ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಪಿ.ಶಿವಕುಮಾರ್ ಮಾತನಾಡಿ, ನಿತ್ಯ ಜಿಲ್ಲೆ ಹಾಗೂ ಹೊರ ಜಿಲ್ಲೆಗಳಿಂದ
ನೂರಾರು ರೈತರು ಕೃಷಿ ಉತ್ಪನ್ನಗಳನ್ನು ಮಾರಾಟ ಮಾಡಲು ಎಪಿಎಂಸಿಗೆ ಆಗಮಿಸುತ್ತಾರೆ. ಆದರೆ,
ಮಾರುಕಟ್ಟೆಯಲ್ಲಿ ರೈತರ ಹಗಲು ದರೋಡೆ ನಡೆಯುತ್ತಿದೆ. ಪ್ರಾಂಗಣದಲ್ಲಿ ಶೌಚಾಲಯ ಹಾಗೂ ಶುದ್ಧ
ಕುಡಿಯುವ ನೀರಿನ ವ್ಯವಸ್ಥೆ ಇಲ್ಲ ಎಂದು ಆರೋಪಿಸಿದರು.