<p><strong>ಕೊಣನೂರು: </strong>ಹಲವು ಹಳ್ಳಿಗಳಲ್ಲಿ ಕೆಟ್ಟಿರುವ ವಿದ್ಯುತ್ ಪರಿವರ್ತಕಗಳನ್ನು ದುರಸ್ತಿಪಡಿಸಬೇಕು’ ಎಂದು ಆಗ್ರಹಿಸಿ ರೈತ ಸಂಘದ ಸದಸ್ಯರು ರಾಮನಾಥಪುರದ ಸೆಸ್ಕ್ ಕಚೇರಿ ಮುಂದೆ ಸೋಮವಾರ ಪ್ರತಿಭಟನೆ ನಡೆಸಿದರು.</p>.<p>ಬಸವಾಪಟ್ಟಣ ವ್ಯಾಪ್ತಿಯ ಹಲವು ಹಳ್ಳಿಗಳಲ್ಲಿ ವಿದ್ಯುತ್ ಪರಿವರ್ತಕಗಳು ಕೆಟ್ಟು ಹೋಗಿ ತಿಂಗಳುಗಳೇ ಕಳೆದಿವೆ. ಈ ಕುರಿತು ಸೆಸ್ಕ್ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಪ್ರಯೋಜವಾಗಿಲ್ಲ. ನೀರಿಲ್ಲದೆ ಸಾವಿರಾರು ರೂಪಾಯಿ ವ್ಯಯಿಸಿ ಬೆಳೆದ ಬೆಳೆಗಳು ಬಿಸಿಲಿಗೆ ಒಣಗಿ ಹಾಳಾಗುತ್ತಿವೆ’ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಕೂಡಲೇ ಕೆಟ್ಟಿರುವ ವಿದ್ಯುತ್ ಪರಿವರ್ತಕಗಳನ್ನು ಬದಲಿಸಬೇಕು ಹಾಗೂ ನೀರಿಲ್ಲದೆ ಒಣಗಿ ನಾಶವಾದ ಬೆಳೆಗೆ ಪರಿಹಾರ ನೀಡಬೇಕು’ ಎಂದು ಒತ್ತಾಯಿಸಿದರು.</p>.<p>ಹಾನಗಲ್, ಬೆಳವಾಡಿ ಭಾಗದ ರೈತರು ಹಾಗೂ ರೈತ ಸಂಘದ ಸದಸ್ಯರು ಇಲ್ಲಿನ ಬಸವೇಶ್ವರ ಸರ್ಕಲ್ನಿಂದ ಪ್ರತಿಭಟನಾ ಮೆರವಣಿಗೆಯಲ್ಲಿ ಬಂದು ರಾಮನಾಥಪುರ ಸೆಸ್ಕ್ ಉಪವಿಭಾಗ ಕಚೇರಿಯ ಮುಂದೆ ಪ್ರತಿಭಟಿಸಿದರು.</p>.<p>ಸೆಸ್ಕ್ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಚಿನ್ನಸ್ವಾಮಿ ಅವರಿಗೆ ಮನವಿ ಸಲ್ಲಿಸಿದರು.</p>.<p>ರೈತ ಸಂಘದ ಜಗನ್ನಾಥ್, ಮಂಜೇಗೌಡ, ಚಂದ್ರು, ಶಿವಣ್ಣ, ಸತೀಶ್, ಬಂದಿಗನಹಳ್ಳಿ ರವಿ, ಮಂಜುನಾಥ್, ಕಿರಣ್, ಕೃಷ್ಣೇಗೌಡ ಮುಂತಾದವರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಣನೂರು: </strong>ಹಲವು ಹಳ್ಳಿಗಳಲ್ಲಿ ಕೆಟ್ಟಿರುವ ವಿದ್ಯುತ್ ಪರಿವರ್ತಕಗಳನ್ನು ದುರಸ್ತಿಪಡಿಸಬೇಕು’ ಎಂದು ಆಗ್ರಹಿಸಿ ರೈತ ಸಂಘದ ಸದಸ್ಯರು ರಾಮನಾಥಪುರದ ಸೆಸ್ಕ್ ಕಚೇರಿ ಮುಂದೆ ಸೋಮವಾರ ಪ್ರತಿಭಟನೆ ನಡೆಸಿದರು.</p>.<p>ಬಸವಾಪಟ್ಟಣ ವ್ಯಾಪ್ತಿಯ ಹಲವು ಹಳ್ಳಿಗಳಲ್ಲಿ ವಿದ್ಯುತ್ ಪರಿವರ್ತಕಗಳು ಕೆಟ್ಟು ಹೋಗಿ ತಿಂಗಳುಗಳೇ ಕಳೆದಿವೆ. ಈ ಕುರಿತು ಸೆಸ್ಕ್ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಪ್ರಯೋಜವಾಗಿಲ್ಲ. ನೀರಿಲ್ಲದೆ ಸಾವಿರಾರು ರೂಪಾಯಿ ವ್ಯಯಿಸಿ ಬೆಳೆದ ಬೆಳೆಗಳು ಬಿಸಿಲಿಗೆ ಒಣಗಿ ಹಾಳಾಗುತ್ತಿವೆ’ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಕೂಡಲೇ ಕೆಟ್ಟಿರುವ ವಿದ್ಯುತ್ ಪರಿವರ್ತಕಗಳನ್ನು ಬದಲಿಸಬೇಕು ಹಾಗೂ ನೀರಿಲ್ಲದೆ ಒಣಗಿ ನಾಶವಾದ ಬೆಳೆಗೆ ಪರಿಹಾರ ನೀಡಬೇಕು’ ಎಂದು ಒತ್ತಾಯಿಸಿದರು.</p>.<p>ಹಾನಗಲ್, ಬೆಳವಾಡಿ ಭಾಗದ ರೈತರು ಹಾಗೂ ರೈತ ಸಂಘದ ಸದಸ್ಯರು ಇಲ್ಲಿನ ಬಸವೇಶ್ವರ ಸರ್ಕಲ್ನಿಂದ ಪ್ರತಿಭಟನಾ ಮೆರವಣಿಗೆಯಲ್ಲಿ ಬಂದು ರಾಮನಾಥಪುರ ಸೆಸ್ಕ್ ಉಪವಿಭಾಗ ಕಚೇರಿಯ ಮುಂದೆ ಪ್ರತಿಭಟಿಸಿದರು.</p>.<p>ಸೆಸ್ಕ್ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಚಿನ್ನಸ್ವಾಮಿ ಅವರಿಗೆ ಮನವಿ ಸಲ್ಲಿಸಿದರು.</p>.<p>ರೈತ ಸಂಘದ ಜಗನ್ನಾಥ್, ಮಂಜೇಗೌಡ, ಚಂದ್ರು, ಶಿವಣ್ಣ, ಸತೀಶ್, ಬಂದಿಗನಹಳ್ಳಿ ರವಿ, ಮಂಜುನಾಥ್, ಕಿರಣ್, ಕೃಷ್ಣೇಗೌಡ ಮುಂತಾದವರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>