<p><strong>ಹಾಸನ:</strong> ಜಿಲ್ಲೆಗೆ ಹೊಸ ಕಾಡಾನೆಗಳು ಪ್ರವೇಶಿಸುತ್ತಿದ್ದು, ರೈತರು ಹಾಗೂ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ. ಕೊಡಗು ಭಾಗದಿಂದ ಬಂದು ಅರಣ್ಯ ಪ್ರದೇಶ ಸೇರಿರುವ ದೈತ್ಯಾಕಾರದ ಒಂಟಿಸಲಗ ಹಾಗೂ ಎರಡು ಉದ್ದನೆಯ ದಂತಗಳನ್ನು ಹೊಂದಿರುವ ಸಲಗ ಕಾಣಿಸಿಕೊಂಡಿವೆ.</p>.<p>ಇನ್ನೊಂದೆಡೆ ಕಾಡಾನೆಗಳು ಹಿಂಡುಹಿಂಡಾಗಿ ಸಂಚರಿಸುತ್ತಿರುವುದು ಕಂಡುಬಂದಿದ್ದು, ಜಿಲ್ಲೆಯ ಬೇಲೂರು ತಾಲ್ಲೂಕಿನ ಬಿಕ್ಕೋಡು ಸಮೀಪ ಈ ಘಟನೆಗಳು ನಡೆದಿವೆ. ಆಹಾರ ಅರಸಿ ಕಾಡಾನೆ ಬೇಲೂರು ತಾಲ್ಲೂಕಿನ ಕಾಫಿ ತೋಟದೊಳಗಿರುವ ಮನೆಯ ಮುಂಭಾಗಕ್ಕೆ ಬಂದಿದ್ದು, ಕೆಲ ಸಮಯ ಮನೆಯ ಸಮೀಪದಲ್ಲೇ ಓಡಾಡಿದೆ. ಬಳಿಕ ಮತ್ತೆ ಕಾಫಿ ತೋಟದೊಳಗೆ ತೆರಳಿದೆ. ಈ ಪ್ರದೇಶದಲ್ಲಿ ಅರಣ್ಯ ಹಾಗೂ ಕಾಫಿ ತೋಟಗಳಲ್ಲೇ ಕಾಡಾನೆಗಳು ಹೆಚ್ಚಾಗಿ ಸಂಚರಿಸುತ್ತಿರುವುದು ಕಂಡುಬಂದಿದೆ.</p>.<p>ಕಾಡಾನೆಯ ಸಂಚಾರದ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಹಿಡಿಯಲಾಗಿದೆ. ಕಾಡಾನೆಗಳ ಹಿಂಡು, ರಾತ್ರಿಯಿಡೀ ಬೆಳೆಗಳನ್ನು ತಿಂದು, ತುಳಿದು ನಾಶ ಮಾಡಿ ಬಳಿಕ ಅರಣ್ಯದೊಳಗೆ ಮರಳಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ.</p>.<p>ಕಾಡಾನೆಗಳ ನಿರಂತರ ಕಾಟದಿಂದ ಬೇಲೂರು ತಾಲ್ಲೂಕಿನ ಕೆಲವು ಗ್ರಾಮಗಳ ಜನರು ತೀವ್ರ ತೊಂದರೆ ಅನುಭವಿಸುತ್ತಿದ್ದು, ಅರಣ್ಯ ಇಲಾಖೆಯಿಂದ ತಕ್ಷಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ:</strong> ಜಿಲ್ಲೆಗೆ ಹೊಸ ಕಾಡಾನೆಗಳು ಪ್ರವೇಶಿಸುತ್ತಿದ್ದು, ರೈತರು ಹಾಗೂ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ. ಕೊಡಗು ಭಾಗದಿಂದ ಬಂದು ಅರಣ್ಯ ಪ್ರದೇಶ ಸೇರಿರುವ ದೈತ್ಯಾಕಾರದ ಒಂಟಿಸಲಗ ಹಾಗೂ ಎರಡು ಉದ್ದನೆಯ ದಂತಗಳನ್ನು ಹೊಂದಿರುವ ಸಲಗ ಕಾಣಿಸಿಕೊಂಡಿವೆ.</p>.<p>ಇನ್ನೊಂದೆಡೆ ಕಾಡಾನೆಗಳು ಹಿಂಡುಹಿಂಡಾಗಿ ಸಂಚರಿಸುತ್ತಿರುವುದು ಕಂಡುಬಂದಿದ್ದು, ಜಿಲ್ಲೆಯ ಬೇಲೂರು ತಾಲ್ಲೂಕಿನ ಬಿಕ್ಕೋಡು ಸಮೀಪ ಈ ಘಟನೆಗಳು ನಡೆದಿವೆ. ಆಹಾರ ಅರಸಿ ಕಾಡಾನೆ ಬೇಲೂರು ತಾಲ್ಲೂಕಿನ ಕಾಫಿ ತೋಟದೊಳಗಿರುವ ಮನೆಯ ಮುಂಭಾಗಕ್ಕೆ ಬಂದಿದ್ದು, ಕೆಲ ಸಮಯ ಮನೆಯ ಸಮೀಪದಲ್ಲೇ ಓಡಾಡಿದೆ. ಬಳಿಕ ಮತ್ತೆ ಕಾಫಿ ತೋಟದೊಳಗೆ ತೆರಳಿದೆ. ಈ ಪ್ರದೇಶದಲ್ಲಿ ಅರಣ್ಯ ಹಾಗೂ ಕಾಫಿ ತೋಟಗಳಲ್ಲೇ ಕಾಡಾನೆಗಳು ಹೆಚ್ಚಾಗಿ ಸಂಚರಿಸುತ್ತಿರುವುದು ಕಂಡುಬಂದಿದೆ.</p>.<p>ಕಾಡಾನೆಯ ಸಂಚಾರದ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಹಿಡಿಯಲಾಗಿದೆ. ಕಾಡಾನೆಗಳ ಹಿಂಡು, ರಾತ್ರಿಯಿಡೀ ಬೆಳೆಗಳನ್ನು ತಿಂದು, ತುಳಿದು ನಾಶ ಮಾಡಿ ಬಳಿಕ ಅರಣ್ಯದೊಳಗೆ ಮರಳಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ.</p>.<p>ಕಾಡಾನೆಗಳ ನಿರಂತರ ಕಾಟದಿಂದ ಬೇಲೂರು ತಾಲ್ಲೂಕಿನ ಕೆಲವು ಗ್ರಾಮಗಳ ಜನರು ತೀವ್ರ ತೊಂದರೆ ಅನುಭವಿಸುತ್ತಿದ್ದು, ಅರಣ್ಯ ಇಲಾಖೆಯಿಂದ ತಕ್ಷಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>