<p><strong>ಹಾಸನ</strong>: ನಗರದ ಕುವೆಂಪು ಬಡಾವಣೆಯಲ್ಲಿರುವ ಮಹಿಳಾ ಮತ್ತು ಮಕ್ಕಳಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ ಗೋದಾಮಿನಲ್ಲಿ ಅವಧಿ ಮುಗಿದ ಆಹಾರ ಪದಾರ್ಥ ಪತ್ತೆಯಾಗಿದೆ.</p>.<p>ಗರ್ಭಿಣಿ, ಬಾಣಂತಿಯರು ಮತ್ತು ಮಕ್ಕಳಿಗೆ ಕಳಪೆ ಗುಣಮಟ್ಟದ ಆಹಾರಪೂರೈಕೆ ಮಾಡಲಾಗುತ್ತಿದೆ ಎಂಬ ಆರೋಪದ ಮೇರೆಗೆ ಮಹಿಳಾ ಮತ್ತು ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಪರಶುರಾಮ್ ಶೆಟ್ಟಪ್ಪನವರ್, ಜಿಲ್ಲಾ ಆಹಾರ ಮತ್ತು ಸುರಕ್ಷತಾ ಅಂಕಿತ ಅಧಿಕಾರಿ ಅನಿಲ್ ಧವನ್ ಮತ್ತು ಸಿಬ್ಬಂದಿ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದಾಗಸಾಸಿವೆ, ಕಡಲೆಬೇಳೆ, ಹೆಸರು ಕಾಳು ಪ್ಯಾಕೆಟ್ಗಳ ಅವಧಿ ಕಳೆದ ಮಾರ್ಚ್, ಏಪ್ರಿಲ್ಗೆ ಮುಗಿದಿರುವುದು ಕಂಡು ಬಂತು. ಆ ಪದಾರ್ಥಗಳನ್ನು ವಶಪಡಿಸಿಕೊಂಡರು.</p>.<p>‘ಗೋದಾಮಿಗೆ ಯಾರು ಆಹಾರ ಪದಾರ್ಥ ಪೂರೈಕೆ ಮಾಡಿದ್ದಾರೆ ಎಂಬುದನ್ನು ಪರಿಶೀಲಿಸಲಾಗುವುದು. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಎಂದು ಅಧಿಕಾರಿಗಳು ಭರವಸೆ ನೀಡಿದರು.</p>.<p>‘ತಾಲ್ಲೂಕು ಮಹಿಳಾ ಸಿಡಿಪಿಗೆ ದೃಷ್ಟಿ ದೋಷ ಇರುವುದನ್ನೇ ಲಾಭಮಾಡಿಕೊಂಡಿರುವ ಅನೇಕರು ವ್ಯವಹಾರ ನಡೆಸಿದ್ದಾರೆ. ಹಿಂದೆಯೂ ಪೌಷ್ಟಿಕ ಆಹಾರ ಪೂರೈಕೆಯಲ್ಲಿ ಅವ್ಯವಹಾರ ನಡೆದಿರುವ ಆರೋಪ ಕೇಳಿ ಬಂದಿತ್ತು.ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಕ್ರಮ ತೆಗೆದುಕೊಂಡಿಲ್ಲ ’ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರೇವಣ್ಣ ಆರೋಪಿಸಿದರು.</p>.<p>‘ಈ ವಿಚಾರ ಗಮನಕ್ಕೆ ಬರುತ್ತಿದ್ದಂತೆ ಅಧಿಕಾರಿಗಳನ್ನು ಗೋದಾಮಿಗೆ ಕಳುಹಿಸಲಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಜವಾಬ್ದಾರಿಯಿಂದ ಕೆಲಸ ಮಾಡಬೇಕು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೂ ನಿರ್ದೇಶನ ನೀಡಲಾಗಿದೆ. ಕರ್ತವ್ಯ ಲೋಪ ಎಸಗಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಎಂದು ಶಾಸಕ ಪ್ರೀತಂ ಗೌಡ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ</strong>: ನಗರದ ಕುವೆಂಪು ಬಡಾವಣೆಯಲ್ಲಿರುವ ಮಹಿಳಾ ಮತ್ತು ಮಕ್ಕಳಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ ಗೋದಾಮಿನಲ್ಲಿ ಅವಧಿ ಮುಗಿದ ಆಹಾರ ಪದಾರ್ಥ ಪತ್ತೆಯಾಗಿದೆ.