ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಕಲೇಶಪುರ | ಮಧ್ಯಾಹ್ನದ ಊಟ ಸೇವಿಸಿ 35 ಸೈನಿಕರು ಅಸ್ವಸ್ಥ

Published 7 ಜೂನ್ 2023, 13:33 IST
Last Updated 7 ಜೂನ್ 2023, 13:33 IST
ಅಕ್ಷರ ಗಾತ್ರ

ಸಕಲೇಶಪುರ (ಹಾಸನ): ತಾಲ್ಲೂಕಿನ ಕುಡುಗರಹಳ್ಳಿಯ ಸೇನಾ ಕ್ಯಾಂಪ್‌ನಲ್ಲಿ ಚಾಲನಾ ತರಬೇತಿಗೆ ಬಂದಿದ್ದ 35ಕ್ಕೂ ಹೆಚ್ಚು ಸೈನಿಕರು, ಮಧ್ಯಾಹ್ನದ ಊಟ ಸೇವಿಸಿದ ನಂತರ ಅಸ್ವಸ್ಥಗೊಂಡಿದ್ದಾರೆ.

ಕ್ಯಾಂಪ್‌ನಲ್ಲಿ ಬುಧವಾರ ಮಧ್ಯಾಹ್ನ ಊಟ ಮಾಡಿದ್ದ ಸೈನಿಕರಿಗೆ ಭೇದಿ ಶುರುವಾಗಿದೆ. ಅಸ್ವಸ್ಥಗೊಂಡಿದ್ದ ಎಲ್ಲ ಸೈನಿಕರನ್ನು ಇಲ್ಲಿ ಕ್ರಾಫರ್ಡ್‌ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಎಲ್ಲ ಸೈನಿಕರು ಆರೋಗ್ಯವಾಗಿದ್ದು, ಆತಂಕ ಪಡುವ ಅಗತ್ಯವಿಲ್ಲ. ಎಲ್ಲರೂ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

ಆಸ್ಪತ್ರೆಗೆ ಭೇಟಿ ನೀಡಿದ ಶಾಸಕ ಸಿಮೆಂಟ್ ಮಂಜು, ಅಸ್ವಸ್ಥಗೊಂಡಿರುವ ಸೈನಿಕರ ಆರೋಗ್ಯ ವಿಚಾರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT