<p><strong>ಹಾಸನ</strong>: ಯಾರದ್ದೋ ಪ್ರಭಾವ, ಒತ್ತಡಗಳಿಗೆ ಮಣಿದು ಎಚ್.ಡಿ. ರೇವಣ್ಣ ಅವರನ್ನು ಎ 1 ಆರೋಪಿಯಾಗಿ ಎಫ್ಐಆರ್ ದಾಖಲು ಮಾಡಲಾಗಿದೆ ಎಂದು ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಸ್. ಲಿಂಗೇಶ್ ಆರೋಪಿಸಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕರ ಸೋಲು ಕಟ್ಟಿಟ್ಟ ಬುತ್ತಿ ಎಂಬುದು ಗೊತ್ತಾಗಿದೆ. ಆದ್ದರಿಂದ ರಾಜಕೀಯವಾಗಿ ಹಣಿಯಲು ಎಚ್.ಡಿ. ರೇವಣ್ಣ ಅವರನ್ನು ಈ ಪ್ರಕರಣದಲ್ಲಿ ಸಿಲುಕಿಸಲಾಗಿದೆ ಎಂದು ದೂರಿದರು.</p>.<p>ಮುಂದೆ ಮುಖ್ಯಮಂತ್ರಿ ಆಗಬೇಕು ಎನ್ನುವವರು ಈ ರೀತಿ ಎಫ್ಐಆರ್ ಮಾಡಿಸಿದ್ದಾರೆ. ಸತ್ಯಾಸತ್ಯತೆ ತಿಳಿಯದೇ, ಜಿಲ್ಲೆಗಾಗಿ ದುಡಿದ ರೇವಣ್ಣ ಅವರ ಮೇಲೆ ಎಫ್ಐಆರ್ ಮಾಡಿಸಿರುವುದು ಖಂಡನೀಯ ಎಂದರು.</p>.<p>ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಹೊಳೆನರಸೀಪುರ ಪೊಲೀಸರ ಮೇಲೆ ಒತ್ತಡ ಹೇರಿ ರೇವಣ್ಣ ಅವರ ಮೇಲೆ ಪ್ರಕರಣ ದಾಖಲಿಸಿರುವುದು ನಾಚಿಕೆಗೇಡಿನ ಸಂಗತಿ. ಇದಕ್ಕೆಲ್ಲಾ ಶಿವಕುಮಾರ್ ಕಾರಣ ಎಂದು ಆರೋಪಿಸಿದರು.</p>.<p>ಡಿ.ಕೆ. ಶಿವಕುಮಾರ್ ಅವರು ತಮ್ಮ ಚೇಲಾಗಳನ್ನು ಕಳುಹಿಸಿ, ಮಹಿಳೆಗೆ ಆಮಿಷವೊಡ್ಡಿ, ಅವರ ಮೂಲಕ ದೂರು ಕೊಡಿಸಿದ್ದಾರೆ. ರಾಜಕಾರಣವನ್ನು ರಾಜಕಾರಣದ ರೀತಿ ಮಾಡಬೇಕು. ಆದರೆ ಈ ರೀತಿಯ ಅಧಿಕಾರ ದುರುಪಯೋಗ ಮಾಡಿಕೊಂಡು ರಾಜಕೀಯ ಪ್ರಭಾವ ಬಳಸುವುದು ಸರಿಯಲ್ಲ ಎಂದರು.</p>.<p>'ವಕೀಲ ದೇವರಾಜೇಗೌಡ ಪೆನ್ಡ್ರೈವ್ ವಿಚಾರವಾಗಿ ಹೇಳಿಕೆ ನೀಡಿದಾಗ, ಜಿಲ್ಲಾಡಳಿತ ಏನು ಮಾಡುತ್ತಿತ್ತು' ಎಂದು ಆಕ್ರೋಶ ವ್ಯಕ್ತಪಡಿಸಿದ ಲಿಂಗೇಶ್, 'ಗುಪ್ತಚರ ಇಲಾಖೆ ಏನು ಮಾಡುತ್ತಿತ್ತು. ದೇವರಾಜೇಗೌಡರನ್ನು ಕರೆದು ಏಕೆ ವಿಚಾರಣೆ ಮಾಡಲಿಲ್ಲ' ಎಂದು ಪ್ರಶ್ನಿಸಿದರು.