<p><strong>ಬೇಲೂರು</strong>: ತಾಲ್ಲೂಕಿನ ಅರೆಹಳ್ಳಿ ಹೋಬಳಿಯ ಹುಲ್ಲೆಮಕ್ಕಿ ಗ್ರಾಮದಲ್ಲಿ ಶುಕ್ರವಾರ ಕಾಡಾನೆ ದಾಳಿಯಿಂದ ಕಾಫಿ ತೋಟದ ಕಾರ್ಮಿಕ ಶಿವು (55) ಮೃತಪಟ್ಟಿದ್ದಾರೆ.</p>.<p>ಬಾಳೆಹೊನ್ನೂರಿನವರಾದ ಶಿವು ಹಲವು ವರ್ಷಗಳಿಂದ ಅರೇಹಳ್ಳಿಯ ಲಿಂಗಾಪುರದಲ್ಲಿ ವಾಸವಿದ್ದರು. ಶುಕ್ರವಾರ ಬೆಳಿಗ್ಗೆ 10ರ ಸುಮಾರಿಗೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಶಿವು ಅವರ ಮೇಲೆ ಕಾಡಾನೆ ದಾಳಿ ಮಾಡಿದ್ದು, ಸ್ಥಳದಲ್ಲೇ ಅಸುನೀಗಿದ್ದಾರೆ.</p>.<p>ಆನೆ ದಾಳಿಯಿಂದ ಈ ಭಾಗದ ಕೂಲಿಕಾರ್ಮಿಕರು, ತೋಟದ ಮಾಲೀಕರು ಹಾಗೂ ಸಾರ್ವಜನಿಕರು ಆತಂಕಗೊಂಡಿದ್ದಾರೆ. ಆನೆ ಹಾವಳಿಗೆ ಶಾಶ್ವತವಾಗಿ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿದ್ದಾರೆ.</p>.<p>ಮೃತರ ಕುಟುಂಬದವರಿಗೆ ₹ 2 ಲಕ್ಷ ಪರಿಹಾರದ ಚೆಕ್ ಅನ್ನು ಶಾಸಕ ಕೆ.ಎಸ್.ಲಿಂಗೇಶ್ ನೀಡಿದರು.</p>.<p>ಉಳಿದ ₹ 5.50 ಲಕ್ಷ ಪರಿಹಾರ ವನ್ನು ಮರಣೋತ್ತರ ಪರೀಕ್ಷೆ ಬಳಿಕ ನೀಡಲಾಗುವುದು. ಮೃತರ ಪತ್ನಿಗೆ 5 ವರ್ಷ ₹ 2,000 ಮಾಸಾಶನ ನೀಡುವು ದಾಗಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಬಸವರಾಜು ತಿಳಿಸಿದರು.</p>.<p>ಹೆಚ್ಚಿನ ಉಪಟಳ ಮಾಡುತ್ತಿರುವ ಎರಡು ಕಾಡಾನೆಗಳನ್ನು ಲಾಕ್ಡೌನ್ ಮುಗಿದ ನಂತರ ಕಾರ್ಯಾಚರಣೆ ನಡೆಸಿ ಸೆರೆ ಹಿಡಿಯಲಾಗುವುದು ಎಂದು ಅವರು ಹೇಳಿದರು.</p>.<p>ಶಾಸಕ ಕೆ.ಎಸ್.ಲಿಂಗೇಶ್ ಮಾತನಾಡಿ, ‘ಕಳೆದ ನಾಲ್ಕು ತಿಂಗಳ ಹಿಂದಷ್ಟೆ ಒಬ್ಬ ಕಾರ್ಮಿಕ ಕಾಡಾನೆ ದಾಳಿಗೆ ಬಲಿಯಾಗಿದ್ದರು. ಈಗ ಮತ್ತೊಬ್ಬರು ಮೃತಪಟ್ಟಿದ್ದಾನೆ. ಕಾಡಾನೆ ದಾಳಿಯಿಂದ ಬೆಳೆ ನಷ್ಟದ ಜೊತೆಗೆ ಜೀವಹಾನಿಯಾಗುತ್ತಿದೆ. ಉಪಟಳ ನೀಡುತ್ತಿರುವ ಕಾಡಾನೆಗಳನ್ನು ಹಿಡಿಯಬೇಕು’ ಎಂದು ಒತ್ತಾಯಿಸಿದರು.</p>.<p>ಉಪ ವಲಯ ಅರಣ್ಯಾಧಿಕಾರಿ ಗುರುರಾಜ್ ಹಾಗೂ ಅರೇಹಳ್ಳಿ ಪಿಎಸ್ಐ ಮಹೇಶ್, ಪಿಡಿಒ ಸಂತೋಷ್, ಅರಣ್ಯ ರಕ್ಷಕರಾದ ರಘುಕುಮಾರ್, ವೇದರಾಜು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೇಲೂರು</strong>: ತಾಲ್ಲೂಕಿನ ಅರೆಹಳ್ಳಿ ಹೋಬಳಿಯ ಹುಲ್ಲೆಮಕ್ಕಿ ಗ್ರಾಮದಲ್ಲಿ ಶುಕ್ರವಾರ ಕಾಡಾನೆ ದಾಳಿಯಿಂದ ಕಾಫಿ ತೋಟದ ಕಾರ್ಮಿಕ ಶಿವು (55) ಮೃತಪಟ್ಟಿದ್ದಾರೆ.