ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ ಭೀತಿ, ಯುದ್ಧ ಭೀತಿ, ಭೂಕಂಪ: ಕೋಡಿಮಠದ ಸ್ವಾಮೀಜಿ ಭವಿಷ್ಯ

Last Updated 24 ಅಕ್ಟೋಬರ್ 2022, 3:13 IST
ಅಕ್ಷರ ಗಾತ್ರ

ಅರಸೀಕೆರೆ: ‘ರಾಜಭೀತಿ, ಯುದ್ಧ ಭೀತಿ ಸೇರಿದಂತೆ ಲೋಕ ಕಂಟಕ, ಪ್ರಾದೇಶಿಕ ಕಂಟಕ, ಭೂಕಂಪದಂತಹ ಕಂಟಕಗಳು ಮನುಕುಲದ ಮೇಲೆ ದುಷ್ಪರಿಣಾಮ ಬೀರಲಿವೆ. ಮುಂದಿನ 3 ತಿಂಗಳು ಜಾಗರೂಕತೆಯಿಂದ ಇರಬೇಕು’ ಎಂದು ಕೋಡಿಮಠದ ಪೀಠಾಧ್ಯಕ್ಷ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದರು.

ತಾಲ್ಲೂಕಿನ ಹಾರನಹಳ್ಳಿ ಕೋಡಿಮಠದಲ್ಲಿ ಲೋಕಾ ಕಲ್ಯಾಣಾರ್ಥ ಹಮ್ಮಿಕೊಂಡಿದ್ದ ಮಹಾರುದ್ರ ಯಾಗ ವನ್ನು ಮುಗಿಸಿದ ಬಳಿಕ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದರು.

‘ಪ್ರಾಕೃತಿಕ ವಿಕೋಪಗಳ ಭೀತಿ ಜತೆಗೆ ಮನುಷ್ಯರು ಪರಸ್ಪರ ಅಪನಂಬಿಕೆಯಿಂದ ತನ್ನ ಮಾನಸಿಕ ಸ್ಥಿರತೆ ಕಳೆದುಕೊಂಡು ಹುಚ್ಚರಂತೆ ವರ್ತಿಸುವುದು ಹಾಗೂ ದೇಹದ ಅಶಕ್ತತೆ ಯಿಂದ ಬೀದಿಯಲ್ಲಿ ಮೃತಪಡುವ ಕಾಲ ಬರಲಿದೆ. ಈ ಕಂಟಕಗಳಿಂದ ಪಾರಾಗಲು ಜನರು ದೈವದ ಮೊರೆ ಹೋಗಬೇಕು’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT