ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಳ್ಳುಪೇಟೆ ಬಳಿ ರೈಲಿಗೆ ಸಿಲುಕಿ ಕಾಡಾನೆ ಸಾವು

Last Updated 19 ಮೇ 2021, 5:54 IST
ಅಕ್ಷರ ಗಾತ್ರ

ಹಾಸನ: ಸಕಲೇಶಪುರ ತಾಲ್ಲೂಕಿನ ಬಾಳ್ಳುಪೇಟೆ ಬಳಿ ಮಂಗಳವಾರ ರಾತ್ರಿ ರೈಲಿಗೆ ಸಿಲುಕಿ ಒಂಟಿ ಸಲಗ ಮೃತಪಟ್ಟಿದೆ.

ಬೆಂಗಳೂರಿನಿಂದ ಕಾರವಾರಕ್ಕೆ ತೆರಳುವ ರೈಲು ರಾತ್ರಿ 12ರ ಸುಮಾರಿಗೆ ಹಸಡೆ ಪಾಸ್ ಆಗುತ್ತದೆ. ಈ ಸಂದರ್ಭ ಅಡ್ಡ ಬಂದ ಆನೆಗೆ ರೈಲು ಡಿಕ್ಕಿ ಹೊಡೆದಿದೆ. ಪರಿಣಾಮ ರೈಲು ಸ್ಥಳದಲ್ಲೇ ನಿಂತಿದ್ದು, ಆನೆ ಮೃತಪಟ್ಟಿದೆ.

ಗುಂಪಿನಿಂದ ಬೇರ್ಪಟಿದ್ದ ಒಂಟಿ ಸಲಗ ಕೆಲ ದಿನಗಳಿಂದ ರೈಲ್ವೆ ಹಳಿ ಮೇಲೆ ಹಾಗೂ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾಣಿಸಿಕೊಂಡಿತ್ತು. ದುರಾದೃಷ್ಟವಸಾತ್, ನಿನ್ನೆ ರಾತ್ರಿ ರೈಲಿಗೆ ಸಿಲುಕಿ ಸಾವನ್ನಪ್ಪಿದೆ.

ಕ್ರೇನ್ ಮೂಲಕ ಆನೆ ಮೃತದೇಹವನ್ನು ತೆರವುಗೊಳಿಸಿ, ರೈಲು ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT