ಹಲವು ದಿನಗಳಿಂದ ಶಾಂತಿಗ್ರಾಮ, ಬೆಣಗಟ್ಟೆ ಸೇರಿದಂತೆ ಸುತ್ತಮುತ್ತಲ ಹಳ್ಳಿಗಳಲ್ಲಿ ಕುರಿ, ಕರು ಹೊತ್ತೊಯ್ದು ತಿಂದು ಹಾಕಿತ್ತು. ಎಷ್ಟೋ ದಿನ ಹಗಲು ವೇಳೆ ಕಾಣಿಸಿಕೊಂಡು ಚಿರತೆ ಆತಂಕ ಸೃಷ್ಟಿಸಿತ್ತು. ಮಕ್ಕಳು, ಮಹಿಳೆಯರು, ಹಿರಿಯರು ಮನೆಯಿಂದ ಹೊರ ಬರಲು ಹೆದರುತ್ತಿದ್ದರು. ಚಿರತೆಯನ್ನು ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಮನವಿ ಸಲ್ಲಿಸಿದ್ದರು.