ಹಾಸನ: ನಗರದ ಹೇಮಾವತಿ ಪ್ರತಿಮೆ ಪಕ್ಕದಲ್ಲಿ ಸ್ಥಳೀಯ ಶಾಸಕರ ಕ್ಷೇಮಾಭಿವೃದ್ಧಿ ನಿಧಿಯಲ್ಲಿ ನಿರ್ಮಿಸುತ್ತಿರುವ ಟ್ಯಾಕ್ಸಿ ಸ್ಟ್ಯಾಂಡ್ನಲ್ಲಿ ಜನಪ್ರತಿನಿಧಿಗಳ ನಾಮಫಲಕ ಅಳವಡಿಕೆ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರ ಪ್ರತಿಷ್ಠೆಯಾಗಿದ್ದು ಶನಿವಾರ ರಾತ್ರಿ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸ್ ಭದ್ರತೆಯಲ್ಲಿ ಸದ್ಯ ಸಹಜಸ್ಥಿತಿ ಇದೆ.