ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಾಂಜಾ ಮಾರಾಟ: ನಾಲ್ವರ ಬಂಧನ

Last Updated 27 ಮಾರ್ಚ್ 2020, 12:09 IST
ಅಕ್ಷರ ಗಾತ್ರ

ಸಕಲೇಶಪುರ: ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ವರು ಯುವಕರನ್ನು ಡಿವೈಎಸ್‌ಪಿ ಗೋಪಿ ನೇತೃತ್ವದಲ್ಲಿ ಪಟ್ಟಣ ಪೊಲೀಸರು ಗಾಂಜಾ ಸಮೇತ ಬಂಧಿಸಿದ್ದಾರೆ.

ಬೇಲೂರು ತಾಲ್ಲೂಕು ಅರೇಹಳ್ಳಿ ನಿವಾಸಿಗಳಾದ ಲೈಕಾನ್‌, ಸುಜಿತ್, ಪಟ್ಟಣದ ಸಂದೇಶ, ಹಲಸುಲಿಗೆ ಗ್ರಾಮದ ಪುನಿತ್‌ ಬಂಧಿತ ಆರೋಪಿಗಳು

ಹೇಮಾವತಿ ಸೇತುವೆ ಬಳಿ ಖಾಸಗಿ ಕಲ್ಯಾಣ ಮಂಟಪ ಬಳಿ ಲೈಕಾನ್‌ ಹಾಗೂ ಸುಜಿತ್ 112 ಗ್ರಾಂ ಗಾಂಜಾವನ್ನು ಸಣ್ಣ ಸಣ್ಣ ಪ್ಯಾಕ್‌ಗಳಲ್ಲಿ ತಂಬಿ ಪಟ್ಟಣದ ಸಂದೇಶ, ಹಲಸುಲಿಗೆ ಗ್ರಾಮದ ಪುನಿತ್‌ಗೆ ಅವರಿಗೆ ಮಾರಾಟ ಮಾಡುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ಡಿವೈಎಸ್‌ಪಿ ಗೋಪಿ, ಇನ್‌ಸ್ಪೆಕ್ಟರ್‌ ಗಿರೀಶ್‌, ಪಿಎಸ್‌ಐ ರಾಘವೇಂದ್ರ ಹಾಗೂ ಸಿಬ್ಬಂದಿ ದಾಳಿ ನಡೆಸಿ ಅವರನ್ನು ಬಂಧಿಸಿದ್ದಾರೆ.

ಗಾಂಜಾ ಸರಬರಾಜು ಮಾಡುತ್ತಿದ್ದ ಜಾಲದಲ್ಲಿ ಇರುವವರನ್ನು ಪತ್ತೆ ಹಚ್ಚಲು ಪೊಲೀಸರು ಬಲೆ ಬೀಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT