ವಿವಾಹ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದವರು ಪರಸ್ಪರ 6 ಅಡಿ ಅಂತರದಲ್ಲಿ ಕುಳಿತುಕೊಳ್ಳುವಂತೆ ಹಾಗೂ ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ತಿಳಿವಳಿಕೆ ನೀಡಿದರು. ಕಲ್ಯಾಣ ಮಂಟಪಗಳಲ್ಲಿ ನಡೆಯುವ ವಿವಾಹ ಹಾಗೂ ಇತರ ಕಾರ್ಯಕ್ರಮಗಳಿಗೆ 100 ಜನರಿಗಿಂತ ಹೆಚ್ಚು ಮಂದಿ ಸೇರುವಂತಿಲ್ಲ. ಯಾವ ಸಂದರ್ಭದಲ್ಲಿ ಬೇಕಾದರೂ ದಿಢೀರ್ ದಾಳಿ ನಡೆಸುತ್ತೇವೆ. ಹೆಚ್ಚು ಜನರನ್ನು ಸೇರಿಸಿಕೊಂಡು ಕಾರ್ಯಕ್ರಮ ನಡೆಸುತ್ತಿದ್ದರೆ, ಮಾಸ್ಕ್ ಇಲ್ಲದೆ ಅಂತರ ಕಾಪಾಡಿಕೊಳ್ಳದೆ ಇದ್ದರೆ ಯಾವುದೇ ದಂಡ ವಿಧಿಸುವ ಜೊತೆಗೆ ಪ್ರಕರಣ ದಾಖಲು ಮಾಡಲಾಗುವುದು, ಕಲ್ಯಾಣ ಮಂಟಪಗಳ ಮಾಲೀಕರು ಹಾಗೂ ವಿವಾಹ ಹಾಗೂ ಇತರ ಕಾರ್ಯಕ್ರಮ ನಡೆಸುವವರ ವಿರುದ್ಧ ಈ ಕ್ರಮ ಎಂದು ಉಪವಿಭಾಗಾಧಿಕಾರಿ ಎಂ. ಗಿರೀಶ್ ನಂದನ್ ಹೇಳಿದರು.