</p>.<p>ಗರ್ಭಿಣಿ, ಬಾಣಂತಿಯರು ಮತ್ತು ಮಕ್ಕಳಿಗೆ ಕಳಪೆ ಗುಣಮಟ್ಟದ ಆಹಾರಪೂರೈಕೆ ಮಾಡಲಾಗುತ್ತಿದೆ ಎಂಬ ಆರೋಪದ ಮೇರೆಗೆ ಮಹಿಳಾ ಮತ್ತು ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಪರಶುರಾಮ್ ಶೆಟ್ಟಪ್ಪನವರ್, ಜಿಲ್ಲಾ ಆಹಾರ ಮತ್ತು ಸುರಕ್ಷತಾ ಅಂಕಿತ ಅಧಿಕಾರಿ ಅನಿಲ್ ಧವನ್ ಮತ್ತು ಸಿಬ್ಬಂದಿ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದಾಗಸಾಸಿವೆ, ಕಡಲೆಬೇಳೆ, ಹೆಸರು ಕಾಳು ಪ್ಯಾಕೆಟ್ಗಳ ಅವಧಿ ಕಳೆದ ಮಾರ್ಚ್, ಏಪ್ರಿಲ್ಗೆ ಮುಗಿದಿರುವುದು ಕಂಡು ಬಂತು. ಆ ಪದಾರ್ಥಗಳನ್ನು ವಶಪಡಿಸಿಕೊಂಡರು.</p>.<p>‘ಗೋದಾಮಿಗೆ ಯಾರು ಆಹಾರ ಪದಾರ್ಥ ಪೂರೈಕೆ ಮಾಡಿದ್ದಾರೆ ಎಂಬುದನ್ನು ಪರಿಶೀಲಿಸಲಾಗುವುದು. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಎಂದು ಅಧಿಕಾರಿಗಳು ಭರವಸೆ ನೀಡಿದರು.</p>.<p>‘ತಾಲ್ಲೂಕು ಮಹಿಳಾ ಸಿಡಿಪಿಗೆ ದೃಷ್ಟಿ ದೋಷ ಇರುವುದನ್ನೇ ಲಾಭಮಾಡಿಕೊಂಡಿರುವ ಅನೇಕರು ವ್ಯವಹಾರ ನಡೆಸಿದ್ದಾರೆ. ಹಿಂದೆಯೂ ಪೌಷ್ಟಿಕ ಆಹಾರ ಪೂರೈಕೆಯಲ್ಲಿ ಅವ್ಯವಹಾರ ನಡೆದಿರುವ ಆರೋಪ ಕೇಳಿ ಬಂದಿತ್ತು.ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಕ್ರಮ ತೆಗೆದುಕೊಂಡಿಲ್ಲ ’ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರೇವಣ್ಣ ಆರೋಪಿಸಿದರು.</p>.<p>‘ಈ ವಿಚಾರ ಗಮನಕ್ಕೆ ಬರುತ್ತಿದ್ದಂತೆ ಅಧಿಕಾರಿಗಳನ್ನು ಗೋದಾಮಿಗೆ ಕಳುಹಿಸಲಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಜವಾಬ್ದಾರಿಯಿಂದ ಕೆಲಸ ಮಾಡಬೇಕು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೂ ನಿರ್ದೇಶನ ನೀಡಲಾಗಿದೆ. ಕರ್ತವ್ಯ ಲೋಪ ಎಸಗಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಎಂದು ಶಾಸಕ ಪ್ರೀತಂ ಗೌಡ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>