<p><strong>ಅರಕಲಗೂಡು</strong>: ‘ಪಕ್ಷ ನೀಡಿದ್ದ ಜವಾಬ್ದಾರಿಗಳಿಂದ ಮುಕ್ತಗೊಳಿಸಿ ನನಗೆ ನೋಟಿಸ್ ಕೊಟ್ಟವ ಅವಿವೇಕಿ. ನೋಟಿಸ್ ಕೊಡಲು ಅಧಿಕಾರವೇ ಇಲ್ಲ. ಪಕ್ಷ ವಿರೋಧಿ ಚಟುವಟಿಕೆ ಮಾಡಿದಾಗ ಮಾತ್ರ ನನಗೆ ಅಧ್ಯಕ್ಷರು ನೋಟಿಸ್ ಕೊಡಬೇಕು’ ಎಂದು ಬಿಜೆಪಿ ಮುಖಂಡ ಎ.ಮಂಜು ಆಕ್ರೋಶ ವ್ಯಕ್ತಪಡಿಸಿದರು.</p>.<p>ಪಟ್ಟಣದಲ್ಲಿ ಮಂಗಳವಾರ ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು ಮತ್ತು ಮುಖಂಡರ ಸಭೆಯಲ್ಲಿ ಅವರು ವಿಷಯ ಪ್ರಸ್ತಾಪಿಸಿ ಕಣ್ಣೀರಿಟ್ಟರು.</p>.<p>ಎ.ಮಂಜು ಅವರ ಮಗ ಡಾ.ಮಂಥರ್ ಗೌಡ ಅವರು ವಿಧಾನ ಪರಿಷತ್ ಚುನಾವಣೆಯಲ್ಲಿ ಕೊಡಗು ಕ್ಷೇತ್ರದಿಂದ ಸ್ಪರ್ಧಿಸಿದ್ದಕ್ಕೆ ಬಿಜೆಪಿ ಮಂಜು ಅವರಿಗೆ ಇತ್ತೀಚೆಗೆ ನೋಟಿಸ್ ನೀಡಿತ್ತು.</p>.<p>‘ನನ್ನ ಮೇಲೆ ನಂಬಿಕೆ ಇಲ್ಲವೆಂದರೆ ಮಗನ ಪರ ಪ್ರಚಾರ ಮಾಡುತ್ತೇನೆ. ಇರುವ ಒಬ್ಬ ಮಗನನ್ನು ಕಳೆದುಕೊಳ್ಳಲು ಆಗುವುದಿಲ್ಲ. ಬಿಜೆಪಿ ನನಗೆ ಯಾವ ಹುದ್ದೆಯನ್ನು ಕೊಟ್ಟಿಲ್ಲ. ಸಂಘಟನೆ ಜವಾಬ್ದಾರಿ ಹೊತ್ತಿದ್ದೆ ಅಷ್ಟೇ. ಈ ಷಡ್ಯಂತ್ರದ ಹಿಂದೆ ಯಾರ ಕೈವಾಡ ಇದೆ ಎಂಬ ಬಗ್ಗೆ ಸಂದರ್ಭ ಬಂದಾಗ ಮಾತನಾಡುತ್ತೇನೆ’ ಎಂದರು.</p>.<p>‘ಚುನಾವಣೆಯಲ್ಲಿ ಯಾವ ಪಕ್ಷದ ಅಭ್ಯರ್ಥಿಗೆ ಬೆಂಬಲ ನೀಡಬೇಕು ಎನ್ನುವ ಕುರಿತು ಸ್ಥಳೀಯ ಚುನಾಯಿತ ಪ್ರತಿನಿಧಿಗಳು ಮತ್ತು ಮುಖಂಡರ ಅಭಿಪ್ರಾಯ ಪಡೆದು ನಿರ್ಧರಿಸುವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅರಕಲಗೂಡು</strong>: ‘ಪಕ್ಷ ನೀಡಿದ್ದ ಜವಾಬ್ದಾರಿಗಳಿಂದ ಮುಕ್ತಗೊಳಿಸಿ ನನಗೆ ನೋಟಿಸ್ ಕೊಟ್ಟವ ಅವಿವೇಕಿ. ನೋಟಿಸ್ ಕೊಡಲು ಅಧಿಕಾರವೇ ಇಲ್ಲ. ಪಕ್ಷ ವಿರೋಧಿ ಚಟುವಟಿಕೆ ಮಾಡಿದಾಗ ಮಾತ್ರ ನನಗೆ ಅಧ್ಯಕ್ಷರು ನೋಟಿಸ್ ಕೊಡಬೇಕು’ ಎಂದು ಬಿಜೆಪಿ ಮುಖಂಡ ಎ.ಮಂಜು ಆಕ್ರೋಶ ವ್ಯಕ್ತಪಡಿಸಿದರು.</p>.<p>ಪಟ್ಟಣದಲ್ಲಿ ಮಂಗಳವಾರ ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು ಮತ್ತು ಮುಖಂಡರ ಸಭೆಯಲ್ಲಿ ಅವರು ವಿಷಯ ಪ್ರಸ್ತಾಪಿಸಿ ಕಣ್ಣೀರಿಟ್ಟರು.</p>.<p>ಎ.ಮಂಜು ಅವರ ಮಗ ಡಾ.ಮಂಥರ್ ಗೌಡ ಅವರು ವಿಧಾನ ಪರಿಷತ್ ಚುನಾವಣೆಯಲ್ಲಿ ಕೊಡಗು ಕ್ಷೇತ್ರದಿಂದ ಸ್ಪರ್ಧಿಸಿದ್ದಕ್ಕೆ ಬಿಜೆಪಿ ಮಂಜು ಅವರಿಗೆ ಇತ್ತೀಚೆಗೆ ನೋಟಿಸ್ ನೀಡಿತ್ತು.</p>.<p>‘ನನ್ನ ಮೇಲೆ ನಂಬಿಕೆ ಇಲ್ಲವೆಂದರೆ ಮಗನ ಪರ ಪ್ರಚಾರ ಮಾಡುತ್ತೇನೆ. ಇರುವ ಒಬ್ಬ ಮಗನನ್ನು ಕಳೆದುಕೊಳ್ಳಲು ಆಗುವುದಿಲ್ಲ. ಬಿಜೆಪಿ ನನಗೆ ಯಾವ ಹುದ್ದೆಯನ್ನು ಕೊಟ್ಟಿಲ್ಲ. ಸಂಘಟನೆ ಜವಾಬ್ದಾರಿ ಹೊತ್ತಿದ್ದೆ ಅಷ್ಟೇ. ಈ ಷಡ್ಯಂತ್ರದ ಹಿಂದೆ ಯಾರ ಕೈವಾಡ ಇದೆ ಎಂಬ ಬಗ್ಗೆ ಸಂದರ್ಭ ಬಂದಾಗ ಮಾತನಾಡುತ್ತೇನೆ’ ಎಂದರು.</p>.<p>‘ಚುನಾವಣೆಯಲ್ಲಿ ಯಾವ ಪಕ್ಷದ ಅಭ್ಯರ್ಥಿಗೆ ಬೆಂಬಲ ನೀಡಬೇಕು ಎನ್ನುವ ಕುರಿತು ಸ್ಥಳೀಯ ಚುನಾಯಿತ ಪ್ರತಿನಿಧಿಗಳು ಮತ್ತು ಮುಖಂಡರ ಅಭಿಪ್ರಾಯ ಪಡೆದು ನಿರ್ಧರಿಸುವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>