ಕಾಡಾನೆ ಸಮಸ್ಯೆ ಕೇವಲ ಸಕಲೇಶಪುರ, ಆಲೂರು, ಅರಕಲಗೂಡು ತಾಲ್ಲೂಕಿನ ಸಮಸ್ಯೆಯಲ್ಲ. ಇದು
ಜಿಲ್ಲೆಯ ಪ್ರಮುಖ ಸಮಸ್ಯೆ. ಕಾಡಾನೆಗಳಿಂದ ಈ ಭಾಗದಲ್ಲಿ ಇತ್ತೀಚೆಗೆ ಸಾವು–ನೋವುಗಳು ಹೆಚ್ಚಾಗಿವೆ.
ಕೆಲ ದಿನಗಳ ಹಿಂದೆ ಹಲಸುಲಿಗೆ ಗ್ರಾಮದ ಕಾರ್ಮಿಕ ಕಾಡಾನೆ ದಾಳಿಗೆ ಮೃತಪಟ್ಟಿದ್ದಾರೆ ಎಂದು
ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.