ನಗರದಲ್ಲಿ ಮಂಗಳವಾರ ಹಾಸನಾಂಬಾ ದೇವಿ ದರ್ಶನ ಪಡೆದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಕೇಂದ್ರ ಸರ್ಕಾರ ರೈತ ಮುಖಂಡರೊಂದಿಗೆ 11 ಸುತ್ತಿನ ಮಾತುಕತೆ ನಡೆಸಿದೆ. ಆದರೆ, ಇದುವರೆಗೂ ಸಮಸ್ಯೆ ಬಗೆಹರಿದಿಲ್ಲ. ಈಗಲೂ ಅವರ ಜೊತೆಗೆ ಮಾತುಕತೆ ಮಾಡಲು ಸರ್ಕಾರ ಸಿದ್ಧ. ರಸ್ತೆಯಲ್ಲಿ ನಿಂತು ಹೋರಾಟ ಮಾಡುವುದರಿಂದ ಯಾವುದೇ ಸಮಸ್ಯೆ ಬಗೆಹರಿಯುವುದಿಲ್ಲ. ಸರ್ಕಾರದೊಂದಿಗೆ ಕುಳಿತು ಚರ್ಚೆ ನಡೆಸಿದರೆ ರೈತರ ಸಮಸ್ಯೆಗೆ ತಾತ್ವಿಕ ಅಂತ್ಯ ಕಾಣಿಸಬಹುದು. ಈ ನಿಟ್ಟಿನಲ್ಲಿ ರೈತ ಮುಖಂಡರು ಮಾತುಕತೆಗೆ ಬಂದರೆ ಒಳಿತು’ ಎಂದು ಸಲಹೆ ನೀಡಿದರು.