ಘಟನಾ ಸ್ಥಳಕ್ಕೆ ಅರಸೀಕೆರೆ ತಹಶೀಲ್ದಾರ್ ಸಂತೋಷ್ ಕುಮಾರ್ ಭೇಟಿ ನೀಡಿ ಪರಿಶೀಲಿಸಿದರು. ನಂತರ ಮಾತನಾಡಿ,‘ಈ ಅವಘಡ ತುಂಬಾ ನೋವು ತಂದಿದೆ. ಶೀಘ್ರವೇ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುವುದು ಜತೆಗೆ ಸುಟ್ಟು ಹೋಗಿರುವ ಗುಡಿಸಲುಗಳ ಜಾಗದಲ್ಲಿ ಆಶ್ರಯ ಯೋಜನೆ ಅಡಿಯಲ್ಲಿ ಮನೆಗಳನ್ನು ನಿರ್ಮಿಸಿಕೊಡಲಾಗುವುದು‘ ಎಂದು ಭರವಸೆ ನೀಡಿದರು.