<p><strong>ಅರಕಲಗೂಡು:</strong> ಆನೆಯ ದಂತವನ್ನು ಸಾಗಣೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಅರಣ್ಯ ವಿಭಾಗದ ಪೊಲೀಸರು ಬುಧವಾರ ಬಂಧಿಸಿ, ದಂತ ಹಾಗೂ ವಾಹನವನ್ನು ವಶಪಡಿಸಿ ಕೊಂಡಿದ್ದಾರೆ.</p>.<p>ಕೊಡಗಿನ ಗಡಿಭಾಗದ ಸೀಗೋಡು ಗ್ರಾಮದ ಬಳಿ ಪಿಎಸ್ಐ ಸುರೇಶ್ ಮತ್ತು ಸಿಬ್ಬಂದಿ ಖಚಿತ ವರ್ತಮಾನದ ಮೇರೆ ದಂತ ಸಾಗಣೆ ಮಾಡುತ್ತಿದ್ದ ವಿರಾಜಪೇಟೆಯವರೆನ್ನಲಾದ ಜೋಷ್ ಮತ್ತು ಪ್ರಶಾಂತ್ ಎಂಬುವವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು.</p>.<p>ನ್ಯಾಯಾಲಯ ಪ್ರಕರಣವನ್ನು ಅರಣ್ಯ ಇಲಾಖೆ ವಶಕ್ಕೆ ನೀಡಿದೆ. ಆರೋಪಿಗಳನ್ನು ಇಲಾಖೆ ವಶಕ್ಕೆ ಪಡೆದಿದ್ದು, ದಂತವನ್ನು ಮಡಿಕೇರಿಯಿಂದ ಮೈಸೂರಿಗೆ ಸಾಗಣೆ ಮಾಡಲಾಗುತ್ತಿದ್ದರು ಎಂಬ ಮಾಹಿತಿ ದೊರೆತಿದೆ. ಈ ಕುರಿತು ತನಿಖೆ ನಡೆಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಸಕಲೇಶಪುರ ಎಸಿಎಫ್ ಜಿ.ಸಿ.ಲಿಂಗರಾಜ್ ಸುದ್ದಿಗಾರರಿಗೆ ತಿಳಿಸಿದರು.</p>.<p>ವಲಯ ಅರಣ್ಯಾಧಿಕಾರಿ ಕಾವ್ಯಶ್ರೀ, ಪೊಲೀಸ್ ಅರಣ್ಯ ವಿಭಾಗದ ಪಿಎಸ್ಐ ಸುರೇಶ್, ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅರಕಲಗೂಡು:</strong> ಆನೆಯ ದಂತವನ್ನು ಸಾಗಣೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಅರಣ್ಯ ವಿಭಾಗದ ಪೊಲೀಸರು ಬುಧವಾರ ಬಂಧಿಸಿ, ದಂತ ಹಾಗೂ ವಾಹನವನ್ನು ವಶಪಡಿಸಿ ಕೊಂಡಿದ್ದಾರೆ.</p>.<p>ಕೊಡಗಿನ ಗಡಿಭಾಗದ ಸೀಗೋಡು ಗ್ರಾಮದ ಬಳಿ ಪಿಎಸ್ಐ ಸುರೇಶ್ ಮತ್ತು ಸಿಬ್ಬಂದಿ ಖಚಿತ ವರ್ತಮಾನದ ಮೇರೆ ದಂತ ಸಾಗಣೆ ಮಾಡುತ್ತಿದ್ದ ವಿರಾಜಪೇಟೆಯವರೆನ್ನಲಾದ ಜೋಷ್ ಮತ್ತು ಪ್ರಶಾಂತ್ ಎಂಬುವವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು.</p>.<p>ನ್ಯಾಯಾಲಯ ಪ್ರಕರಣವನ್ನು ಅರಣ್ಯ ಇಲಾಖೆ ವಶಕ್ಕೆ ನೀಡಿದೆ. ಆರೋಪಿಗಳನ್ನು ಇಲಾಖೆ ವಶಕ್ಕೆ ಪಡೆದಿದ್ದು, ದಂತವನ್ನು ಮಡಿಕೇರಿಯಿಂದ ಮೈಸೂರಿಗೆ ಸಾಗಣೆ ಮಾಡಲಾಗುತ್ತಿದ್ದರು ಎಂಬ ಮಾಹಿತಿ ದೊರೆತಿದೆ. ಈ ಕುರಿತು ತನಿಖೆ ನಡೆಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಸಕಲೇಶಪುರ ಎಸಿಎಫ್ ಜಿ.ಸಿ.ಲಿಂಗರಾಜ್ ಸುದ್ದಿಗಾರರಿಗೆ ತಿಳಿಸಿದರು.</p>.<p>ವಲಯ ಅರಣ್ಯಾಧಿಕಾರಿ ಕಾವ್ಯಶ್ರೀ, ಪೊಲೀಸ್ ಅರಣ್ಯ ವಿಭಾಗದ ಪಿಎಸ್ಐ ಸುರೇಶ್, ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>