<p><strong>ಹಾಸನ</strong>: ವೈದ್ಯ ಗುರುರಾಜ್ ಹೆಬ್ಬಾರ್ ಅವರ ಕನಸಿನ ಕೂಸುಟ್ರಾಮಾ ಸೆಂಟರ್ ಕಟ್ಟಡದ ಶಂಕುಸ್ಥಾಪನೆಯನ್ನು ಶುಕ್ರವಾರ ನಗರಸಭೆ ಪೌರಾಯುಕ್ತ ಪರಮೇಶ್ವರಪ್ಪ ಮತ್ತು ಹಿಮ್ಸ್ ನಿರ್ದೇಶಕ ಡಾ.ಬಿ.ಸಿ.ರವಿಕುಮಾರ್ ನೆರವೇರಿಸಿದರು.</p>.<p>ನಗರದ ಸಾಲಗಾಮೆ ರಸ್ತೆಯ ಎಂ. ಕೃಷ್ಣ ಅಂಧ ಮಕ್ಕಳ ಶಾಲೆ ಹಿಂಭಾಗದಜನಕಲ್ಯಾಣ ರಿಸರ್ಚ್ ಅಂಡ್ ಚಾರಿಟಬಲ್ ಟ್ರಸ್ಟ್ ಆಶ್ರಯದಲ್ಲಿ ಟ್ರಾಮಾಸೆಂಟರ್ ನಿರ್ಮಿಸಲಾಗುತ್ತಿದೆ.</p>.<p>ನಗರಸಭೆ ಪೌರಾಯುಕ್ತ ಪರಮೇಶ್ವರಪ್ಪ ಮಾತನಾಡಿ, ‘ಕಡಿಮೆ ಬೆಲೆಯಲ್ಲಿ ಸೂಕ್ತ ಚಿಕಿತ್ಸೆ ನೀಡಲು ಟ್ರಸ್ಟ್ನಿಂದ ಟ್ರಾಮಾ ಸೆಂಟರ್ ನಿರ್ಮಿಸಲಾಗುತ್ತಿದ್ದು, ಹಾಸನದ ಜನತೆ ಸದುಪಯೋಗ ಪಡೆದುಕೊಳ್ಳಬೇಕು’ ಎಂದು ಹೇಳಿದರು.</p>.<p>ಡಾ.ಬಿ.ಸಿ.ರವಿಕುಮಾರ್ ಮಾತನಾಡಿ, ‘ಬಡ ಜನರಿಗೆ ಕೈಗೆಟಕುವ ಬೆಲೆಯಲ್ಲಿ ಚಿಕಿತ್ಸೆ ಸಿಗಬೇಕು ಎನ್ನುವ ನಿಟ್ಟಿನಲ್ಲಿ ₹3 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಸೆಂಟರ್ ನಿರ್ಮಿಸಲಾಗುತ್ತಿದೆ. ಸರ್ಕಾರದಿಂದಲೂ ನೆರವು ಸಿಗಬೇಕಾಗಿದೆ’ ಎಂದು ತಿಳಿಸಿದರು.</p>.<p>ಟ್ರಸ್ಟ್ ಅಧ್ಯಕ್ಷ ಬಿ.ವಿ.ಕರೀಗೌಡಮಾತನಾಡಿ, ‘ಬಡ ರೋಗಿಗಳಿಗೆ ನೆರವಾಗಬೇಕೆಂಬ ಉದ್ದೇಶದಿಂದ ಈ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ. ಟ್ರಾಮಾ ಸೆಂಟರ್ ನಿರ್ಮಾಣಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ’ ಎಂದು ನುಡಿದರು.</p>.<p>ಟ್ರಸ್ಟ್ ಖಜಾಂಚಿ ಸಣ್ಣ ಮಂಜೇಗೌಡ, ಸಂಘಟನಾ ಕಾರ್ಯದರ್ಶಿ ಬಿ.ಕೆ. ಶಾಮರಾಜು, ಸದಸ್ಯರಾದ ಮಂಜೇಗೌಡ, ದಲಿಚಂದ್ ಎಂ. ಜೈನ್, ಎಚ್.ಆರ್. ನೇತ್ರಾವತಿ ಬಸವರಾಜು, ಚಂದ್ರಶೇಖರ್, ಡಿ.ಎಸ್. ಬಸವರಾಜು, ಕಾವ್ಯಾ, ತೇಜವತಿ ನಾಗೇಂದ್ರ, ಡಾ. ಆರ್.