<p><strong>ಬೇಲೂರು:</strong> ‘ತಾಲ್ಲೂಕಿನ ಮಲೆನಾಡು ಭಾಗದಲ್ಲಿ ಕಾಡಾನೆಗಳ ಉಪಟಳ ವಿಪರೀತವಾಗಿದ್ದರೂ ಅರಣ್ಯ ಸಚಿವರು ಮತ್ತು ಇಲಾಖೆ ನಿರ್ಲಕ್ಷ್ಯ ವಹಿಸಿವೆ’ ಎಂದು ಆರೋಪಿಸಿ ತಾಲ್ಲೂಕಿನ ಕಣಗುಪ್ಪೆ ಗ್ರಾಮಸ್ಥರು ಬುಧವಾರ ಪ್ರತಿಭಟನೆ ನಡೆಸಿದರು.</p>.<p>ಕಣಗುಪ್ಪೆ, ಅನುಘಟ್ಟ ಸೇರಿದಂತೆ ಸುತ್ತಲಿನ ಗ್ರಾಮಸ್ಥರು ಸೇರಿ, ರಸ್ತೆ ತಡೆ ನಡೆಸಿ, ಅರಣ್ಯ ಸಚಿವರು ಮತ್ತು ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿದರು.</p>.<p>ಕಣಗುಪ್ಪೆ ಕುಮಾರ್ ಮಾತನಾಡಿ, ‘ಅನುಘಟ್ಟ ಭಾಗದಲ್ಲಿ ಸುಮಾರು 20 ದಿನಗಳಿಂದ 30ಕ್ಕೂ ಹೆಚ್ಚು ಕಾಡಾನೆಗಳಿದ್ದು, ನೂರಕ್ಕೂ ಹೆಚ್ಚು ಎಕರೆಯ ಭತ್ತ, ಕಾಫಿ, ಶುಂಠಿ, ತೆಂಗು ಸೇರಿದಂತೆ ಇನ್ನಿತರ ಬೆಳೆಗಳನ್ನು ಸಂಪೂರ್ಣ ನಾಶ ಮಾಡಿವೆ. ಇಷ್ಟೆಲ್ಲ ಸಮಸ್ಯೆ ಇದ್ದರೂ ಈ ಭಾಗಕ್ಕೆ ಅರಣ್ಯ ಇಲಾಖೆಯ ಒಬ್ಬ ಅಧಿಕಾರಿಯೂ ಬಂದಿಲ್ಲ. ಸಾವು ನೋವಾದಾಗ ಮಾತ್ರ ಬರುವ ಅರಣ್ಯ ಇಲಾಖೆ ಅಧಿಕಾರಿಗಳು, ಬೆಳೆಗಾರರ ಸಂಕಷ್ಟ ಅರಿಯಲು ಕನಿಷ್ಠ ಸೌಜನ್ಯಕ್ಕೂ ಬಂದಿಲ್ಲ. ಅರಣ್ಯ ಸಚಿವರು ಹಾಗೂ ಅವರ ಇಲಾಖೆ ನಿದ್ರೆಗೆ ಮಾತ್ರ ಸೀಮಿತರಾಗಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.</p>.<p>ಕಾಫಿ ಬೆಳೆಗಾರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಅದ್ದೂರಿ ಚೇತನ್ ಕುಮಾರ್ ಹಾಗೂ ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಭೋಗಮಲ್ಲೇಶ್ ಮಾತನಾಡಿ, ‘ಅನುಘಟ್ಟ ಪಂಚಾಯಿತಿ ವ್ಯಾಪ್ತಿಯ ಕಣಗುಪ್ಪೆ ಬೆಳ್ಳಾವರ, ಹಿರೆಹಸಡೆ, ಚಿಕ್ಕಹಸಡೆ, ಡೋಲನಮನೆ, ನೇರಳಕಟ್ಟೆ ಸೇರಿದಂತೆ ಈ ಭಾಗದಲ್ಲಿ ಕಾಡಾನೆಗಳ ಹಾವಳಿ ದಿನದಿಂದ, ದಿನಕ್ಕೆ ಹೆಚ್ಚುತ್ತಿದೆ. ಆದರೆ ಈ ಭಾಗದ ಸಮಸ್ಯೆಗಳನ್ನು ಆಲಿಸುವಲ್ಲಿ ಇಲ್ಲಿಯ ಅರಣ್ಯ ಇಲಾಖೆ ಅಧಿಕಾರಿಗಳು ಸಂಪೂರ್ಣ ವಿಫಲರಾಗಿದ್ದಾರೆ. ರೈತರು, ಬೆಳೆಗಾರರ ಕಣ್ಣೊರೆಸುವ ನಾಟಕದ ಸಭೆ ಕರೆಯುತ್ತಿದ್ದಾರೆ’ ಎಂದು ದೂರಿದರು.</p>.