<p><strong>ಸಕಲೇಶಪುರ: </strong>ತಾಲ್ಲೂಕಿನ ಹಲಸುಲಿಗೆ ಗ್ರಾಮದಲ್ಲಿ ಗುರುವಾರ ಬೆಳಿಗ್ಗೆ 9 ಗಂಟೆ ಸುಮಾರಿಗೆ ಕಾಡಾನೆಗಳು ನುಗ್ಗಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.</p>.<p>ಗ್ರಾಮ ಪಂಚಾಯಿತಿ ಮುಂಭಾಗದ ಮುಖ್ಯ ರಸ್ತೆಯಲ್ಲೇ ಕೆಲವು ನಡೆದು ಬಂದರೆ, ಮತ್ತೊಂದು ಆನೆ ಜನನಿಬಿಡ ರಸ್ತೆಯಲ್ಲಿಯೇ ಸುಮಾರು ಅರ್ಧ ಕಿ.ಮೀ. ದೂರ ಸಾಗಿತು. ಪಾದಚಾರಿಗಳು, ಮನೆಯಂಗಳದಲ್ಲಿದ್ದವರು ಹೆದರಿ ಓಡಿ ಹೋದರು.</p>.<p>‘ಕಾಡಾನೆಗಳು ಭತ್ತದ ಸಸಿ ಮಡಿಗಳನ್ನು ತುಳಿಯುತ್ತವೆ. ಪೈರನ್ನು ತಿಂದುಹಾಕುತ್ತವೆ. ಕಟಾವು ಹಂತಕ್ಕೆ ಬಂದ ಬೆಳೆಯನ್ನೂ ನಾಶ ಮಾಡುತ್ತವೆ. ಹೀಗಾಗಿ ಭತ್ತ ಬೆಳೆಯುವುದನ್ನೇ ನಿಲ್ಲಿಸಬೇಕಾಗಿದೆ’ ಎಂದು ಹಲಸುಲಿಗೆಯ ರೈತ ಎಚ್.ವಿ. ಗಿರೀಶ್ ಅಲವತ್ತುಕೊಂಡರು.</p>.<p>‘ಆನೆಗಳು ಕದಲೇ ನಿಲ್ಲುವುದರಿಂದ ಕಾಫಿ ತೋಟಕ್ಕೆ ಹೋಗಲು ಹಿಂಜರಿಯುವಂತಾಗಿದೆ. ತೋಟದಲ್ಲಿ ಅನೇಕ ಕೆಲಸಗಳು ಬಾಕಿ ಉಳಿದಿವೆ. ಕಾರ್ಮಿಕರು ಕೆಲಸಕ್ಕೆ ಬರುತ್ತಿಲ್ಲ’ ಎಂದು ಹಸಿಡೆ ಗ್ರಾಮದ ರೈತರ ದಯಾನಂದ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಕಲೇಶಪುರ: </strong>ತಾಲ್ಲೂಕಿನ ಹಲಸುಲಿಗೆ ಗ್ರಾಮದಲ್ಲಿ ಗುರುವಾರ ಬೆಳಿಗ್ಗೆ 9 ಗಂಟೆ ಸುಮಾರಿಗೆ ಕಾಡಾನೆಗಳು ನುಗ್ಗಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.</p>.<p>ಗ್ರಾಮ ಪಂಚಾಯಿತಿ ಮುಂಭಾಗದ ಮುಖ್ಯ ರಸ್ತೆಯಲ್ಲೇ ಕೆಲವು ನಡೆದು ಬಂದರೆ, ಮತ್ತೊಂದು ಆನೆ ಜನನಿಬಿಡ ರಸ್ತೆಯಲ್ಲಿಯೇ ಸುಮಾರು ಅರ್ಧ ಕಿ.ಮೀ. ದೂರ ಸಾಗಿತು. ಪಾದಚಾರಿಗಳು, ಮನೆಯಂಗಳದಲ್ಲಿದ್ದವರು ಹೆದರಿ ಓಡಿ ಹೋದರು.</p>.<p>‘ಕಾಡಾನೆಗಳು ಭತ್ತದ ಸಸಿ ಮಡಿಗಳನ್ನು ತುಳಿಯುತ್ತವೆ. ಪೈರನ್ನು ತಿಂದುಹಾಕುತ್ತವೆ. ಕಟಾವು ಹಂತಕ್ಕೆ ಬಂದ ಬೆಳೆಯನ್ನೂ ನಾಶ ಮಾಡುತ್ತವೆ. ಹೀಗಾಗಿ ಭತ್ತ ಬೆಳೆಯುವುದನ್ನೇ ನಿಲ್ಲಿಸಬೇಕಾಗಿದೆ’ ಎಂದು ಹಲಸುಲಿಗೆಯ ರೈತ ಎಚ್.ವಿ. ಗಿರೀಶ್ ಅಲವತ್ತುಕೊಂಡರು.</p>.<p>‘ಆನೆಗಳು ಕದಲೇ ನಿಲ್ಲುವುದರಿಂದ ಕಾಫಿ ತೋಟಕ್ಕೆ ಹೋಗಲು ಹಿಂಜರಿಯುವಂತಾಗಿದೆ. ತೋಟದಲ್ಲಿ ಅನೇಕ ಕೆಲಸಗಳು ಬಾಕಿ ಉಳಿದಿವೆ. ಕಾರ್ಮಿಕರು ಕೆಲಸಕ್ಕೆ ಬರುತ್ತಿಲ್ಲ’ ಎಂದು ಹಸಿಡೆ ಗ್ರಾಮದ ರೈತರ ದಯಾನಂದ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>