ಇಲ್ಲಿನ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಆರೋಗ್ಯ ಇಲಾಖೆ ವತಿಯಿಂದ ಬುಧವಾರ ಆಯೋಜಿಸಿದ್ದ, ಭ್ರೂಣ ಹತ್ಯೆ ನಿಯಂತ್ರಣ ಕುರಿತು ಅರಿವು ಮೂಡಿಸುವ, ಬೀದಿ ನಾಟಕಕ್ಕೆ ಚಾಲನೆ ನೀಡಿ ಮಾತನಾಡಿದರು. ಭ್ರೂಣಹತ್ಯೆ ಮಾಡುವ ವೈದ್ಯರಿಗೆ, ಜಾಹೀರಾತು ನೀಡುವವರಿಗೆ, ಲ್ಯಾಬ್ಗಳಲ್ಲಿ ಪತ್ತೆ ಕಾರ್ಯ ನಡೆಸುವವರಿಗೆ ದಂಡದೊಂದಿಗೆ ಶಿಕ್ಷೆ ಸಹ ಇದೆ. ಕೆಲ ವೈದ್ಯರು ಪ್ರಸವ ಪೂರ್ವ ಲಿಂಗ ಪತ್ತೆ ಮತ್ತು ಹೆಣ್ಣು ಭ್ರೂಣ ಹತ್ಯೆಯಂತಹ ಪರಿಪಾಠ ಮುಂದುವರಿಸಿದಲ್ಲಿ ಅವರ ವೈದ್ಯಕೀಯ ವೃತ್ತಿಗೆ ಸಂಚಕಾರ ಬರಲಿದೆ. ಹೆಣ್ಣು ಮಕ್ಕಳನ್ನು ಉಳಿಸಿ, ಹೆಣ್ಣು ಮಕ್ಕಳನ್ನು ಓದಿಸಿ ಲಿಂಗ ಸಮಾನತೆಯನ್ನು ಕಾಪಾಡ ಬೇಕಿದೆ ಎಂದರು.