<p>ಜಿಲ್ಲಾಧಿಕಾರಿ ಈ ಸಮಸ್ಯೆಗೆ ಪರಿಹಾರ ನೀಡಲು ಸಭೆ ಕರೆದು ಮೂರು ತಿಂಗಳಾದರೂ ಕೇವಲ ಅದು ಭಾಷಣಕ್ಕೆ ಮಾತ್ರ ಸೀಮಿತವಾಗಿದೆ. ಅದು ಇಲ್ಲಿವರೆಗೂ ಕಾರ್ಯರೂಪಕ್ಕೆ ಬರಲಿಲ್ಲ. ನಾವು ಎಷ್ಟೇ ಬಾರಿ ಪ್ರತಿಭಟನೆ ಮಾಡಿ, ಮಾಹಿತಿಯನ್ನು ಜನಪ್ರತಿನಿಧಿಗಳಿಗೆ ತಿಳಿಸಿದರೂ, ಈ ಬಗ್ಗೆ ಸಚಿವರಿಗೆ ಕೇಳದಂತಾಗಿದೆ ಎಂದರು.</p>.<p>ಈಗಾಗಲೇ ಹೆತ್ತೂರು ಹಾಗೂ ಚಿಕ್ಕಮಗಳೂರು ಭಾಗದಲ್ಲಿ ಸುಮಾರು ಮೂರು ಸಾವಿರ ಎಕರೆಯಷ್ಟು ಅರಣ್ಯ ಜಾಗವನ್ನು ನಾವೇ ಗುರ್ತಿಸಿದ್ದರೂ, ಅಲ್ಲಿಗೆ ಆನೆಗಳನ್ನು ಅಟ್ಟಲು ಸಂಪೂರ್ಣ ವಿಫಲರಾಗಿದ್ದಾರೆ ಎಂದರು.</p>.<p>ಅರೇಹಳ್ಳಿ ಹೋಬಳಿ ಕಾಫಿ ಬೆಳೆಗಾರ ಸಂಘದ ಅಧ್ಯಕ್ಷ ಶಾರೀಬ್ ಫರ್ಹಾನ್ , ಅನುಘಟ್ಟ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ವೀರಭದ್ರಶೆಟ್ಟಿ, ಬಸವರಾಜ್ ಮಾತನಾಡಿದರು. ಸತೀಶ್, ಚಂದನ್, ವೆಂಕಟೇಶ್ ದೇವರಾಜು, ಮಂಜುನಾಥ್, ಶಿವಶಂಕರಪ್ಪ, ಲಲಿತಾ, ಇಂದಿರಾ, ಲೋಹಿತ್, ವಿನಯ್, ರಾಮಶೆಟ್ಟಿ, ತೇಜಸ್, ವೆಂಕಟೇಶ್, ರವಿ ಸೇರಿದಂತೆ ಗ್ರಾಮಸ್ಥರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೇಲೂರು:</strong> ‘ತಾಲ್ಲೂಕಿನ ಮಲೆನಾಡು ಭಾಗದಲ್ಲಿ ಕಾಡಾನೆಗಳ ಉಪಟಳ ವಿಪರೀತವಾಗಿದ್ದರೂ ಅರಣ್ಯ ಸಚಿವರು ಮತ್ತು ಇಲಾಖೆ ನಿರ್ಲಕ್ಷ್ಯ ವಹಿಸಿವೆ’ ಎಂದು ಆರೋಪಿಸಿ ತಾಲ್ಲೂಕಿನ ಕಣಗುಪ್ಪೆ ಗ್ರಾಮಸ್ಥರು ಬುಧವಾರ ಪ್ರತಿಭಟನೆ ನಡೆಸಿದರು.</p>.<p>ಕಣಗುಪ್ಪೆ, ಅನುಘಟ್ಟ ಸೇರಿದಂತೆ ಸುತ್ತಲಿನ ಗ್ರಾಮಸ್ಥರು ಸೇರಿ, ರಸ್ತೆ ತಡೆ ನಡೆಸಿ, ಅರಣ್ಯ ಸಚಿವರು ಮತ್ತು ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿದರು.</p>.<p>ಕಣಗುಪ್ಪೆ ಕುಮಾರ್ ಮಾತನಾಡಿ, ‘ಅನುಘಟ್ಟ ಭಾಗದಲ್ಲಿ ಸುಮಾರು 20 ದಿನಗಳಿಂದ 30ಕ್ಕೂ ಹೆಚ್ಚು ಕಾಡಾನೆಗಳಿದ್ದು, ನೂರಕ್ಕೂ ಹೆಚ್ಚು ಎಕರೆಯ ಭತ್ತ, ಕಾಫಿ, ಶುಂಠಿ, ತೆಂಗು ಸೇರಿದಂತೆ ಇನ್ನಿತರ ಬೆಳೆಗಳನ್ನು ಸಂಪೂರ್ಣ ನಾಶ ಮಾಡಿವೆ. ಇಷ್ಟೆಲ್ಲ ಸಮಸ್ಯೆ ಇದ್ದರೂ ಈ ಭಾಗಕ್ಕೆ ಅರಣ್ಯ ಇಲಾಖೆಯ ಒಬ್ಬ ಅಧಿಕಾರಿಯೂ ಬಂದಿಲ್ಲ. ಸಾವು ನೋವಾದಾಗ ಮಾತ್ರ ಬರುವ ಅರಣ್ಯ ಇಲಾಖೆ ಅಧಿಕಾರಿಗಳು, ಬೆಳೆಗಾರರ ಸಂಕಷ್ಟ ಅರಿಯಲು ಕನಿಷ್ಠ ಸೌಜನ್ಯಕ್ಕೂ ಬಂದಿಲ್ಲ. ಅರಣ್ಯ ಸಚಿವರು ಹಾಗೂ ಅವರ ಇಲಾಖೆ ನಿದ್ರೆಗೆ ಮಾತ್ರ ಸೀಮಿತರಾಗಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.