<p><strong>ಬೇಲೂರು: </strong>ಇಲ್ಲಿನ ಯಗಚಿ ಜಲಾಶಯದ ಸಮೀಪ ಅರಣ್ಯ ಪ್ರದೇಶದಲ್ಲಿ ಬೆಂಕಿ ಬಿದ್ದು ಸಾವಿರಾರು ಗಿಡಗಳು ಸುಟ್ಟು ಹೋಗಿವೆ.</p>.<p>ಸಾಲುಮರದ ತಿಮ್ಮಕ್ಕ ಅವರ ದತ್ತು ಪುತ್ರ ಬಳ್ಳೂರು ಉಮೇಶ್ ಅವರು ನೂರಾರು ಸಾವಿರಾರು ಗಿಡಗಳನ್ನು ನೆಟ್ಟು ಬೆಳೆಸಿದ್ದರು. ಶನಿವಾರ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು, ನೂರಾರು ಎಕರೆ ಪ್ರದೇಶ ಸುಟ್ಟು ಹೋಗಿದೆ.</p>.<p>ಸ್ಥಳಕ್ಕೆ ಬಂದ ಉಮೇಶ್ ಹಾಗೂ ಸ್ನೇಹಿತರಾದ ನಂಜುಂಡಿ, ಶರತ್ ಬೆಂಕಿ ನಂದಿಸಲು ಹರಸಾಹಸಪಟ್ಟರು. ನಂತರ ಅಗ್ನಿಶಾಮಕ ಸಿಬ್ಬಂದಿಯ ಸಹಾಯದಿಂದ ಬೆಂಕಿ ನಂದಿಸಲಾಯಿತು.</p>.<p>‘ಯಗಚಿ ಜಲಾಶಯ ಯೋಜನೆಗೆ ಸೇರಿದ ಅಣೆಕಟ್ಟೆಯ ಮುಂಭಾಗ ಮತ್ತು ಅಕ್ಕಪಕ್ಕದ ನೂರಾರು ಎಕರೆ ಜಾಗದಲ್ಲಿ 2013ರಿಂದ ವಿವಿಧ ಜಾತಿಯ ಸಾವಿರಾರು ಗಿಡಗಳನ್ನು ನೆಟ್ಟು, ಪೋಷಿಸುತ್ತಿದ್ದೆ. ಕಿಡಿಗೇಡಿಗಳು ಉದ್ದೇಶಪೂರ್ವಕವಾಗಿ ಬೆಂಕಿ ಇಟ್ಟಿದ್ದಾರೆ. ಗಿಡಗಳು ಬೆಂಕಿಗೆ ಅಹುತಿಯಾಗಿವೆ’ ಎಂದು ನೋವಿನಿಂದ ನುಡಿದರು.</p>.<p>‘ಆರೋಪಿಗಳನ್ನು ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೇಲೂರು: </strong>ಇಲ್ಲಿನ ಯಗಚಿ ಜಲಾಶಯದ ಸಮೀಪ ಅರಣ್ಯ ಪ್ರದೇಶದಲ್ಲಿ ಬೆಂಕಿ ಬಿದ್ದು ಸಾವಿರಾರು ಗಿಡಗಳು ಸುಟ್ಟು ಹೋಗಿವೆ.</p>.<p>ಸಾಲುಮರದ ತಿಮ್ಮಕ್ಕ ಅವರ ದತ್ತು ಪುತ್ರ ಬಳ್ಳೂರು ಉಮೇಶ್ ಅವರು ನೂರಾರು ಸಾವಿರಾರು ಗಿಡಗಳನ್ನು ನೆಟ್ಟು ಬೆಳೆಸಿದ್ದರು. ಶನಿವಾರ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು, ನೂರಾರು ಎಕರೆ ಪ್ರದೇಶ ಸುಟ್ಟು ಹೋಗಿದೆ.</p>.<p>ಸ್ಥಳಕ್ಕೆ ಬಂದ ಉಮೇಶ್ ಹಾಗೂ ಸ್ನೇಹಿತರಾದ ನಂಜುಂಡಿ, ಶರತ್ ಬೆಂಕಿ ನಂದಿಸಲು ಹರಸಾಹಸಪಟ್ಟರು. ನಂತರ ಅಗ್ನಿಶಾಮಕ ಸಿಬ್ಬಂದಿಯ ಸಹಾಯದಿಂದ ಬೆಂಕಿ ನಂದಿಸಲಾಯಿತು.</p>.<p>‘ಯಗಚಿ ಜಲಾಶಯ ಯೋಜನೆಗೆ ಸೇರಿದ ಅಣೆಕಟ್ಟೆಯ ಮುಂಭಾಗ ಮತ್ತು ಅಕ್ಕಪಕ್ಕದ ನೂರಾರು ಎಕರೆ ಜಾಗದಲ್ಲಿ 2013ರಿಂದ ವಿವಿಧ ಜಾತಿಯ ಸಾವಿರಾರು ಗಿಡಗಳನ್ನು ನೆಟ್ಟು, ಪೋಷಿಸುತ್ತಿದ್ದೆ. ಕಿಡಿಗೇಡಿಗಳು ಉದ್ದೇಶಪೂರ್ವಕವಾಗಿ ಬೆಂಕಿ ಇಟ್ಟಿದ್ದಾರೆ. ಗಿಡಗಳು ಬೆಂಕಿಗೆ ಅಹುತಿಯಾಗಿವೆ’ ಎಂದು ನೋವಿನಿಂದ ನುಡಿದರು.</p>.<p>‘ಆರೋಪಿಗಳನ್ನು ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>