<p><strong>ಸಕಲೇಶಪುರ: </strong>ಕಾಡಾನೆ ಮನೆ ಅಂಗಳಕ್ಕೆ ನುಗ್ಗಿ ಸೊಂಡಿನಿಂದ ಹೊಡೆದು ಗಾಯಗೊಳಿಸಿದ ಘಟನೆ ಭಾನುವಾರ ಸಂಜೆ ತಾಲ್ಲೂಕಿನ ಮಠಸಾಗರ ಗ್ರಾಮದಲ್ಲಿ ನಡೆದಿದೆ.</p>.<p>ವೇಗವಾಗಿ ಬಂದ ಸಲಗ ಅಂಗಳದಲ್ಲಿದ್ದ ಭೋಜಪ್ಪ ಅವರನ್ನು ಸೊಂಡಿಲಿನಿಂದ ತಳ್ಳಿ ಕೆಳಗೆ ಬೀಳಿಸಿದೆ. ಆಗ ಮನೆಯಲ್ಲಿದ್ದವರು ಹೆದರಿ ಕೂಗಾಡಿದ್ದಾರೆ. ಕೂಗಿಗೆ ಆನೆ ಓಡಿ ಪಕ್ಕದ ಕಾಫಿ ತೋಟದೊಳಗೆ ಮರೆಯಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ಅರಣ್ಯ ಇಲಾಖೆಗೆ ತಿಳಿಸಿದ್ದಾರೆ.</p>.<p>ಬೆನ್ನಿಗೆ ಬಲವಾಗಿ ಪೆಟ್ಟು ಬಿದ್ದಿದ್ದು, ಇಲ್ಲಿಯ ಕ್ರಾಫರ್ಡ್ ಸರ್ಕಾರಿ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಆರ್ಎಫ್ಓ ರಾಘವೇಂದ್ರ ಅಗಸೆ ಹಾಗೂ ಸಿಬ್ಬಂದಿ ಹಾಸನಕ್ಕೆ ಕರೆದುಕೊಂಡು ಹೋಗಿದ್ದಾರೆ.</p>.<p>ಮೂರು ವರ್ಷದಿಂದ ಕಾಡಾನೆಗಳು ಮಠಸಾಗರ ಹಾಗೂ ಸುತ್ತಲಿನ ಗ್ರಾಮಗಳಲ್ಲಿ ಅಲೆದಾಡುತ್ತಿದ್ದು, ಆನೆ ದಾಳಿಯಿಂದ ಎರಡು ವರ್ಷದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಇದರಿಂದ ಜನರು ಸಂಚರಿಸಲು ಹೆದರುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಕಲೇಶಪುರ: </strong>ಕಾಡಾನೆ ಮನೆ ಅಂಗಳಕ್ಕೆ ನುಗ್ಗಿ ಸೊಂಡಿನಿಂದ ಹೊಡೆದು ಗಾಯಗೊಳಿಸಿದ ಘಟನೆ ಭಾನುವಾರ ಸಂಜೆ ತಾಲ್ಲೂಕಿನ ಮಠಸಾಗರ ಗ್ರಾಮದಲ್ಲಿ ನಡೆದಿದೆ.</p>.<p>ವೇಗವಾಗಿ ಬಂದ ಸಲಗ ಅಂಗಳದಲ್ಲಿದ್ದ ಭೋಜಪ್ಪ ಅವರನ್ನು ಸೊಂಡಿಲಿನಿಂದ ತಳ್ಳಿ ಕೆಳಗೆ ಬೀಳಿಸಿದೆ. ಆಗ ಮನೆಯಲ್ಲಿದ್ದವರು ಹೆದರಿ ಕೂಗಾಡಿದ್ದಾರೆ. ಕೂಗಿಗೆ ಆನೆ ಓಡಿ ಪಕ್ಕದ ಕಾಫಿ ತೋಟದೊಳಗೆ ಮರೆಯಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ಅರಣ್ಯ ಇಲಾಖೆಗೆ ತಿಳಿಸಿದ್ದಾರೆ.</p>.<p>ಬೆನ್ನಿಗೆ ಬಲವಾಗಿ ಪೆಟ್ಟು ಬಿದ್ದಿದ್ದು, ಇಲ್ಲಿಯ ಕ್ರಾಫರ್ಡ್ ಸರ್ಕಾರಿ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಆರ್ಎಫ್ಓ ರಾಘವೇಂದ್ರ ಅಗಸೆ ಹಾಗೂ ಸಿಬ್ಬಂದಿ ಹಾಸನಕ್ಕೆ ಕರೆದುಕೊಂಡು ಹೋಗಿದ್ದಾರೆ.</p>.<p>ಮೂರು ವರ್ಷದಿಂದ ಕಾಡಾನೆಗಳು ಮಠಸಾಗರ ಹಾಗೂ ಸುತ್ತಲಿನ ಗ್ರಾಮಗಳಲ್ಲಿ ಅಲೆದಾಡುತ್ತಿದ್ದು, ಆನೆ ದಾಳಿಯಿಂದ ಎರಡು ವರ್ಷದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಇದರಿಂದ ಜನರು ಸಂಚರಿಸಲು ಹೆದರುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>