<p><strong>ಹಾಸನ</strong>: ‘ದಲಿತರು , ಅಲ್ಪಸಂಖ್ಯಾತರಿಗೆ ದೊರೆಯುವ ಸಬ್ಸಿಡಿ ಯೋಜನೆಗಳ ಸೌಲಭ್ಯ ಕೊಡಿಸುವುದಾಗಿ ಲಕ್ಷಾಂತರ ರೂ ವಂಚಿಸಿರುವ ಸಿ.ಎಸ್ ನಾಗರಾಜ್ ನನ್ನು ಬಂಧಿಸಬೇಕು’ ಎಂದು ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘ ಮತ್ತು ದಲಿತ ಹಕ್ಕುಗಳ ಸಮಿತಿ ಸದಸ್ಯರು ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು.</p>.<p>ದಲಿತ ಹಕ್ಕುಗಳ ಸಮಿತಿಯ ಜಿಲ್ಲಾ ಘಟಕದ ಸಂಚಾಲಕ ಎಂ.ಜಿ ಪೃಥ್ವಿ ಮಾತನಾಡಿ , ‘ಜಿಲ್ಲೆಯ ಹೊಳೆನರಸೀಪುರ ತಾಲೂಕಿನಲ್ಲಿ ನಾಗರಾಜ್ ರೈತರನ್ನು ನಂಬಿಸಿ ₹60 ಲಕ್ಷಕ್ಕೂ ಹೆಚ್ಚು ವಂಚನೆ ಮಾಡಿದ್ದಾರೆ. ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರೂ ಕ್ರಮವಾಗಿಲ್ಲ, ನಾಗರಾಜ್ ಅವರ ಪೋಷಕರು ಕಾಂಗ್ರೆಸ್ ಪಕ್ಷದ ಮುಖಂಡರಾಗಿದ್ದು ರಾಜಕೀಯ ಪ್ರಭಾವ ಹೊಂದಿದ್ದಾರೆ. ಆದ್ದರಿಂದ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.</p>.<p> ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಆರ್ ನವೀನ್ ಕುಮಾರ್ ಮಾತನಾಡಿ, ನಾಗರಾಜ್ ವಿರುದ್ಧ ಪೊಲೀಸ್ ಠಾಣೆಗೆ ಹಲವು ದೂರುಗಳು ಬಂದಿದ್ದರೂ ಸರಿಯಾಗಿ ತನಿಖೆ ಮಾಡಿಲ್ಲ , ಬಂಧಿಸದೆ ನಿರ್ಲಕ್ಷ್ಯ ವಹಿಸಿದ್ದಾರೆ. ಅಧಿಕಾರಿಗಳು ಸಹ ಪ್ರಕರಣದಲ್ಲಿ ಶಾಮಿಲಾಗಿದ್ದು, ತನಿಖೆ ಮಾಡಿ ರೈತರಿಗೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು .</p>.<p> ದಲಿತ ಮುಖಂಡರಾದ ರಾಜಶೇಖರ್, ಸಿಐಟಿಯು ಮುಖಂಡ ಅರವಿಂದ್, ಕಾರ್ಯಕರ್ತರಾದ ಶೈಲಾ, ವೀಣಾ, ರೈತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.</p>.<h2>ಸಬ್ಸಿಡಿ ಸಲಕರಣೆ ಆಮಿಷ: ಆರೋಪ</h2>.<p> ‘ತಾಲ್ಲೂಕಿನ ರೈತರಿಗೆ ಸಹಾಯ ಧನದ ಮೂಲಕ ಕೃಷಿ ಸಲಕರಣೆ ಟ್ರ್ಯಾಕ್ಟರ್ ಕಾರು ಸೇರಿದಂತೆ ಆಮಿಷಗಳ ಮೂಲಕ ಲಕ್ಷಾಂತರ ಮೊತ್ತ ವಂಚಿಸಿರುವ ನಾಗರಾಜ್ ವಿರುದ್ಧ ಕ್ರಮ ಕೈಗೊಳ್ಳಬೇಕು ಇಲ್ಲವಾದರೆ ತೀವ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು. ಈ ಪ್ರಕರಣವನ್ನು ಜಿಲ್ಲಾಧಿಕಾರಿಗಳು ಗಂಭೀರವಾಗಿ ಪರಿಗಣಿಸಿ ನ್ಯಾಯ ಒದಗಿಸಬೇಕು ಹೊಳೆನರಸಿಪುರದ ಪೊಲೀಸರಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೂಚನೆ ನೀಡುವ ಮೂಲಕ ನಾಗರಾಜ್ ಬಂಧನಕ್ಕೆ ಕ್ರಮ ಕೈಗೊಳ್ಳಬೇಕು’ ಎಂದು ಘಟಕದ ಅಧ್ಯಕ್ಷ ಎಚ್.