‘ರಸಗೊಬ್ಬರ ಖರೀದಿಯಲ್ಲಿ ಭಾರೀ ಅವ್ಯವಹಾರ ನಡೆದಿದ್ದು, ಕೆಲವು ಕೃಷಿ ಅಧಿಕಾರಿಗಳು ಸಹ ಭಾಗಿಯಾಗಿದ್ದಾರೆ ಎಂಬ ಮಾಹಿತಿ ಇದೆ. ರಸಗೊಬ್ಬರ ದಾಸ್ತಾನು ಮಾಡಿರುವ ಕುರಿತು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು’ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಜೆ.ಎಸ್.ಸುರೇಶ್ ಆಗ್ರಹಿಸಿದ್ದಾರೆ.
ದಾಳಿಯಲ್ಲಿ ಡಿವೈಎಸ್ಪಿ ಪುಟ್ಟಸ್ವಾಮಿಗೌಡ, ಸಿಪಿಐ ಸತ್ಯನಾರಾಯಣ್, ಜಂಟಿ ಕೃಷಿ ನಿರ್ದೇಶಕ ಮಧುಸೂಧನ್, ರೈತ ಸಂಘದ ಅಧ್ಯಕ್ಷ ಎಂ.ಟಿ. ಗಿರೀಶ್ ಗೌಡ, ಮುಖಂಡರಾದ ಪುನೀತ್, ಕೃಷ್ಣೇಗೌಡ, ಪಾಂಡು, ವಕೀಲ ಪ್ರದೀಪ್ ಪಾಲ್ಗೊಂಡಿದ್ದರು.