ಮಹೇಶ್ ವಿವಿಧ ಸಂಘ ಸಂಸ್ಥೆ, ಬ್ಯಾಂಕ್ ಹಾಗೂ ಖಾಸಗಿ ವ್ಯಕ್ತಿಗಳಿಂದ ಕೈಸಾಲ ಪಡೆದು ತಮ್ಮ ಒಂದೂವರೆ ಎಕರೆ ಜಮೀನಿನಲ್ಲಿ ಶುಂಠಿ, ಜೋಳ ಮುಂತಾದ ಬೆಳೆಯನ್ನು ಬೆಳೆದಿದ್ದರು. ಹಲವಾರು ದಿನಗಳಿಂದ ಬೀಡುಬಿಟ್ಟಿರುವ ಕಾಡಾನೆಗಳ ಹಿಂಡು ಬುಧವಾರ ರಾತ್ರಿ ನಮ್ಮ ಜಮೀನಿಗೆ ದಾಳಿ ಮಾಡಿ ಕಷ್ಟ ಪಟ್ಟು ಬೆಳೆದಿದ್ದ ಬೆಳೆಯನ್ನು ತುಳಿದು ನಾಶ ಮಾಡಿತ್ತು. ಬೆಳೆದ ಬೆಳೆ ನಾಶವಾದ ಕಾರಣ ಮಾಡಿದ್ದ ಸಾಲವನ್ನು ತೀರಿಸುವುದು ಹೇಗೆ ಎಂಬ ಬೇಸರದಿಂದ ಕ್ರಿಮಿನಾಶಕ ಸೇವಿಸಿದ್ದರು. ಚಿಕಿತ್ಸೆಗಾಗಿ ಹಾಸನದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಸಂಬಂಧ ಅರೇಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.