</p>.<p>'ರಾಜಕೀಯವನ್ನು ರಾಜಕೀಯವಾಗಿ ಎದುರಿಸಬೇಕು. ಅದನ್ನು ಬಿಟ್ಟು ರೇವಣ್ಣ ಅವರನ್ನು ರಾಜಕೀಯವಾಗಿ ಎದುರಿಸಲಾಗದೇ ಈ ರೀತಿ ಮಾಡಿದ್ದಾರೆ' ಎಂದರು.</p>.<p>'ತಪ್ಪು ಯಾರೇ ಮಾಡಿದರೂ ತಪ್ಪೇ. ಎಸ್ಐಟಿ ತನಿಖೆ ನಡೆಯಲಿ. ತಪ್ಪಿತಸ್ಥರಾಗಿದ್ದರೆ ಯಾವುದೇ ಕ್ರಮ ಕೈಗೊಳ್ಳಲಿ. ಇದರಲ್ಲಿ ಯಾರನ್ನೂ ವಹಿಸಿಕೊಳ್ಳುವುದಿಲ್ಲ' ಎಂದು ಲಿಂಗೇಶ ಸ್ಪಷ್ಟಪಡಿಸಿದ್ದರು.</p>.<p>ಜೆಡಿಎಸ್ ಹಾಸನ ತಾಲ್ಲೂಕು ಘಟಕದ ಅಧ್ಯಕ್ಷ ಎಸ್.ದ್ಯಾವೇಗೌಡ, ಆಲೂರು ತಾಲ್ಲೂಕು ಘಟಕದ ಅಧ್ಯಕ್ಷ ಮಂಜೇಗೌಡ, ಜೆಡಿಎಸ್ ವಕ್ತಾರ ಹೊಂಗೆರೆ ರಘು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ</strong>: ಯಾರದ್ದೋ ಪ್ರಭಾವ, ಒತ್ತಡಗಳಿಗೆ ಮಣಿದು ಎಚ್.ಡಿ. ರೇವಣ್ಣ ಅವರನ್ನು ಎ 1 ಆರೋಪಿಯಾಗಿ ಎಫ್ಐಆರ್ ದಾಖಲು ಮಾಡಲಾಗಿದೆ ಎಂದು ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಸ್. ಲಿಂಗೇಶ್ ಆರೋಪಿಸಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕರ ಸೋಲು ಕಟ್ಟಿಟ್ಟ ಬುತ್ತಿ ಎಂಬುದು ಗೊತ್ತಾಗಿದೆ. ಆದ್ದರಿಂದ ರಾಜಕೀಯವಾಗಿ ಹಣಿಯಲು ಎಚ್.ಡಿ. ರೇವಣ್ಣ ಅವರನ್ನು ಈ ಪ್ರಕರಣದಲ್ಲಿ ಸಿಲುಕಿಸಲಾಗಿದೆ ಎಂದು ದೂರಿದರು.</p>.<p>ಮುಂದೆ ಮುಖ್ಯಮಂತ್ರಿ ಆಗಬೇಕು ಎನ್ನುವವರು ಈ ರೀತಿ ಎಫ್ಐಆರ್ ಮಾಡಿಸಿದ್ದಾರೆ. ಸತ್ಯಾಸತ್ಯತೆ ತಿಳಿಯದೇ, ಜಿಲ್ಲೆಗಾಗಿ ದುಡಿದ ರೇವಣ್ಣ ಅವರ ಮೇಲೆ ಎಫ್ಐಆರ್ ಮಾಡಿಸಿರುವುದು ಖಂಡನೀಯ ಎಂದರು.</p>.