<p><strong>ಹೊಳೆನರಸೀಪುರ (ಹಾಸನ): </strong>ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೊನಿಯಲ್ಲಿರುವ ಗ್ರೀನ್ವುಡ್ ಇಂಗ್ಲಿಷ್ ಮಾಧ್ಯಮ ಶಾಲೆಯಲ್ಲಿ, ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಅರ್ಧವಾರ್ಷಿಕ ಪರೀಕ್ಷೆ ನಡೆಸಲಾಗಿದ್ದು, ದ್ವಿತೀಯ ಅವಧಿಯ ಶುಲ್ಕ ಕಟ್ಟದ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಬರೆಯಲು ಅವಕಾಶ ನೀಡದೇ ಹೊರಗೆ ನಿಲ್ಲಿಸಲಾಗಿತ್ತು ಎಂದು ತಿಳಿದುಬಂದಿದೆ.</p>.<p>'ಮೊದಲ ಕಂತಿನ ಹಣವನ್ನು ಪಾವತಿಸಿದ್ದೇವೆ. ಎರಡು ದಿನದಿಂದ ಪರೀಕ್ಷೆ ನಡೆಸಿ, ಇಂದು ಹೊರಗೆ ನಿಲ್ಲಿಸಿದ್ದಾರೆ. ಪರೀಕ್ಷೆ ಆರಂಭಿಸುವ ಮುನ್ನವೇ ತಿಳಿಸಿದ್ದರೆ ಹಣ ಕಟ್ಟುತ್ತಿದ್ದೆವು. ಆದರೆ, ಈ ಬಗ್ಗೆ ಒಂದು ಮೆಸೇಜ್ ಕೂಡ ಮಾಡಿಲ್ಲ. ಇನ್ನೊಂದು ವಾರದಲ್ಲಿ ಹಣ ಕಟ್ಟದೇ ಇದ್ದರೆ ಆನ್ಲೈನ್ ತರಗತಿಯನ್ನು ಸ್ಥಗಿತಗೊಳಿಸುವುದಾಗಿ ಹೇಳಿದ್ದಾರೆ. ಆಡಳಿತ ಮಂಡಳಿಯ ಈ ರೀತಿಯ ವರ್ತನೆ ಸರಿಯಲ್ಲ’ ಎಂದು ಪೋಷಕರೊಬ್ಬರು ದೂರಿದರು.</p>.<p>ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದರಿಂದ, ನಂತರ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ.</p>.<p>ಆಡಳಿತ ಮಂಡಳಿ ಸೂಚನೆ ಮೇರೆಗೆ ಪರೀಕ್ಷೆ ನಡೆಸಿದ್ದಾಗಿ ಶಾಲೆಯ ಮುಖ್ಯಶಿಕ್ಷಕಿ ಮಂಜುಳಾ ತಿಳಿಸಿದ್ದಾರೆ.</p>.<p>ಬಿಇಒ ಲೋಕೇಶ್ ಮಾತನಾಡಿ, ‘ಪರೀಕ್ಷೆ ನಡೆಸಲು ನಮ್ಮಿಂದ ಅನುಮತಿ ಪಡೆದಿಲ್ಲ. ಸರ್ಕಾರದ ಆದೇಶವನ್ನು ಕಡೆಗಣಿಸಿ, ಪರೀಕ್ಷೆ ನಡೆಸುತ್ತಿರುವ ಬಗ್ಗೆ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುತ್ತೇವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಳೆನರಸೀಪುರ (ಹಾಸನ): </strong>ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೊನಿಯಲ್ಲಿರುವ ಗ್ರೀನ್ವುಡ್ ಇಂಗ್ಲಿಷ್ ಮಾಧ್ಯಮ ಶಾಲೆಯಲ್ಲಿ, ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಅರ್ಧವಾರ್ಷಿಕ ಪರೀಕ್ಷೆ ನಡೆಸಲಾಗಿದ್ದು, ದ್ವಿತೀಯ ಅವಧಿಯ ಶುಲ್ಕ ಕಟ್ಟದ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಬರೆಯಲು ಅವಕಾಶ ನೀಡದೇ ಹೊರಗೆ ನಿಲ್ಲಿಸಲಾಗಿತ್ತು ಎಂದು ತಿಳಿದುಬಂದಿದೆ.</p>.<p>'ಮೊದಲ ಕಂತಿನ ಹಣವನ್ನು ಪಾವತಿಸಿದ್ದೇವೆ. ಎರಡು ದಿನದಿಂದ ಪರೀಕ್ಷೆ ನಡೆಸಿ, ಇಂದು ಹೊರಗೆ ನಿಲ್ಲಿಸಿದ್ದಾರೆ. ಪರೀಕ್ಷೆ ಆರಂಭಿಸುವ ಮುನ್ನವೇ ತಿಳಿಸಿದ್ದರೆ ಹಣ ಕಟ್ಟುತ್ತಿದ್ದೆವು. ಆದರೆ, ಈ ಬಗ್ಗೆ ಒಂದು ಮೆಸೇಜ್ ಕೂಡ ಮಾಡಿಲ್ಲ. ಇನ್ನೊಂದು ವಾರದಲ್ಲಿ ಹಣ ಕಟ್ಟದೇ ಇದ್ದರೆ ಆನ್ಲೈನ್ ತರಗತಿಯನ್ನು ಸ್ಥಗಿತಗೊಳಿಸುವುದಾಗಿ ಹೇಳಿದ್ದಾರೆ. ಆಡಳಿತ ಮಂಡಳಿಯ ಈ ರೀತಿಯ ವರ್ತನೆ ಸರಿಯಲ್ಲ’ ಎಂದು ಪೋಷಕರೊಬ್ಬರು ದೂರಿದರು.</p>.<p>ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದರಿಂದ, ನಂತರ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ.</p>.<p>ಆಡಳಿತ ಮಂಡಳಿ ಸೂಚನೆ ಮೇರೆಗೆ ಪರೀಕ್ಷೆ ನಡೆಸಿದ್ದಾಗಿ ಶಾಲೆಯ ಮುಖ್ಯಶಿಕ್ಷಕಿ ಮಂಜುಳಾ ತಿಳಿಸಿದ್ದಾರೆ.</p>.<p>ಬಿಇಒ ಲೋಕೇಶ್ ಮಾತನಾಡಿ, ‘ಪರೀಕ್ಷೆ ನಡೆಸಲು ನಮ್ಮಿಂದ ಅನುಮತಿ ಪಡೆದಿಲ್ಲ. ಸರ್ಕಾರದ ಆದೇಶವನ್ನು ಕಡೆಗಣಿಸಿ, ಪರೀಕ್ಷೆ ನಡೆಸುತ್ತಿರುವ ಬಗ್ಗೆ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುತ್ತೇವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>