</p>.<p>ಬಾಳೆಹೊನ್ನೂರಿನವರಾದ ಶಿವು ಹಲವು ವರ್ಷಗಳಿಂದ ಅರೇಹಳ್ಳಿಯ ಲಿಂಗಾಪುರದಲ್ಲಿ ವಾಸವಿದ್ದರು. ಶುಕ್ರವಾರ ಬೆಳಿಗ್ಗೆ 10ರ ಸುಮಾರಿಗೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಶಿವು ಅವರ ಮೇಲೆ ಕಾಡಾನೆ ದಾಳಿ ಮಾಡಿದ್ದು, ಸ್ಥಳದಲ್ಲೇ ಅಸುನೀಗಿದ್ದಾರೆ.</p>.<p>ಆನೆ ದಾಳಿಯಿಂದ ಈ ಭಾಗದ ಕೂಲಿಕಾರ್ಮಿಕರು, ತೋಟದ ಮಾಲೀಕರು ಹಾಗೂ ಸಾರ್ವಜನಿಕರು ಆತಂಕಗೊಂಡಿದ್ದಾರೆ. ಆನೆ ಹಾವಳಿಗೆ ಶಾಶ್ವತವಾಗಿ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿದ್ದಾರೆ.</p>.<p>ಮೃತರ ಕುಟುಂಬದವರಿಗೆ ₹ 2 ಲಕ್ಷ ಪರಿಹಾರದ ಚೆಕ್ ಅನ್ನು ಶಾಸಕ ಕೆ.ಎಸ್.ಲಿಂಗೇಶ್ ನೀಡಿದರು.</p>.<p>ಉಳಿದ ₹ 5.50 ಲಕ್ಷ ಪರಿಹಾರ ವನ್ನು ಮರಣೋತ್ತರ ಪರೀಕ್ಷೆ ಬಳಿಕ ನೀಡಲಾಗುವುದು. ಮೃತರ ಪತ್ನಿಗೆ 5 ವರ್ಷ ₹ 2,000 ಮಾಸಾಶನ ನೀಡುವು ದಾಗಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಬಸವರಾಜು ತಿಳಿಸಿದರು.</p>.<p>ಹೆಚ್ಚಿನ ಉಪಟಳ ಮಾಡುತ್ತಿರುವ ಎರಡು ಕಾಡಾನೆಗಳನ್ನು ಲಾಕ್ಡೌನ್ ಮುಗಿದ ನಂತರ ಕಾರ್ಯಾಚರಣೆ ನಡೆಸಿ ಸೆರೆ ಹಿಡಿಯಲಾಗುವುದು ಎಂದು ಅವರು ಹೇಳಿದರು.</p>.<p>ಶಾಸಕ ಕೆ.ಎಸ್.ಲಿಂಗೇಶ್ ಮಾತನಾಡಿ, ‘ಕಳೆದ ನಾಲ್ಕು ತಿಂಗಳ ಹಿಂದಷ್ಟೆ ಒಬ್ಬ ಕಾರ್ಮಿಕ ಕಾಡಾನೆ ದಾಳಿಗೆ ಬಲಿಯಾಗಿದ್ದರು. ಈಗ ಮತ್ತೊಬ್ಬರು ಮೃತಪಟ್ಟಿದ್ದಾನೆ. ಕಾಡಾನೆ ದಾಳಿಯಿಂದ ಬೆಳೆ ನಷ್ಟದ ಜೊತೆಗೆ ಜೀವಹಾನಿಯಾಗುತ್ತಿದೆ. ಉಪಟಳ ನೀಡುತ್ತಿರುವ ಕಾಡಾನೆಗಳನ್ನು ಹಿಡಿಯಬೇಕು’ ಎಂದು ಒತ್ತಾಯಿಸಿದರು.</p>.<p>ಉಪ ವಲಯ ಅರಣ್ಯಾಧಿಕಾರಿ ಗುರುರಾಜ್ ಹಾಗೂ ಅರೇಹಳ್ಳಿ ಪಿಎಸ್ಐ ಮಹೇಶ್, ಪಿಡಿಒ ಸಂತೋಷ್, ಅರಣ್ಯ ರಕ್ಷಕರಾದ ರಘುಕುಮಾರ್, ವೇದರಾಜು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>