<p>ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಹೊಳೆನರಸೀಪುರ ಪೊಲೀಸರ ಮೇಲೆ ಒತ್ತಡ ಹೇರಿ ರೇವಣ್ಣ ಅವರ ಮೇಲೆ ಪ್ರಕರಣ ದಾಖಲಿಸಿರುವುದು ನಾಚಿಕೆಗೇಡಿನ ಸಂಗತಿ. ಇದಕ್ಕೆಲ್ಲಾ ಶಿವಕುಮಾರ್ ಕಾರಣ ಎಂದು ಆರೋಪಿಸಿದರು.</p>.<p>ಡಿ.ಕೆ. ಶಿವಕುಮಾರ್ ಅವರು ತಮ್ಮ ಚೇಲಾಗಳನ್ನು ಕಳುಹಿಸಿ, ಮಹಿಳೆಗೆ ಆಮಿಷವೊಡ್ಡಿ, ಅವರ ಮೂಲಕ ದೂರು ಕೊಡಿಸಿದ್ದಾರೆ. ರಾಜಕಾರಣವನ್ನು ರಾಜಕಾರಣದ ರೀತಿ ಮಾಡಬೇಕು. ಆದರೆ ಈ ರೀತಿಯ ಅಧಿಕಾರ ದುರುಪಯೋಗ ಮಾಡಿಕೊಂಡು ರಾಜಕೀಯ ಪ್ರಭಾವ ಬಳಸುವುದು ಸರಿಯಲ್ಲ ಎಂದರು.</p>.<p>'ವಕೀಲ ದೇವರಾಜೇಗೌಡ ಪೆನ್ಡ್ರೈವ್ ವಿಚಾರವಾಗಿ ಹೇಳಿಕೆ ನೀಡಿದಾಗ, ಜಿಲ್ಲಾಡಳಿತ ಏನು ಮಾಡುತ್ತಿತ್ತು' ಎಂದು ಆಕ್ರೋಶ ವ್ಯಕ್ತಪಡಿಸಿದ ಲಿಂಗೇಶ್, 'ಗುಪ್ತಚರ ಇಲಾಖೆ ಏನು ಮಾಡುತ್ತಿತ್ತು. ದೇವರಾಜೇಗೌಡರನ್ನು ಕರೆದು ಏಕೆ ವಿಚಾರಣೆ ಮಾಡಲಿಲ್ಲ' ಎಂದು ಪ್ರಶ್ನಿಸಿದರು.</p>.<p>'ರಾಜಕೀಯವನ್ನು ರಾಜಕೀಯವಾಗಿ ಎದುರಿಸಬೇಕು. ಅದನ್ನು ಬಿಟ್ಟು ರೇವಣ್ಣ ಅವರನ್ನು ರಾಜಕೀಯವಾಗಿ ಎದುರಿಸಲಾಗದೇ ಈ ರೀತಿ ಮಾಡಿದ್ದಾರೆ' ಎಂದರು.</p>.<p>'ತಪ್ಪು ಯಾರೇ ಮಾಡಿದರೂ ತಪ್ಪೇ. ಎಸ್ಐಟಿ ತನಿಖೆ ನಡೆಯಲಿ. ತಪ್ಪಿತಸ್ಥರಾಗಿದ್ದರೆ ಯಾವುದೇ ಕ್ರಮ ಕೈಗೊಳ್ಳಲಿ. ಇದರಲ್ಲಿ ಯಾರನ್ನೂ ವಹಿಸಿಕೊಳ್ಳುವುದಿಲ್ಲ' ಎಂದು ಲಿಂಗೇಶ ಸ್ಪಷ್ಟಪಡಿಸಿದ್ದರು.</p>.<p>ಜೆಡಿಎಸ್ ಹಾಸನ ತಾಲ್ಲೂಕು ಘಟಕದ ಅಧ್ಯಕ್ಷ ಎಸ್.ದ್ಯಾವೇಗೌಡ, ಆಲೂರು ತಾಲ್ಲೂಕು ಘಟಕದ ಅಧ್ಯಕ್ಷ ಮಂಜೇಗೌಡ, ಜೆಡಿಎಸ್ ವಕ್ತಾರ ಹೊಂಗೆರೆ ರಘು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>