</p>.<p>ಕಾಫಿ ಬೆಳೆಗಾರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಅದ್ದೂರಿ ಚೇತನ್ ಕುಮಾರ್ ಹಾಗೂ ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಭೋಗಮಲ್ಲೇಶ್ ಮಾತನಾಡಿ, ‘ಅನುಘಟ್ಟ ಪಂಚಾಯಿತಿ ವ್ಯಾಪ್ತಿಯ ಕಣಗುಪ್ಪೆ ಬೆಳ್ಳಾವರ, ಹಿರೆಹಸಡೆ, ಚಿಕ್ಕಹಸಡೆ, ಡೋಲನಮನೆ, ನೇರಳಕಟ್ಟೆ ಸೇರಿದಂತೆ ಈ ಭಾಗದಲ್ಲಿ ಕಾಡಾನೆಗಳ ಹಾವಳಿ ದಿನದಿಂದ, ದಿನಕ್ಕೆ ಹೆಚ್ಚುತ್ತಿದೆ. ಆದರೆ ಈ ಭಾಗದ ಸಮಸ್ಯೆಗಳನ್ನು ಆಲಿಸುವಲ್ಲಿ ಇಲ್ಲಿಯ ಅರಣ್ಯ ಇಲಾಖೆ ಅಧಿಕಾರಿಗಳು ಸಂಪೂರ್ಣ ವಿಫಲರಾಗಿದ್ದಾರೆ. ರೈತರು, ಬೆಳೆಗಾರರ ಕಣ್ಣೊರೆಸುವ ನಾಟಕದ ಸಭೆ ಕರೆಯುತ್ತಿದ್ದಾರೆ’ ಎಂದು ದೂರಿದರು.</p>.<p>ಜಿಲ್ಲಾಧಿಕಾರಿ ಈ ಸಮಸ್ಯೆಗೆ ಪರಿಹಾರ ನೀಡಲು ಸಭೆ ಕರೆದು ಮೂರು ತಿಂಗಳಾದರೂ ಕೇವಲ ಅದು ಭಾಷಣಕ್ಕೆ ಮಾತ್ರ ಸೀಮಿತವಾಗಿದೆ. ಅದು ಇಲ್ಲಿವರೆಗೂ ಕಾರ್ಯರೂಪಕ್ಕೆ ಬರಲಿಲ್ಲ. ನಾವು ಎಷ್ಟೇ ಬಾರಿ ಪ್ರತಿಭಟನೆ ಮಾಡಿ, ಮಾಹಿತಿಯನ್ನು ಜನಪ್ರತಿನಿಧಿಗಳಿಗೆ ತಿಳಿಸಿದರೂ, ಈ ಬಗ್ಗೆ ಸಚಿವರಿಗೆ ಕೇಳದಂತಾಗಿದೆ ಎಂದರು.</p>.<p>ಈಗಾಗಲೇ ಹೆತ್ತೂರು ಹಾಗೂ ಚಿಕ್ಕಮಗಳೂರು ಭಾಗದಲ್ಲಿ ಸುಮಾರು ಮೂರು ಸಾವಿರ ಎಕರೆಯಷ್ಟು ಅರಣ್ಯ ಜಾಗವನ್ನು ನಾವೇ ಗುರ್ತಿಸಿದ್ದರೂ, ಅಲ್ಲಿಗೆ ಆನೆಗಳನ್ನು ಅಟ್ಟಲು ಸಂಪೂರ್ಣ ವಿಫಲರಾಗಿದ್ದಾರೆ ಎಂದರು.</p>.<p>ಅರೇಹಳ್ಳಿ ಹೋಬಳಿ ಕಾಫಿ ಬೆಳೆಗಾರ ಸಂಘದ ಅಧ್ಯಕ್ಷ ಶಾರೀಬ್ ಫರ್ಹಾನ್ , ಅನುಘಟ್ಟ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ವೀರಭದ್ರಶೆಟ್ಟಿ, ಬಸವರಾಜ್ ಮಾತನಾಡಿದರು. ಸತೀಶ್, ಚಂದನ್, ವೆಂಕಟೇಶ್ ದೇವರಾಜು, ಮಂಜುನಾಥ್, ಶಿವಶಂಕರಪ್ಪ, ಲಲಿತಾ, ಇಂದಿರಾ, ಲೋಹಿತ್, ವಿನಯ್, ರಾಮಶೆಟ್ಟಿ, ತೇಜಸ್, ವೆಂಕಟೇಶ್, ರವಿ ಸೇರಿದಂತೆ ಗ್ರಾಮಸ್ಥರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>