ಗರ್ಭಿಣಿ, ಬಾಣಂತಿಯರು ಮತ್ತು ಮಕ್ಕಳಿಗೆ ಕಳಪೆ ಗುಣಮಟ್ಟದ ಆಹಾರಪೂರೈಕೆ ಮಾಡಲಾಗುತ್ತಿದೆ ಎಂಬ ಆರೋಪದ ಮೇರೆಗೆ ಮಹಿಳಾ ಮತ್ತು ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಪರಶುರಾಮ್ ಶೆಟ್ಟಪ್ಪನವರ್, ಜಿಲ್ಲಾ ಆಹಾರ ಮತ್ತು ಸುರಕ್ಷತಾ ಅಂಕಿತ ಅಧಿಕಾರಿ ಅನಿಲ್ ಧವನ್ ಮತ್ತು ಸಿಬ್ಬಂದಿ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದಾಗಸಾಸಿವೆ, ಕಡಲೆಬೇಳೆ, ಹೆಸರು ಕಾಳು ಪ್ಯಾಕೆಟ್ಗಳ ಅವಧಿ ಕಳೆದ ಮಾರ್ಚ್, ಏಪ್ರಿಲ್ಗೆ ಮುಗಿದಿರುವುದು ಕಂಡು ಬಂತು. ಆ ಪದಾರ್ಥಗಳನ್ನು ವಶಪಡಿಸಿಕೊಂಡರು.