟ್ಟಿದ್ದಾರೆ.</p>.<p>ಮನೆ ಬಳಿಯ ಕಾಫಿ ತೋಟದಲ್ಲಿ ನೀರು ಹಾಯಿಸಲು ಪೈಪ್ ಅಳವಡಿ ಸುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದೆ. ಸೊಂಡಿಲಿನಿಂದ ಎಳೆದುಕೊಂಡು ಹೋಗಿ ನೆಲಕ್ಕೆ ಅಪ್ಪಳಿಸಿದೆ.</p>.<p>ಪ್ರಧಾನ್ ಅವರಿಗೆ ತಂದೆ, ತಾಯಿ, ಪತ್ನಿ ಹಾಗೂ ಇಬ್ಬರು ಮಕ್ಕಳು ಇದ್ದಾರೆ.</p>.<p>ಗ್ರಾಮಸ್ಥರ ಆಕ್ರೋಶ: ಶಾಸಕರು ಹಾಗೂ ಅಧಿಕಾರಿಗಳು ಸ್ಥಳಕ್ಕೆ ಬರುವವರೆಗೂ ಮೃತದೇಹ ತೆಗೆಯುವುದಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.</p>.<p>ಶಾಸಕ ಎಚ್.ಕೆ.ಕುಮಾರಸ್ವಾಮಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಕೆ. ಹರೀಶ್, ಉಪ ವಿಭಾಗಾಧಿಕಾರಿ ಗಿರೀಶ್ ನಂದನ್, ತಹಶೀಲ್ದಾರ್ ಶಿರೀನ್ತಾಜ್, ವಲಯ ಅರಣ್ಯಾಧಿಕಾರಿ ವಿನಯಚಂದ್ರ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು.</p>.<p>ಶಾಸಕ ಎಚ್.ಕೆ. ಕುಮಾರಸ್ವಾಮಿ ಮಾತನಾಡಿ, ‘ಕಾಡಾನೆ ಸಮಸ್ಯೆಯನ್ನು ಬಗೆಹರಿಸಲು ಸರ್ಕಾರದೊಂದಿಗೆ ಹಲವು ಬಾರಿ ಚರ್ಚೆ ಮಾಡಲಾಗಿದೆ. ಚುನಾವಣೆ ನಂತರ ಅಧಿಕಾರಿಗಳು ಹಾಗೂ ಸಚಿವರೊಂದಿಗೆ ಮಾತನಾಡಿ ಶಾಶ್ವತ ಪರಿಹಾರಕ್ಕೆ ಶ್ರಮಿಸುತ್ತೇನೆ’ ಎಂದು ಹೇಳಿದರು.</p>.<p>‘ಕಾಡಾನೆ ಹಾವಳಿ ತಡೆಗೆ ಯೋಜನೆ ರೂಪಿಸದಿದ್ದರೆ ಪಾದಯಾತ್ರೆ ಕೈಗೊಂಡು ಜಿಲ್ಲಾ ಕೇಂದ್ರ ಅಥವಾ ಬೆಂಗಳೂರಿನಲ್ಲಿ ರೈತರೊಂದಿಗೆ ಪ್ರತಿಭಟನೆ ನಡೆಸಲಾ ಗುವುದು’ ಎಂದು ತಿಳಿಸಿದರು.</p>.<p>‘ಕಾಡಾನೆ ದಾಳಿಗೆ ಸಿಲುಕಿ ನಷ್ಟಕ್ಕೊಳಗಾದ ರೈತರಿಗೆ ವಿತರಿಸುವ ₹1.2 ಕೋಟಿ ಪರಿಹಾರ ಕೂಡಲೇ ನೀಡಬೇಕು. ಮೃತ ಪ್ರಧಾನ್ಗೆ ₹2 ಲಕ್ಷ ಪರಿಹಾರ ನೀಡಲಾಗುವುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>