‘ಸರ್ಕಲ್ ಇನ್ಸ್ಪೆಕ್ಟರ್ಗೆ ಸರ್ಕಾರ ಮಂಡಿಯೂರಿದೆ. ಇದೆಲ್ಲಾ ಸಿ.ಎಂ ಹಾಗೂ ಗೃಹ ಸಚಿವರ ಗಮನಕ್ಕೆ ಇದೆಯೋ ಇಲ್ಲವೋ ಗೊತ್ತಿಲ್ಲ. ಹೊಳೆನರಸೀಪುರ, ಚನ್ನರಾಯಪಟ್ಟಣಗಳಲ್ಲಿ ನಿತ್ಯ ಕೊಲೆಗಳು ಆಗುತ್ತಿವೆ. ಜಿಲ್ಲೆಯಲ್ಲಿ ಅಧಿಕಾರಿಗಳ ವರ್ಗಾವಣೆ ದಂಧೆ ನಡೆಯುತ್ತಿದೆ. ಚನ್ನರಾಯಪಟ್ಟಣ ಸಿಪಿಐ ₹25 ಲಕ್ಷ ನೀಡಿ ಬಂದಿದ್ದಾರೆ. ಗುಮಾಸ್ತರ ವರ್ಗಾವಣೆಗೆ ₹10, ₹20 ಸಾವಿರ ನಡೆಯುತ್ತಿದೆ. ಹೇಳುವವರು, ಕೇಳುವವರು ಯಾರು ಇಲ್ಲ. ಸುರೇಶ್ನನ್ನು ಜಿಲ್ಲೆಗೆ ವರ್ಗಾವಣೆ ಮಾಡುವುದಿಲ್ಲ ಎಂದು ಉಸ್ತುವಾರಿ ಸಚಿವ ಗೋಪಾಲಯ್ಯ ಹೇಳಿದ್ದರು. ಇದು ಅವರ ಗಮನಕ್ಕೆಬಂದಿದೆಯೋ, ಇಲ್ಲವೋ ಗೊತ್ತಿಲ್ಲ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.