ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆ.14ಕ್ಕೆ ಮೆಗಾ ಲೋಕ್ ಅದಾಲತ್: ಐದು ಸಾವಿರ ಪ್ರಕರಣ ಇತ್ಯರ್ಥ ಗುರಿ

Last Updated 14 ಜುಲೈ 2021, 14:33 IST
ಅಕ್ಷರ ಗಾತ್ರ

ಹಾಸನ: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಜಿಲ್ಲೆ ಸೇರಿದಂತೆ ಎಲ್ಲಾ ತಾಲ್ಲೂಕುಗಳಲ್ಲಿ ಆ. 14 ರಂದು "ಮೆಗಾ ಲೋಕ್‌ ಅದಾಲತ್' ಹಮ್ಮಿಕೊಳ್ಳಲಾಗಿದೆ ಎಂದುಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶ ಶಿವಣ್ಣ ಹೇಳಿದರು.

ನ್ಯಾಯಾಲಯದಲ್ಲಿ ಬಾಕಿ ಇರುವ ಎಲ್ಲಾ ವಿಧದ ಸಿವಿಲ್ ವ್ಯಾಜ್ಯಗಳು, ಬಗೆಹರಿಸಬಹುದಾದಅಪರಾಧ ಪ್ರಕರಣಗಳು, ಚೆಕ್ ಬೌನ್ಸ್, ಬ್ಯಾಂಕ್ ವಸೂಲಾತಿ, ಮೋಟಾರು ವಾಹನ,ಕೌಟುಂಬಿಕ, ಭೂಸ್ವಾಧೀನ, ಕಂದಾಯ, ಜನನ ಮತ್ತು ಮರಣ ನೋಂದಣಿ, ಜೀವನಾಂಶಹಾಗೂ ಇತರೆ ಲಘು ಕ್ರಿಮಿನಲ್ ಪ್ರಕರಣಗಳಿಗೆ ಸಂಬಂಧಿಸಿದಂತೆ ಮತ್ತು ವ್ಯಾಜ್ಯಪೂರ್ವಬ್ಯಾಂಕ್ ಸಾಲ ಮರುಪಾವತಿಯ ಪ್ರಕರಣ ಇತ್ಯರ್ಥಪಡಿಸಿಕೊಳ್ಳಲು ಅವಕಾಶವಿದೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಕಕ್ಷಿದಾರರು ವಕೀಲರ ಮೂಲಕ ಅಥವಾ ಖುದ್ದಾಗಿ ರಾಜಿ ಸಂಧಾನದ ಮೂಲಕ ಪ್ರಕರಣಇತ್ಯರ್ಥಪಡಿಕೊಳ್ಳಬಹುದು. ರಾಜಿ ತೀರ್ಮಾನವಾದ ಪ್ರಕರಣಗಳು ಮತ್ತೆ ಮೇಲ್ಮನವಿಗೆಅವಕಾಶ ಇಲ್ಲ. ರಾಜಿ ಪ್ರಕ್ರಿಯೆಯಿಂದ ನ್ಯಾಯಾಲಯದ ಸಮಯ, ಹಣ ಉಳಿಸಬಹುದಾಗಿದ್ದು, ಉಭಯ ಕಕ್ಷಿದಾರರ ನಡುವಿನ ಬಾಂಧವ್ಯವು ವೃದ್ಧಿಸುವುದು ಎಂದರು.

ಹಾಸನದ ಎಲ್ಲಾ ನ್ಯಾಯಾಲಯಗಳಲ್ಲಿ ಒಟ್ಟು 73,158 ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳುಬಾಕಿ ಇದ್ದು, ರಾಜಿ ಸಂಧಾನಕ್ಕಾಗಿ ಎಲ್ಲಾ ರೀತಿಯ ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಒಳಗೊಂಡಂತೆ ಅರ್ಹ 2,522 ಪ್ರಕರಣಗಳನ್ನು ಈಗಾಗಲೇ ಗುರುತಿಸಲಾಗಿದೆ. ಲೋಕ್ ಅದಾಲತ್ ಮುನ್ನ 10 ಸಾವಿರಕ್ಕೂ ಅಧಿಕ ಪ್ರಕರಣಗಳನ್ನು ಗುರುತಿಸುವ ಗುರಿ ಹೊಂದಲಾಗಿದೆಎಂದು ವಿವರಿಸಿದರು.

ಕಳೆದ ಮಾರ್ಚ್ 27 ರಂದು ನಡೆದ ಲೋಕ್ ಅದಾಲತ್ ನಲ್ಲಿ ಒಟ್ಟು 11,618ಪ್ರಕರಣಗಳನ್ನು ರಾಜಿ ಸಂಧಾನಕ್ಕಾಗಿ ಗುರುತಿಸಿ, ಒಟ್ಟು 4,165 ನ್ಯಾಯಾಲಯದಲ್ಲಿಇತ್ಯರ್ಥ ಪಡಿಸಲಾಗಿತ್ತು. ಅದರಂತೆಯೇ ವಕೀಲರ, ಕಕ್ಷಿದಾರರ ಹಾಗೂ ಸಂಬಂಧಪಟ್ಟ ಇಲಾಖೆಗಳ ಸಹಕಾರದೊಂದಿಗೆ ಸುಮಾರು 5 ಸಾವಿರ ಕ್ಕೂ ಹೆಚ್ಚಿನ ಪ್ರಕರಣಗಳನ್ನು ಇತ್ಯರ್ಥ
ಮಾಡುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಕೋವಿಡ್ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಾರದ ಕಾರಣ ನಿತ್ಯ ಪ್ರತಿ ನ್ಯಾಯಾಲಯದಲ್ಲಿ ಕನಿಷ್ಟ 40 ಪ್ರಕರಣಗಳಿಗೆ ಮಾತ್ರ ವಾದ ಮಂಡಿಸಲು ಅವಕಾಶ ನೀಡಲಾಗಿದೆ. ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆ ಎಂದರು.

ವಕೀಲರ ಸಂಘದ ಅಧ್ಯಕ್ಷ ಜೆ.ಪಿ.ಶೇಖರ್ ಮಾತನಾಡಿ, ರಾಜಿ ತೀರ್ಮಾನ ಮಾಡುವುದಕ್ಕೆ ವಕೀಲರು ಹಿಂದೇಟು ಹಾಕುತ್ತಿದ್ದಾರೆ ಎಂಬ ಭಾವನೆಗಳು ತಪ್ಪಾಗಿದೆ. ಹೆಚ್ಚು ಪ್ರಕರಣಗಳುವಿಲೇವಾರಿಯಾದಷ್ಟು ವಕೀಲರಿಗೂ ಅನುಕೂಲವಾಗುತ್ತದೆ. ಹಾಗಾಗಿ ಕಕ್ಷಿದಾದರು ಯಾವುದೇಆತಂಕವಿಲ್ಲದೆ ಈ ಅವಕಾಶವನ್ನು ಬಳಕೆ ಮಾಡಿಕೊಳ್ಳಬೇಕು ಎಂದು ಮನವಿ ಮಾಡಿದರು.

ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾ. ಬಿ.ಕೆ.ರವಿಕಾಂತ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT