<p><strong>ಹಾಸನ</strong>: ಆಪತ್ತಿನಲ್ಲಿರುವ ವ್ಯಕ್ತಿಯ ಜೀವವನ್ನು ಉಳಿಸಲು ಸಿ.ಪಿ.ಆರ್. ಹಾಗೂ ಪ್ರಥಮ ಚಿಕಿತ್ಸೆ ಸಹಕಾರಿ ಆಗಲಿದೆ ಎಂದು ಜಿಲ್ಲಾಧಿಕಾರಿ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಜಿಲ್ಲಾ ಶಾಖೆಯ ಅಧ್ಯಕ್ಷೆ ಕೆ.ಎಸ್. ಲತಾಕುಮಾರಿ ಹೇಳಿದರು.</p>.<p>ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಹಾಸನ ಘಟಕದ ವತಿಯಿಂದ ಶನಿವಾರ ಕಾಲೇಜು ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಹೃದಯಾಘಾತ ಮುನ್ನೆಚ್ಚರಿಕೆ, ಪ್ರಥಮ ಚಿಕಿತ್ಸೆ ಹಾಗೂ ಸಿ.ಪಿ.ಆರ್. ವಿಧಾನಗಳ ಬಗ್ಗೆ ಉಚಿತ ತರಬೇತಿ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಬದಲಾದ ಕಾಲಘಟ್ಟದಲ್ಲಿ ಪ್ರಥಮ ಚಿಕಿತ್ಸೆ ಹಾಗೂ ಸಿ.ಪಿ.ಆರ್.ಗಳ ಮಹತ್ವ ಹಾಗೂ ಅಗತ್ಯತೆಯನ್ನು ಒತ್ತಿ ಹೇಳಿದ ಅವರು, ಯಾವುದೇ ಕ್ಲಿಷ್ಟ ಸಂದರ್ಭಗಳು ಎದುರಾದಾಗ ಎಲ್ಲರೂ ಸ್ವಯಂ ಸೇವಕರಾಗಿ ನಿಲ್ಲುವ ಅಗತ್ಯವಿದೆ ಎಂದು ತಿಳಿಸಿದರು.</p>.<p>ವಿದ್ಯಾರ್ಥಿಗಳು ಸೇವಾ ಮನೋಭಾವ ಬೆಳೆಸಿಕೊಂಡು ಸ್ವಯಂ-ಸೇವಾ ಸಂಸ್ಥೆಗಳೊಂದಿಗೆ ಗುರುತಿಸಿಕೊಂಡು ಪರಿಸರ ರಕ್ಷಣೆ-ನಮ್ಮ ಹೊಣೆ ಎಂಬ ಘೋಷ ವಾಕ್ಯದೊಂದಿಗೆ ಸಾಗುತ್ತ ಸಮಯದ ಮಹತ್ವ ಅರಿತು ಸತ್ಪ್ರಜೆಗಳಾಗಿ ಬಾಳುವ ಅನಿವಾರ್ಯತೆ ಇದೆ ಎಂದರು.</p>.<p>ಜಿಲ್ಲಾ ರೆಡ್ ಕ್ರಾಸ್ ಶಾಖೆಯ ಸ್ವಂತ ಕಟ್ಟಡ ಹಾಗೂ ಅಲ್ಲಿರುವ ಮೂಲ ಸೌಕರ್ಯಗಳನ್ನು ವೀಕ್ಷಿಸಿ, ಸಭಾಪತಿ ಹೆಮ್ಮಿಗೆ ಮೋಹನ್ ಅವರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ನಾಗೇಶ್ ಆರಾಧ್ಯ, ರೆಡ್ ಕ್ರಾಸ್ ಸಂಸ್ಥೆಯ ಸಭಾಪತಿ ಹೆಮ್ಮಿಗೆ ಮೋಹನ್, ಖಜಾಂಚಿ ಜಯೇಂದ್ರ ಕುಮಾರ್ ಎಚ್.