ಶತಮಾನದ ಹಿಂದೆ ಮೈಸೂರಿನ ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯರ್, ಅಸ್ಪೃಶ್ಯ ಜಾತಿಗಳ ಶಿಕ್ಷಣಕ್ಕಾಗಿ ಉಚಿತ ವಸತಿ ಶಾಲೆಯಾದ ಕರ್ನಾಟಕ ಬೋರ್ಡಿಂಗ್ ಹೋಂ ಸ್ಥಾಪಿಸಿದ್ದು, ಅದು ಇಂದಿಗೂ ಇದೆ. ಈ ಸ್ಥಳಕ್ಕೆ 1954 ರಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಭೇಟಿ ನೀಡಿ ಭಾಷಣ ಮಾಡಿದ್ದರು. ಈ ಸ್ಥಳದಲ್ಲಿ ಸ್ಮಾರಕ ನಿರ್ಮಾಣ ಮಾಡುತ್ತಿರುವುದು ಜಿಲ್ಲೆಯ ಜನರಿಗೆ ಸಂತಸ ತಂದಿದೆ ಎಂದರು.