ಎಚ್. ಅನಂತರಾಮು, ಗಿರಿಗೌಡ, ರತ್ನಮ್ಮ ಕೃಷ್ಣೇಗೌಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ</strong>: ವೈದ್ಯ ಗುರುರಾಜ್ ಹೆಬ್ಬಾರ್ ಅವರ ಕನಸಿನ ಕೂಸುಟ್ರಾಮಾ ಸೆಂಟರ್ ಕಟ್ಟಡದ ಶಂಕುಸ್ಥಾಪನೆಯನ್ನು ಶುಕ್ರವಾರ ನಗರಸಭೆ ಪೌರಾಯುಕ್ತ ಪರಮೇಶ್ವರಪ್ಪ ಮತ್ತು ಹಿಮ್ಸ್ ನಿರ್ದೇಶಕ ಡಾ.ಬಿ.ಸಿ.ರವಿಕುಮಾರ್ ನೆರವೇರಿಸಿದರು.</p>.<p>ನಗರದ ಸಾಲಗಾಮೆ ರಸ್ತೆಯ ಎಂ. ಕೃಷ್ಣ ಅಂಧ ಮಕ್ಕಳ ಶಾಲೆ ಹಿಂಭಾಗದಜನಕಲ್ಯಾಣ ರಿಸರ್ಚ್ ಅಂಡ್ ಚಾರಿಟಬಲ್ ಟ್ರಸ್ಟ್ ಆಶ್ರಯದಲ್ಲಿ ಟ್ರಾಮಾಸೆಂಟರ್ ನಿರ್ಮಿಸಲಾಗುತ್ತಿದೆ.</p>.<p>ನಗರಸಭೆ ಪೌರಾಯುಕ್ತ ಪರಮೇಶ್ವರಪ್ಪ ಮಾತನಾಡಿ, ‘ಕಡಿಮೆ ಬೆಲೆಯಲ್ಲಿ ಸೂಕ್ತ ಚಿಕಿತ್ಸೆ ನೀಡಲು ಟ್ರಸ್ಟ್ನಿಂದ ಟ್ರಾಮಾ ಸೆಂಟರ್ ನಿರ್ಮಿಸಲಾಗುತ್ತಿದ್ದು, ಹಾಸನದ ಜನತೆ ಸದುಪಯೋಗ ಪಡೆದುಕೊಳ್ಳಬೇಕು’ ಎಂದು ಹೇಳಿದರು.</p>.<p>ಡಾ.ಬಿ.ಸಿ.ರವಿಕುಮಾರ್ ಮಾತನಾಡಿ, ‘ಬಡ ಜನರಿಗೆ ಕೈಗೆಟಕುವ ಬೆಲೆಯಲ್ಲಿ ಚಿಕಿತ್ಸೆ ಸಿಗಬೇಕು ಎನ್ನುವ ನಿಟ್ಟಿನಲ್ಲಿ ₹3 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಸೆಂಟರ್ ನಿರ್ಮಿಸಲಾಗುತ್ತಿದೆ. ಸರ್ಕಾರದಿಂದಲೂ ನೆರವು ಸಿಗಬೇಕಾಗಿದೆ’ ಎಂದು ತಿಳಿಸಿದರು.</p>.<p>ಟ್ರಸ್ಟ್ ಅಧ್ಯಕ್ಷ ಬಿ.ವಿ.ಕರೀಗೌಡಮಾತನಾಡಿ, ‘ಬಡ ರೋಗಿಗಳಿಗೆ ನೆರವಾಗಬೇಕೆಂಬ ಉದ್ದೇಶದಿಂದ ಈ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ. ಟ್ರಾಮಾ ಸೆಂಟರ್ ನಿರ್ಮಾಣಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ’ ಎಂದು ನುಡಿದರು.</p>.<p>ಟ್ರಸ್ಟ್ ಖಜಾಂಚಿ ಸಣ್ಣ ಮಂಜೇಗೌಡ, ಸಂಘಟನಾ ಕಾರ್ಯದರ್ಶಿ ಬಿ.ಕೆ. ಶಾಮರಾಜು, ಸದಸ್ಯರಾದ ಮಂಜೇಗೌಡ, ದಲಿಚಂದ್ ಎಂ. ಜೈನ್, ಎಚ್.ಆರ್. ನೇತ್ರಾವತಿ ಬಸವರಾಜು, ಚಂದ್ರಶೇಖರ್, ಡಿ.ಎಸ್. ಬಸವರಾಜು, ಕಾವ್ಯಾ, ತೇಜವತಿ ನಾಗೇಂದ್ರ, ಡಾ. ಆರ್.ಎಚ್. ಅನಂತರಾಮು, ಗಿರಿಗೌಡ, ರತ್ನಮ್ಮ ಕೃಷ್ಣೇಗೌಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>