ಆರ್ ನವೀನ್ ಕುಮಾರ್ ಅಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ</strong>: ‘ದಲಿತರು , ಅಲ್ಪಸಂಖ್ಯಾತರಿಗೆ ದೊರೆಯುವ ಸಬ್ಸಿಡಿ ಯೋಜನೆಗಳ ಸೌಲಭ್ಯ ಕೊಡಿಸುವುದಾಗಿ ಲಕ್ಷಾಂತರ ರೂ ವಂಚಿಸಿರುವ ಸಿ.ಎಸ್ ನಾಗರಾಜ್ ನನ್ನು ಬಂಧಿಸಬೇಕು’ ಎಂದು ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘ ಮತ್ತು ದಲಿತ ಹಕ್ಕುಗಳ ಸಮಿತಿ ಸದಸ್ಯರು ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು.</p>.<p>ದಲಿತ ಹಕ್ಕುಗಳ ಸಮಿತಿಯ ಜಿಲ್ಲಾ ಘಟಕದ ಸಂಚಾಲಕ ಎಂ.ಜಿ ಪೃಥ್ವಿ ಮಾತನಾಡಿ , ‘ಜಿಲ್ಲೆಯ ಹೊಳೆನರಸೀಪುರ ತಾಲೂಕಿನಲ್ಲಿ ನಾಗರಾಜ್ ರೈತರನ್ನು ನಂಬಿಸಿ ₹60 ಲಕ್ಷಕ್ಕೂ ಹೆಚ್ಚು ವಂಚನೆ ಮಾಡಿದ್ದಾರೆ. ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರೂ ಕ್ರಮವಾಗಿಲ್ಲ, ನಾಗರಾಜ್ ಅವರ ಪೋಷಕರು ಕಾಂಗ್ರೆಸ್ ಪಕ್ಷದ ಮುಖಂಡರಾಗಿದ್ದು ರಾಜಕೀಯ ಪ್ರಭಾವ ಹೊಂದಿದ್ದಾರೆ. ಆದ್ದರಿಂದ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.</p>.<p> ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಆರ್ ನವೀನ್ ಕುಮಾರ್ ಮಾತನಾಡಿ, ನಾಗರಾಜ್ ವಿರುದ್ಧ ಪೊಲೀಸ್ ಠಾಣೆಗೆ ಹಲವು ದೂರುಗಳು ಬಂದಿದ್ದರೂ ಸರಿಯಾಗಿ ತನಿಖೆ ಮಾಡಿಲ್ಲ , ಬಂಧಿಸದೆ ನಿರ್ಲಕ್ಷ್ಯ ವಹಿಸಿದ್ದಾರೆ. ಅಧಿಕಾರಿಗಳು ಸಹ ಪ್ರಕರಣದಲ್ಲಿ ಶಾಮಿಲಾಗಿದ್ದು, ತನಿಖೆ ಮಾಡಿ ರೈತರಿಗೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು .</p>.<p> ದಲಿತ ಮುಖಂಡರಾದ ರಾಜಶೇಖರ್, ಸಿಐಟಿಯು ಮುಖಂಡ ಅರವಿಂದ್, ಕಾರ್ಯಕರ್ತರಾದ ಶೈಲಾ, ವೀಣಾ, ರೈತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.</p>.<h2>ಸಬ್ಸಿಡಿ ಸಲಕರಣೆ ಆಮಿಷ: ಆರೋಪ</h2>.<p> ‘ತಾಲ್ಲೂಕಿನ ರೈತರಿಗೆ ಸಹಾಯ ಧನದ ಮೂಲಕ ಕೃಷಿ ಸಲಕರಣೆ ಟ್ರ್ಯಾಕ್ಟರ್ ಕಾರು ಸೇರಿದಂತೆ ಆಮಿಷಗಳ ಮೂಲಕ ಲಕ್ಷಾಂತರ ಮೊತ್ತ ವಂಚಿಸಿರುವ ನಾಗರಾಜ್ ವಿರುದ್ಧ ಕ್ರಮ ಕೈಗೊಳ್ಳಬೇಕು ಇಲ್ಲವಾದರೆ ತೀವ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು. ಈ ಪ್ರಕರಣವನ್ನು ಜಿಲ್ಲಾಧಿಕಾರಿಗಳು ಗಂಭೀರವಾಗಿ ಪರಿಗಣಿಸಿ ನ್ಯಾಯ ಒದಗಿಸಬೇಕು ಹೊಳೆನರಸಿಪುರದ ಪೊಲೀಸರಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೂಚನೆ ನೀಡುವ ಮೂಲಕ ನಾಗರಾಜ್ ಬಂಧನಕ್ಕೆ ಕ್ರಮ ಕೈಗೊಳ್ಳಬೇಕು’ ಎಂದು ಘಟಕದ ಅಧ್ಯಕ್ಷ ಎಚ್.ಆರ್ ನವೀನ್ ಕುಮಾರ್ ಅಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>