‘ಚಂದ್ರಯ್ಯ ಅವರು ಶುಂಠಿ ಬೆಳೆಯಲು ಇಬ್ಬೀಡು ಕೆನರಾ ಬ್ಯಾಂಕ್ನಲ್ಲಿ ಹಾಗೂ ವಿವಿಧ ಸಂಘ, ಸಂಸ್ಥೆಗಳಲ್ಲಿ ಸಾಲ ಮಾಡಿದ್ದರು. ಸರಿಯಾದ ಸಮಯಕ್ಕೆ ಮಳೆ ಬಾರದ ಕಾರಣ ಬೆಳೆ ಕೈಕೊಟ್ಟಿದ್ದು, ಏಪ್ರಿಲ್ 19 ರಂದು ಕಳೆನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ, ಹಾಸನದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದರು. ಬುಧವಾರ ಆರೋಗ್ಯದಲ್ಲಿ ಏರುಪೇರಾಗಿ ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಮೃತಪಟ್ಟರು’ ಎಂದು ಪೊಲೀಸರು ತಿಳಿಸಿದ್ದಾರೆ.