ತಾಲ್ಲೂಕಿನ ಮೊಸಳೆ ಹೊಸಳ್ಳಿಯಲ್ಲಿ ಐಟಿಐ ಕಾಲೇಜು ಉದ್ಘಾಟಿಸಿ ಮಾತನಾಡಿದ ಅವರು, "ಬಡವರು, ಕೂಲಿ ಕಾರ್ಮಿಕರು ಮಕ್ಕಳೂ ಇಂಗ್ಲಿಷ್ ಮಾಧ್ಯಮದಲ್ಲಿ ಓದಬೇಕು. ಅದಕ್ಕಾಗಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಪ್ರತಿ ತಾಲ್ಲೂಕಿನಲ್ಲಿ ನಾಲ್ಕು ಸರ್ಕಾರಿ ಶಾಲೆ ತೆರೆಯಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಜತೆ ಚರ್ಚಿಸಲಾಗಿದೆ.