ಡಿ., ನಿರ್ದೇಶಕರಾದ ಡಾ.ಸಾವಿತ್ರಿ ಮತ್ತು ಅಮ್ಜದ್ಖಾನ್ ಮಾತನಾಡಿದರು.</p>.<p>ಜಿಲ್ಲಾ ರೆಡ್ ಕ್ರಾಸ್ ಕಾರ್ಯದರ್ಶಿ ಶಬ್ಬೀರ್ ಅಹ್ಮದ್ ಸ್ವಾಗತಿಸಿದರು. ಸಂಸ್ಥೆಯ ನಿರ್ದೇಶಕರಾದ ಬಿ.ಆರ್. ಉದಯ ಕುಮಾರ್, ಡಾ.ರಂಗಲಕ್ಷ್ಮಿ, ಎಸ್.ಎಸ್. ಪಾಷ, ಕೆ.ಟಿ. ಜಯಶ್ರೀ, ಜಯಪ್ರಕಾಶ್, ಗಿರೀಶ್, ಭೀಮರಾಜ್, ಮಮತಾ ಪಾಟೀಲ್ ಮತ್ತು ನಿಶ್ಚಿತ ಕುಮಾರಿ ಉಪಸ್ಥಿತರಿದ್ದರು.</p>.<div><blockquote>ಕಾಲೇಜು ವಿದ್ಯಾರ್ಥಿಗಳು ಹಾಗೂ ಯುವಕರು ದುರ್ಗುಣಗಳ ಕಡೆ ವಾಲುತ್ತಿರುವ ಕಳವಳಕಾರಿ. ಕೆಟ್ಟ ಚಟಗಳಿದ್ದರೆ ಅವುಗಳನ್ನು ತ್ಯಜಿಸುವ ಪಣ ತೊಡಬೇಕು</blockquote><span class="attribution">ಕೆ.ಎಸ್. ಲತಾಕುಮಾರಿ ಜಿಲ್ಲಾಧಿಕಾರಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ</strong>: ಆಪತ್ತಿನಲ್ಲಿರುವ ವ್ಯಕ್ತಿಯ ಜೀವವನ್ನು ಉಳಿಸಲು ಸಿ.ಪಿ.ಆರ್. ಹಾಗೂ ಪ್ರಥಮ ಚಿಕಿತ್ಸೆ ಸಹಕಾರಿ ಆಗಲಿದೆ ಎಂದು ಜಿಲ್ಲಾಧಿಕಾರಿ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಜಿಲ್ಲಾ ಶಾಖೆಯ ಅಧ್ಯಕ್ಷೆ ಕೆ.ಎಸ್. ಲತಾಕುಮಾರಿ ಹೇಳಿದರು.</p>.<p>ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಹಾಸನ ಘಟಕದ ವತಿಯಿಂದ ಶನಿವಾರ ಕಾಲೇಜು ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಹೃದಯಾಘಾತ ಮುನ್ನೆಚ್ಚರಿಕೆ, ಪ್ರಥಮ ಚಿಕಿತ್ಸೆ ಹಾಗೂ ಸಿ.ಪಿ.ಆರ್. ವಿಧಾನಗಳ ಬಗ್ಗೆ ಉಚಿತ ತರಬೇತಿ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಬದಲಾದ ಕಾಲಘಟ್ಟದಲ್ಲಿ ಪ್ರಥಮ ಚಿಕಿತ್ಸೆ ಹಾಗೂ ಸಿ.ಪಿ.ಆರ್.