‘ರಾಷ್ಟ್ರೀಯ ಹೆದ್ದಾರಿ ಕಾಮಗಾರಿ 2019ಕ್ಕೆ ಪೂರ್ಣವಾಗಬೇಕಿತ್ತು. ಗುತ್ತಿಗೆದಾರರ ವಿಳಂಬ ಹಾಗೂ ಸರ್ಕಾರದ ನಿರ್ಲಕ್ಷ್ಯದಿಂದಾಗಿ ಶೇ 30 ರಷ್ಟು ಕಾಮಗಾರಿ ಮಾತ್ರ ಆಗಿದೆ. ಜನ ನಿತ್ಯ ತೊಂದರೆ ಅನುಭವಿಸುತ್ತಿದ್ದಾರೆ. ಸಂಘ ಸಂಸ್ಥೆಗಳು ಮತ್ತು ರೈತರ ಸಭೆ ನಡೆಸಿ ಜಾಥಾ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು. ಇದು ಕಾಂಗ್ರೆಸ್ ಹಮ್ಮಿಕೊಂಡಿರುವ ಪಾದಯಾತ್ರೆಗೆ ಪರ್ಯಾಯವಲ್ಲ ಅಥವಾ ಪಕ್ಷ ಸಂಘಟನೆ ಉದ್ದೇಶಕ್ಕೂ ಅಲ್ಲ’ ಎಂದು ಸ್ಪಷ್ಟಪಡಿಸಿದರು.