ಆಯುಧಪೂಜೆ ಮುನ್ನಾ ದಿನವಾದ ಶನಿವಾರ ಮಾರುಕಟ್ಟೆಯಲ್ಲಿ ಜನಜಂಗುಳಿ ಕಂಡು ಬಂತು. ನಗರ ಸಾರಿಗೆ ಬಸ್ ನಿಲ್ದಾಣ, ಹೊಸ ಬಸ್ ನಿಲ್ದಾಣ, ಕೆ.ಆರ್. ಮಾರುಕಟ್ಟೆ, ಎಂ.ಜಿ.ರಸ್ತೆ, ಕಟ್ಟಿನಕೆರೆ ಮಾರುಕಟ್ಟೆ, ಆರ್.ಸಿ.ರಸ್ತೆ ಸೇರಿ ಹಲವೆಡೆ ಬಾಳೆ ಕಂದು, ಬೂದು ಕುಂಬಳಕಾಯಿ, ಹೂವು, ಹಣ್ಣುಗಳ ಭರ್ಜರಿ ವ್ಯಾಪಾರ ನಡೆಯಿತು.