<p><strong>ಹಾಸನ:</strong> ತೆಂಗು ಉತ್ಪನ್ನಗಳನ್ನು ವಿದೇಶಕ್ಕೆ ರಫ್ತು ಮಾಡಲು ಕೇಂದ್ರ ಅನುಮತಿ ನೀಡಿದೆ ಎಂದು ಕೇಂದ್ರಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.</p>.<p>ಈವರೆಗೂ ದೇಶದೊಳಗೆ ಮಾತ್ರ ತೆಂಗು ಉತ್ಪನ್ನಗಳ ಮಾರಾಟಕ್ಕೆ ಅವಕಾಶ ಇತ್ತು. ವಿದೇಶಕ್ಕೆ ರಫ್ತುಮಾಡುವುದರಿಂದ ಕೊಬ್ಬರಿ ದರ ಹೆಚ್ಚುವುದರ ಜತೆಗೆ ತೆಂಗು ಬೆಳೆಗಾರರಿಗೂ ಅನುಕೂಲವಾಗಲಿದೆ.ತೆಂಗು ಅಭಿವೃದ್ಧಿ ಮಂಡಳಿಗೆ ಐಎಎಸ್ ಅಧಿಕಾರಿಗಳು ಮಾತ್ರ ಅಧ್ಯಕ್ಷರಾಗುತ್ತಿದ್ದರು. ಇನ್ನು ಮುಂದೆ ರೈತರುಅಧ್ಯಕ್ಷರಾಗಬಹುದು ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>ನಕಲಿ ಬಿತ್ತನೆ ಬೀಜ, ಗೊಬ್ಬರ ಮಾರಾಟ ಮಾಡುವವರಿಗೆ ಕಠಿಣ ಶಿಕ್ಷೆ ವಿಧಿಸುವುದರ ಜತೆ ಅಂತಹಕಂಪನಿಗಳನ್ನು ಕಪ್ಪುಪಟ್ಟಿಗೆ ಸೇರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ದೇಶದಲ್ಲಿ ಆಹಾರಉತ್ಪಾದನೆ ಹೆಚ್ಚಾಗಿದೆ. ಆಲೂಗಡ್ಡೆ, ಶುಂಠಿ, ಅರಿಶಿನ ಸೇರಿದಂತೆ ಇತರೆ ಪದಾರ್ಥಗಳು ರಫ್ತು ಮಾಡಲುಬೇಕಾದ ತಂತ್ರಜ್ಞಾನ ಬಗ್ಗೆ ರೈತರಿಗೆ ಮಾಹಿತಿ ಮತ್ತು ಸಹಕಾರ ನೀಡಲಾಗುವುದು. ಎಪಿಎಂಸಿ ಕಾಯ್ದೆರದ್ದಾದ ಬಳಿಕ ಮುಂಬೈ ಟ್ರಕ್ ಮಂಡ್ಯ ಬರಲಾರಂಭಿಸಿವೆ. ಮಂಡ್ಯ ಬೆಲ್ಲ ಮುಂಬೈಗೆ ರಫ್ತು ಆಗುತ್ತಿದೆ<br />ಎಂದು ವಿವರಿಸಿದರು.</p>.<p>ಕೃಷಿ ರಫ್ತಿಗೆ ಆದ್ಯತೆ ನೀಡುವ ಸಲುವಾಗಿ ಪ್ರತ್ಯೇಕ ತಂಡ ನೀಡುವಂತೆ ಕೈಗಾರಿಕೆ ಸಚಿವರಿಗೆ ಮನವಿಮಾಡಲಾಗಿದೆ. ಬೆಳೆ ನಾಶವಾದ ಎರಡು ತಿಂಗಳಲ್ಲಿ ಕೇಂದ್ರಕ್ಕೆ ಮಾಹಿತಿ ನೀಡಬೇಕು. ಫೋಟೋ ತೆಗೆದುಆ್ಯಪ್ನಲ್ಲಿ ಅಪ್ಲೋಡ್ ಮಾಡಬೇಕು. ಎಷ್ಟೋ ರೈತರಿಗೆ ಬೆಳೆ ವಿಮೆ ಬಗ್ಗೆ ಮಾಹಿತಿ ಕೊರತೆ ಇದೆಎಂದರು.</p>.<p>ಅಫ್ಗಾನಿಸ್ತಾನದಲ್ಲಿರುವ ಭಾರತೀಯರನ್ನು ಕರೆತರಲು ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದೆ. ತಾಲಿ ಬಾನ್ ಸಂಘಟನೆ ಪ್ರಪಂಚಕ್ಕೆ ಭಯ ಹುಟ್ಟಿಸುವ ಕೆಲಸ ಮಾಡುತ್ತಿದೆ. ಇದು ಒಳ್ಳೆಯ ಬೆಳವಣಿಗೆ ಅಲ್ಲ ಎಂದರು.</p>.