ಗಳ ಮಹತ್ವ ಹಾಗೂ ಅಗತ್ಯತೆಯನ್ನು ಒತ್ತಿ ಹೇಳಿದ ಅವರು, ಯಾವುದೇ ಕ್ಲಿಷ್ಟ ಸಂದರ್ಭಗಳು ಎದುರಾದಾಗ ಎಲ್ಲರೂ ಸ್ವಯಂ ಸೇವಕರಾಗಿ ನಿಲ್ಲುವ ಅಗತ್ಯವಿದೆ ಎಂದು ತಿಳಿಸಿದರು.</p>.<p>ವಿದ್ಯಾರ್ಥಿಗಳು ಸೇವಾ ಮನೋಭಾವ ಬೆಳೆಸಿಕೊಂಡು ಸ್ವಯಂ-ಸೇವಾ ಸಂಸ್ಥೆಗಳೊಂದಿಗೆ ಗುರುತಿಸಿಕೊಂಡು ಪರಿಸರ ರಕ್ಷಣೆ-ನಮ್ಮ ಹೊಣೆ ಎಂಬ ಘೋಷ ವಾಕ್ಯದೊಂದಿಗೆ ಸಾಗುತ್ತ ಸಮಯದ ಮಹತ್ವ ಅರಿತು ಸತ್ಪ್ರಜೆಗಳಾಗಿ ಬಾಳುವ ಅನಿವಾರ್ಯತೆ ಇದೆ ಎಂದರು.</p>.<p>ಜಿಲ್ಲಾ ರೆಡ್ ಕ್ರಾಸ್ ಶಾಖೆಯ ಸ್ವಂತ ಕಟ್ಟಡ ಹಾಗೂ ಅಲ್ಲಿರುವ ಮೂಲ ಸೌಕರ್ಯಗಳನ್ನು ವೀಕ್ಷಿಸಿ, ಸಭಾಪತಿ ಹೆಮ್ಮಿಗೆ ಮೋಹನ್ ಅವರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ನಾಗೇಶ್ ಆರಾಧ್ಯ, ರೆಡ್ ಕ್ರಾಸ್ ಸಂಸ್ಥೆಯ ಸಭಾಪತಿ ಹೆಮ್ಮಿಗೆ ಮೋಹನ್, ಖಜಾಂಚಿ ಜಯೇಂದ್ರ ಕುಮಾರ್ ಎಚ್.ಡಿ., ನಿರ್ದೇಶಕರಾದ ಡಾ.ಸಾವಿತ್ರಿ ಮತ್ತು ಅಮ್ಜದ್ಖಾನ್ ಮಾತನಾಡಿದರು.</p>.<p>ಜಿಲ್ಲಾ ರೆಡ್ ಕ್ರಾಸ್ ಕಾರ್ಯದರ್ಶಿ ಶಬ್ಬೀರ್ ಅಹ್ಮದ್ ಸ್ವಾಗತಿಸಿದರು. ಸಂಸ್ಥೆಯ ನಿರ್ದೇಶಕರಾದ ಬಿ.ಆರ್. ಉದಯ ಕುಮಾರ್, ಡಾ.ರಂಗಲಕ್ಷ್ಮಿ, ಎಸ್.ಎಸ್. ಪಾಷ, ಕೆ.ಟಿ. ಜಯಶ್ರೀ, ಜಯಪ್ರಕಾಶ್, ಗಿರೀಶ್, ಭೀಮರಾಜ್, ಮಮತಾ ಪಾಟೀಲ್ ಮತ್ತು ನಿಶ್ಚಿತ ಕುಮಾರಿ ಉಪಸ್ಥಿತರಿದ್ದರು.</p>.<div><blockquote>ಕಾಲೇಜು ವಿದ್ಯಾರ್ಥಿಗಳು ಹಾಗೂ ಯುವಕರು ದುರ್ಗುಣಗಳ ಕಡೆ ವಾಲುತ್ತಿರುವ ಕಳವಳಕಾರಿ. ಕೆಟ್ಟ ಚಟಗಳಿದ್ದರೆ ಅವುಗಳನ್ನು ತ್ಯಜಿಸುವ ಪಣ ತೊಡಬೇಕು</blockquote><span class="attribution">ಕೆ.ಎಸ್. ಲತಾಕುಮಾರಿ ಜಿಲ್ಲಾಧಿಕಾರಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>