<p><strong>ಸಕಲೇಶಪುರ (ಹಾಸನ): </strong>ತಾಲ್ಲೂಕಿನ ಕಾಡುಮನೆ ಬಳಿ ಗುರುವಾರ ರಣಭಿಕ್ತಿ ರಕ್ಷಿತಾರಣ್ಯದಲ್ಲಿ ಬೆಂಕಿ ನಂದಿಸಲು ಹೋಗಿ ಗಾಯಗೊಂಡಿದ್ದ ಅರಣ್ಯ ಇಲಾಖೆಯ ಗಾರ್ಡ್ ಸುಂದರೇಶ್ ಶನಿವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ.</p>.<p>ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಫಾರೆಸ್ಟರ್ ಮಂಜುನಾಥ ಹಾಗೂ ಗಾರ್ಡ್ ಸುಂದರೇಶ್ ಅವರನ್ನು ಬೆಂಗಳೂರಿನ ಸೇಂಟ್ ಜಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶಾಸಕ ಎಚ್.ಕೆ. ಕುಮಾರಸ್ವಾಮಿ ಆಸ್ಪತ್ರೆಗೆ ಭೇಟಿ ನೀಡಿ, ಗಾಯಾಳುಗಳ ಆರೋಗ್ಯ ವಿಚಾರಿಸಿದ್ದರು.</p>.<p>ಕಾಡುಮನೆ ಇಟ್ಟಿಗೆ ಗೂಡು ಪ್ರದೇಶದಲ್ಲಿ ಬೆಂಕಿ ಹತ್ತಿ ಕೊಂಡಾಗ ಅರಣ್ಯ ಇಲಾಖೆ ಅಧಿಕಾರಿಗಳು ಅಲ್ಲಿಗೆ ತೆರಳಿದ್ದರು. ಗಾಳಿಯ ತೀವ್ರತೆಗೆ ಬೆಂಕಿ ಎಲ್ಲೆಡೆ ಆವರಿಸಿದ್ದರಿಂದ ಅರಣ್ಯ ಇಲಾಖೆಯ ನಾಲ್ವರು ಸಿಬ್ಬಂದಿ ಗಾಯಗೊಂಡಿದ್ದರು.</p>.<p>ಶೇ 80 ರಷ್ಟು ಸುಟ್ಟ ಗಾಯಗಳಾಗಿದ್ದ ಸುಂದರೇಶ್ ಅವರ ಸ್ಥಿತಿ ಚಿಂತಾಜನಕವಾಗಿತ್ತು. ಅದಕ್ಕಾಗಿಯೇ ಝೀರೋ ಟ್ರಾಫಿಕ್ನಲ್ಲಿ ಸುಂದರೇಶ್ ಹಾಗೂ ಮಂಜುನಾಥ ಅವರನ್ನು ಬೆಂಗಳೂರಿಗೆ ಆಸ್ಪತ್ರೆಗೆ ರವಾನಿಸಲಾಗಿತ್ತು. ಸುಂದರೇಶ್, ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ.</p>.<p>ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯವರಾದ ಸುಂದರೇಶ್ ಅವರ ಮೃತದೇಹಕ್ಕೆ ಹಾಸನದ ಅರಣ್ಯ ಇಲಾಖೆಯಿಂದ ಗೌರವಾರ್ಪಣೆ ಸಲ್ಲಿಸಿದ ಬಳಿಕ ಸ್ವಗ್ರಾಮಕ್ಕೆ ಕಳುಹಿಸಲಾಗುವುದು. ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಕಲೇಶಪುರ (ಹಾಸನ): </strong>ತಾಲ್ಲೂಕಿನ ಕಾಡುಮನೆ ಬಳಿ ಗುರುವಾರ ರಣಭಿಕ್ತಿ ರಕ್ಷಿತಾರಣ್ಯದಲ್ಲಿ ಬೆಂಕಿ ನಂದಿಸಲು ಹೋಗಿ ಗಾಯಗೊಂಡಿದ್ದ ಅರಣ್ಯ ಇಲಾಖೆಯ ಗಾರ್ಡ್ ಸುಂದರೇಶ್ ಶನಿವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ.</p>.<p>ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಫಾರೆಸ್ಟರ್ ಮಂಜುನಾಥ ಹಾಗೂ ಗಾರ್ಡ್ ಸುಂದರೇಶ್ ಅವರನ್ನು ಬೆಂಗಳೂರಿನ ಸೇಂಟ್ ಜಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶಾಸಕ ಎಚ್.ಕೆ. ಕುಮಾರಸ್ವಾಮಿ ಆಸ್ಪತ್ರೆಗೆ ಭೇಟಿ ನೀಡಿ, ಗಾಯಾಳುಗಳ ಆರೋಗ್ಯ ವಿಚಾರಿಸಿದ್ದರು.</p>.<p>ಕಾಡುಮನೆ ಇಟ್ಟಿಗೆ ಗೂಡು ಪ್ರದೇಶದಲ್ಲಿ ಬೆಂಕಿ ಹತ್ತಿ ಕೊಂಡಾಗ ಅರಣ್ಯ ಇಲಾಖೆ ಅಧಿಕಾರಿಗಳು ಅಲ್ಲಿಗೆ ತೆರಳಿದ್ದರು. ಗಾಳಿಯ ತೀವ್ರತೆಗೆ ಬೆಂಕಿ ಎಲ್ಲೆಡೆ ಆವರಿಸಿದ್ದರಿಂದ ಅರಣ್ಯ ಇಲಾಖೆಯ ನಾಲ್ವರು ಸಿಬ್ಬಂದಿ ಗಾಯಗೊಂಡಿದ್ದರು.</p>.<p>ಶೇ 80 ರಷ್ಟು ಸುಟ್ಟ ಗಾಯಗಳಾಗಿದ್ದ ಸುಂದರೇಶ್ ಅವರ ಸ್ಥಿತಿ ಚಿಂತಾಜನಕವಾಗಿತ್ತು. ಅದಕ್ಕಾಗಿಯೇ ಝೀರೋ ಟ್ರಾಫಿಕ್ನಲ್ಲಿ ಸುಂದರೇಶ್ ಹಾಗೂ ಮಂಜುನಾಥ ಅವರನ್ನು ಬೆಂಗಳೂರಿಗೆ ಆಸ್ಪತ್ರೆಗೆ ರವಾನಿಸಲಾಗಿತ್ತು. ಸುಂದರೇಶ್, ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ.</p>.<p>ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯವರಾದ ಸುಂದರೇಶ್ ಅವರ ಮೃತದೇಹಕ್ಕೆ ಹಾಸನದ ಅರಣ್ಯ ಇಲಾಖೆಯಿಂದ ಗೌರವಾರ್ಪಣೆ ಸಲ್ಲಿಸಿದ ಬಳಿಕ ಸ್ವಗ್ರಾಮಕ್ಕೆ ಕಳುಹಿಸಲಾಗುವುದು. ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>