<p>ಮೇಕೆದಾಟು ಯೋಜನೆಯಿಂದ ಯಾರಿಗೂ ನಷ್ಟವಾಗುವುದಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ:</strong> ತೆಂಗು ಉತ್ಪನ್ನಗಳನ್ನು ವಿದೇಶಕ್ಕೆ ರಫ್ತು ಮಾಡಲು ಕೇಂದ್ರ ಅನುಮತಿ ನೀಡಿದೆ ಎಂದು ಕೇಂದ್ರಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.</p>.<p>ಈವರೆಗೂ ದೇಶದೊಳಗೆ ಮಾತ್ರ ತೆಂಗು ಉತ್ಪನ್ನಗಳ ಮಾರಾಟಕ್ಕೆ ಅವಕಾಶ ಇತ್ತು. ವಿದೇಶಕ್ಕೆ ರಫ್ತುಮಾಡುವುದರಿಂದ ಕೊಬ್ಬರಿ ದರ ಹೆಚ್ಚುವುದರ ಜತೆಗೆ ತೆಂಗು ಬೆಳೆಗಾರರಿಗೂ ಅನುಕೂಲವಾಗಲಿದೆ.ತೆಂಗು ಅಭಿವೃದ್ಧಿ ಮಂಡಳಿಗೆ ಐಎಎಸ್ ಅಧಿಕಾರಿಗಳು ಮಾತ್ರ ಅಧ್ಯಕ್ಷರಾಗುತ್ತಿದ್ದರು. ಇನ್ನು ಮುಂದೆ ರೈತರುಅಧ್ಯಕ್ಷರಾಗಬಹುದು ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>ನಕಲಿ ಬಿತ್ತನೆ ಬೀಜ, ಗೊಬ್ಬರ ಮಾರಾಟ ಮಾಡುವವರಿಗೆ ಕಠಿಣ ಶಿಕ್ಷೆ ವಿಧಿಸುವುದರ ಜತೆ ಅಂತಹಕಂಪನಿಗಳನ್ನು ಕಪ್ಪುಪಟ್ಟಿಗೆ ಸೇರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ದೇಶದಲ್ಲಿ ಆಹಾರಉತ್ಪಾದನೆ ಹೆಚ್ಚಾಗಿದೆ. ಆಲೂಗಡ್ಡೆ, ಶುಂಠಿ, ಅರಿಶಿನ ಸೇರಿದಂತೆ ಇತರೆ ಪದಾರ್ಥಗಳು ರಫ್ತು ಮಾಡಲುಬೇಕಾದ ತಂತ್ರಜ್ಞಾನ ಬಗ್ಗೆ ರೈತರಿಗೆ ಮಾಹಿತಿ ಮತ್ತು ಸಹಕಾರ ನೀಡಲಾಗುವುದು. ಎಪಿಎಂಸಿ ಕಾಯ್ದೆರದ್ದಾದ ಬಳಿಕ ಮುಂಬೈ ಟ್ರಕ್ ಮಂಡ್ಯ ಬರಲಾರಂಭಿಸಿವೆ. ಮಂಡ್ಯ ಬೆಲ್ಲ ಮುಂಬೈಗೆ ರಫ್ತು ಆಗುತ್ತಿದೆ<br />ಎಂದು ವಿವರಿಸಿದರು.</p>.<p>ಕೃಷಿ ರಫ್ತಿಗೆ ಆದ್ಯತೆ ನೀಡುವ ಸಲುವಾಗಿ ಪ್ರತ್ಯೇಕ ತಂಡ ನೀಡುವಂತೆ ಕೈಗಾರಿಕೆ ಸಚಿವರಿಗೆ ಮನವಿಮಾಡಲಾಗಿದೆ. ಬೆಳೆ ನಾಶವಾದ ಎರಡು ತಿಂಗಳಲ್ಲಿ ಕೇಂದ್ರಕ್ಕೆ ಮಾಹಿತಿ ನೀಡಬೇಕು. ಫೋಟೋ ತೆಗೆದುಆ್ಯಪ್ನಲ್ಲಿ ಅಪ್ಲೋಡ್ ಮಾಡಬೇಕು. ಎಷ್ಟೋ ರೈತರಿಗೆ ಬೆಳೆ ವಿಮೆ ಬಗ್ಗೆ ಮಾಹಿತಿ ಕೊರತೆ ಇದೆಎಂದರು.</p>.<p>ಅಫ್ಗಾನಿಸ್ತಾನದಲ್ಲಿರುವ ಭಾರತೀಯರನ್ನು ಕರೆತರಲು ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದೆ. ತಾಲಿ ಬಾನ್ ಸಂಘಟನೆ ಪ್ರಪಂಚಕ್ಕೆ ಭಯ ಹುಟ್ಟಿಸುವ ಕೆಲಸ ಮಾಡುತ್ತಿದೆ. ಇದು ಒಳ್ಳೆಯ ಬೆಳವಣಿಗೆ ಅಲ್ಲ ಎಂದರು.</p>.<p>ಮೇಕೆದಾಟು ಯೋಜನೆಯಿಂದ ಯಾರಿಗೂ ನಷ್ಟವಾಗುವುದಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>