ಹಾಸನ: ಮೂರನೇ ಅಲೆಯು ಮಕ್ಕಳ ಮೇಲೆ ಹೆಚ್ಚು ಪರಿಣಾಮ ಬೀರುವುದರಿಂದ ಅಗತ್ಯ ಸಿದ್ಧತೆಗಳ ಬಗ್ಗೆ ಹೆಚ್ಚಿನ ಗಮನಹರಿಸಬೇಕು ಎಂದು ಜಿಲ್ಲಾಧಿಕಾರಿ ಆರ್. ಗಿರೀಶ್ ಅವರುಅಧಿಕಾರಿಗಳಿಗೆ ಸೂಚಿಸಿದರು.
ಕೋವಿಡ್ 19 ಕುರಿತು ಗುರುವಾರ ತಹಶೀಲ್ದಾರ್ ಹಾಗೂ ಅಧಿಕಾರಿಗಳಸಭೆ ನಡೆಸಿ ಮಾತನಾಡಿದ ಅವರು, ಕೋವಿಡ್ ಸೋಂಕು ಗಣನೀಯವಾಗಿ ಕಡಿಮೆಯಾಗುತ್ತಿಲ್ಲ.ಆದ್ದರಿಂದಕೋವಿಡ್ ಕೇರ್ ಸೆಂಟರ್ ಗಳಿಗೆ ಕರೆ ತಂದು ಸೂಕ್ತ ಚಿಕಿತ್ಸೆ ನೀಡಬೇಕು ಎಂದುಹೇಳಿದರು.
ಶೇಕಡಾ 20ಕ್ಕಿಂತ ಅಧಿಕ ಸೋಂಕು ಇರುವ ಗ್ರಾಮಗಳ ಮೇಲೆ ಹೆಚ್ಚಿನ ಗಮನ ಹರಿಸಬೇಕು. ಈ ಹಿಂದೆ ಪಾಸಿಟಿವ್ ಬಂದಿರುವವರನ್ನು ಹೋಂ ಐಸೋಲೇಶನ್ ನಲ್ಲಿರಿಸಬೇಕು ಜೊತೆಗೆಸೋಂಕಿತರ ಕುಟುಂಬದವರನ್ನೂ ರ್ಯಾಟ್ ಪರೀಕ್ಷೆಗೊಳಪಡಿಸಬೇಕು. ನಂತರ ಆರ್ಟಿ–ಪಿಸಿಆರ್ಪರೀಕ್ಷೆಗೆ ಒಳಪಡಿಸಬೇಕು. ಗ್ರಾಮಗಳಲ್ಲಿ ಶುಚಿತ್ವ, ಮಾಸ್ಕ್, ಸ್ಯಾನಿಟೈಸರ್ ಜೊತೆಗೆ ಅಂತರ ಕಾಪಾಡಿಕೊಳ್ಳುವಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು ಎಂದು ನಿರ್ದೇಶನ ನೀಡಿದರು.
ಆರ್ಟಿ–ಪಿಸಿಆರ್ ಪರೀಕ್ಷೆ ಗುರಿ ಹೆಚ್ಚಿಸುವುದರ ಜೊತೆಗೆ ಲಸಿಕೆ ತೆಗೆದುಕೊಳ್ಳುವಂತೆಜನರಲ್ಲಿ ಜಾಗೃತಿ ಮೂಡಿಸಬೇಕು ಎಂದರು.
ವೈದ್ಯರ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ 3ನೇ ಸುತ್ತಿನ ತಪಾಸಣೆ ಮುಂದಿನ ದಿನಗಳಲ್ಲಿಪೂರ್ಣಗೊಳಿಸುವಂತೆ ಆದೇಶಿಸಿದ ಅವರು, ಲಾಕ್ಡೌನ್ ಸಡಿಲಿಕೆ ಹಿನ್ನೆಲೆಯಲ್ಲಿ ಸಾರ್ವಜನಿಕರುಮಾಸ್ಕ್ ಧರಿಸದೆ, ಅಂತರ ಪಾಲನೆ ಮಾಡದೆ ಓಡಾಡುತ್ತಿದ್ದಾರೆ. ಕಸ ಸಂಗ್ರಹ ವಾಹನಗಳಲ್ಲಿ ಧ್ವನಿವರ್ದಕದ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವಂತೆ ಸೂಚನೆ ನೀಡಿದರು.
ವಿಡಿಯೋ ಸಂವಾದದ ಮೂಲಕ ಮಾತನಾಡಿ ಶಾಸಕ ಎಚ್.ಡಿ ರೇವಣ್ಣ, ಹೊಳೆನರಸೀಪುರದ ತಾಲ್ಲೂಕು ಮಕ್ಕಳ ಆಸ್ಪತ್ರೆಗಳಲ್ಲಿ ಬೆಡ್ಗಳ ಸಂಖ್ಯೆ ಹೆಚ್ಚಿಸಲಾಗಿದ್ದು, ಅದಕ್ಕೆ ಬೇಕಾಗುವ ತಾಂತ್ರಿಕತೆಗಳ ಸಹಕಾರ ನೀಡುವಂತೆ ಜಿಲ್ಲಾಧಿಕಾರಿಗೆ ತಿಳಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಬಿ.ಎ. ಪರಮೇಶ ಮಾತನಾಡಿ,ಕೋವಿಡ್ ನಿಯಂತ್ರಣಕ್ಕೆ ಆಶಾ ಕಾರ್ಯಕರ್ತೆಯರ ಜೊತೆಯಲ್ಲಿ ಗ್ರಾಮೀಣ ಭಾಗದ ಸ್ವ ಸಹಾಯಸಂಘಗಳ ಸಹಕಾರ ಪಡೆದುಕೊಳ್ಳುವಂತೆ ಸೂಚಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಕವಿತ ರಾಜಾರಾಂ, ಉಪವಿಭಾಗಾಧಿಕಾರಿಗಳಾದ ಬಿ.ಎ ಜಗದೀಶ್, ಗಿರೀಶ್ ನಂದನ್, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಕೃಷ್ಣಮೂರ್ತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್, ಆರ್.ಸಿ ಎಚ್ ಅಧಿಕಾರಿ ಡಾ. ಕಾಂತರಾಜು, ಮಕ್ಕಳ ತಜ್ಞ ಡಾ. ಮನುಪ್ರಕಾಶ್ ಹಾಜರಿದ್ದರು.