ವಿಶೇಷ ಅರ್ಥಿಕ ವಲಯದಲ್ಲಿ ಮೀಸಲಿಟ್ಟಿರುವ 280 ಎಕರೆ ಜಮೀನು ಹಿಂಪಡೆದು, ಇತರೆ ಕೈಗಾರಿಕೆಗಳ ಸ್ಥಾಪನೆಗೆ ಕ್ರಮ ವಹಿಸಲಾಗುವುದು. ಕೈಗಾರಿಕಾ ಸಚಿವರ ನೇತೃತ್ವದಲ್ಲಿ ನಿಯಮಗಳ ರಚನೆಯಾಗುತ್ತಿದೆ. ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆಯಾಗಿದೆ.ಕೈಗಾರಿಕಾ ಬಡಾವಣೆಯಲ್ಲಿ ಜಾಗ ಪಡೆದು ಹಲವು ವರ್ಷಗಳಾದರೂ ಯಾವುದೇ ಚಟುವಟಿಕೆಗಳನ್ನು ನಡೆಸದೇ ಇರುವವರನ್ನು ಗುರುತಿಸಿ ನೋಟಿಸ್ ನೀಡಿ, ಜಮೀನು ಹಿಂಪಡೆದು ನಿಜವಾಗಿಯೂ ಕೈಗಾರಿಕೆ ಪ್ರಾರಂಭ ಮಾಡುವವರಿಗೆ ಮಂಜೂರು ಮಾಡಲಾಗುವುದು . ಈಗಾಗಲೇ ಐದು ಪ್ರಕರಣಗಳಲ್ಲಿ ಭೂಮಿ ವಾಪಸ್ ಪಡೆಯಲಾಗಿದೆ ಎಂದು ವಿವರಿಸಿದರು.