<p><strong>ಸಕಲೇಶಪುರ</strong>: ತಾಲ್ಲೂಕಿನ ಮಠಸಾಗರ ಸಮೀಪ ಗುಂಪಿನಿಂದ ಬೇರ್ಪಟ್ಟು ನಿತ್ರಾಣಗೊಂಡ ಕಾಡಾನೆ ಮೃತಪಟ್ಟಿದೆ.</p>.<p>21 ಕಾಡಾನೆಗಳ ಗುಂಪಿನಲ್ಲಿದ್ದ 'ಕಾಂತಿ' ಎಂಬ ಹೆಸರಿನ ಆನೆ ಹಿಂಡಿನಿಂದ ಬೇರ್ಪಟ್ಟಿತ್ತು. ಐಬಿಸಿ ಕಾಫಿ ಎಸ್ಟೇಟ್ನಲ್ಲಿರುವ ನೀರಿನ ಹಳ್ಳದ ಬಳಿ ನೀರು ಕುಡಿಯಲು ಬಂದಾಗ, ನಿತ್ರಾಣಗೊಂಡು ಮಲಗಿತ್ತು.</p>.<p>ಇಟಿಎಫ್ ಮತ್ತು ಆರ್ಆರ್ಟಿ ಸಿಬ್ಬಂದಿ ಇದನ್ನು ಗಮನಿಸಿದ್ದು, ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಆನೆಗೆ ಚಿಕಿತ್ಸೆ ನೀಡಿದ್ದರು. ಆದರೆ, ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದೆ.</p>.<p>ಇತ್ತೀಚೆಗಷ್ಟೇ ಮರಿ ಆನೆಗೆ ಜನ್ಮ ನೀಡಿದ್ದ ಕಾಂತಿ, 21 ಕಾಡಾನೆಗಳ ಗುಂಪಿನ ನೇತೃತ್ವ ವಹಿಸಿತ್ತು. ಸಕಲೇಶಪುರ, ಆಲೂರು ಭಾಗದಲ್ಲಿ ಸಂಚಾರ ನಡೆಸುತ್ತಿತ್ತು. ಕಾಡಾನೆಗಳ ಗುಂಪಿನ ಚಲನವಲನ ಗಮನಿಸಲು ಅರಣ್ಯ ಇಲಾಖೆಯಿಂದ ಈಚೆಗೆ ಕಾಂತಿಗೆ ರೆಡಿಯೋ ಕಾಲರ್ ಅಳವಡಿಸಲಾಗಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಕಲೇಶಪುರ</strong>: ತಾಲ್ಲೂಕಿನ ಮಠಸಾಗರ ಸಮೀಪ ಗುಂಪಿನಿಂದ ಬೇರ್ಪಟ್ಟು ನಿತ್ರಾಣಗೊಂಡ ಕಾಡಾನೆ ಮೃತಪಟ್ಟಿದೆ.</p>.<p>21 ಕಾಡಾನೆಗಳ ಗುಂಪಿನಲ್ಲಿದ್ದ 'ಕಾಂತಿ' ಎಂಬ ಹೆಸರಿನ ಆನೆ ಹಿಂಡಿನಿಂದ ಬೇರ್ಪಟ್ಟಿತ್ತು. ಐಬಿಸಿ ಕಾಫಿ ಎಸ್ಟೇಟ್ನಲ್ಲಿರುವ ನೀರಿನ ಹಳ್ಳದ ಬಳಿ ನೀರು ಕುಡಿಯಲು ಬಂದಾಗ, ನಿತ್ರಾಣಗೊಂಡು ಮಲಗಿತ್ತು.</p>.<p>ಇಟಿಎಫ್ ಮತ್ತು ಆರ್ಆರ್ಟಿ ಸಿಬ್ಬಂದಿ ಇದನ್ನು ಗಮನಿಸಿದ್ದು, ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಆನೆಗೆ ಚಿಕಿತ್ಸೆ ನೀಡಿದ್ದರು. ಆದರೆ, ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದೆ.</p>.<p>ಇತ್ತೀಚೆಗಷ್ಟೇ ಮರಿ ಆನೆಗೆ ಜನ್ಮ ನೀಡಿದ್ದ ಕಾಂತಿ, 21 ಕಾಡಾನೆಗಳ ಗುಂಪಿನ ನೇತೃತ್ವ ವಹಿಸಿತ್ತು. ಸಕಲೇಶಪುರ, ಆಲೂರು ಭಾಗದಲ್ಲಿ ಸಂಚಾರ ನಡೆಸುತ್ತಿತ್ತು. ಕಾಡಾನೆಗಳ ಗುಂಪಿನ ಚಲನವಲನ ಗಮನಿಸಲು ಅರಣ್ಯ ಇಲಾಖೆಯಿಂದ ಈಚೆಗೆ ಕಾಂತಿಗೆ ರೆಡಿಯೋ ಕಾಲರ್ ಅಳವಡಿಸಲಾಗಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>