‘ಎರಡು ದಶಕಗಳಿಂದ ಆಲೂರು, ಸಕಲೇಶಪುರ, ಬೇಲೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ 50ಕ್ಕೂ ಹೆಚ್ಚು ಮಂದಿ ಜೀವ ಕಳೆದು ಕೊಂಡಿದ್ದಾರೆ. ನೂರಾರು ಮಂದಿ ಶಾಶ್ವತ ಅಂಗವಿಕಲರಾಗಿದ್ದಾರೆ. ಪ್ರತಿದಿನ ಲಕ್ಷಾಂತರ ರೂಪಾಯಿ ಮೌಲ್ಯದ ಬೆಳೆ ಹಾನಿ ಮಾಡುತ್ತಿವೆ. ಆದರೆ, ಕೇಂದ್ರ ಹಾಗೂ ರಾಜ್ಯ ಸರ್ಕಾರ ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿಲ್ಲ’ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.