<p><strong>ಹಾಸನ:</strong> ಜಿಲ್ಲೆಯಲ್ಲಿ ಧಾರಾಕಾರ ಮಳೆಯಿಂದ ಮೂರು ಮನೆಗಳು ಕುಸಿದು ಬಿದ್ದಿವೆ.<br /><br />ಸಕಲೇಶಪುರ ತಾಲ್ಲೂಕಿನ ನಾಗರ ಗ್ರಾಮದಲ್ಲಿ ಗಾಳಿ , ಮಳೆಯಿಂದ ವಿದ್ಯುತ್ ತಂತಿ ಬಿದ್ದು ನಾಲ್ಕು ಹಸುಗಳು ಸಾವನ್ನಪ್ಪಿವೆ. ಹೇಮಾವತಿ ಜಲಾಶಯದ ಒಳ ಹರಿವು 20 ಸಾವಿರ ಕ್ಯುಸೆಕ್ ಗೆ ಏರಿಕೆಯಾಗಿದೆ. ವಾಟೆಹೊಳೆ ಜಲಾಶಯ ಭರ್ತಿಯಾಗಿದೆ.<br /><br />ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ಸಕಲೇಶಪುರ, ಆಲೂರು ತಾಲ್ಲೂಕಿನ ಕಾಫಿ, ಅಡಿಕೆ ತೋಟ, ಭತ್ತ ದ ಗದ್ದೆ ಜಲಾವೃತಗೊಂಡಿದೆ.</p>.<p>ಬಿತ್ತನೆಗಾಗಿ ಸಿದ್ದಪಡಿಸಿಕೊಂಡಿದ್ದ ಭತ್ತದ ಪೈರು ಮತ್ತು ನಾಟಿ ಮಾಡಿದ್ದ ಗದ್ದೆಗಳೂ ಜಲಾವೃತಗೊಂಡಿದೆ. ಸಕಲೇಶಪುರ ತಾಲ್ಲೂಕಿನ ಈಶ್ವರಹಳ್ಳಿಯಲ್ಲಿ ಚಕ್ರತೀರ್ಥ ಉಕ್ಕಿ ಹರಿದಿದೆ. ಮಠಸಾಗರ -ಹಣ್ಣಳ್ಳಿ ನಡುವೆ ಸೇತುವೆ ತುಂಬಿ ಹರಿಯುತ್ತಿದ್ದು, ಗ್ರಾಮಕ್ಕೆ ಸಂಪರ್ಕ ಕಡಿತಗೊಂಡಿದೆ.</p>.<p>ಬೇಲೂರು ತಾಲ್ಲೂಕಿನ ಇಂಟಿತೊಳಲು ಗ್ರಾಮದಲ್ಲಿ ದನದ ಕೊಟ್ಟಿಗೆ ಕುಸಿದು ಬಿದ್ದಿದೆ. ಆಲೂರು ತಾಲ್ಲೂಕಿನ ಹೊಸ ಹಳ್ಳಿಯಲ್ಲಿ ಸೋಮೆಗೌಡರ ಮನೆ ಕುಸಿದಿದೆ.</p>.<p>ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಶಿರಾಡಿಘಾಟ್ ರಸ್ತೆಯಲ್ಲಿ ಶುಕ್ರವಾರದಿಂದ ಮುಂದಿನ ಆದೇಶದವರೆಗೂ ಬೃಹತ್ ವಾಹನಗಳ ಸಂಚಾರ ನಿರ್ಬಂಧ ಹೇರಲಾಗಿದೆ. ಲಘು ವಾಹನಗಳು ಬೆಳ್ಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮಾತ್ರ ಸಂಚರಿಸಲು ಅವಕಾಶ ನೀಡಲಾಗಿದೆ.</p>.<p>ಸಂಜೆ 6 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ಎಲ್ಲಾ ವಾಹನ ಸಂಚಾರ ನಿಷೇಧಿಸಲಾಗಿದೆ. ಕಾರು, ಜೀಪ್, ದ್ವಿಚಕ್ರ ವಾಹನಗಳು, ಮಿನಿ ಟೆಂಪೋ, ಸಾರಿಗೆ ಬಸ್ ಗಳಿಗೆ ಮಾತ್ರ ಸಂಚರಿಸಲು ಅವಕಾಶ ನೀಡಲಾಗಿದೆ.</p>.<p>ಟ್ಯಾಂಕರ್, ರಾಜಹಂಸ, ಐರಾವತ ಕಂಟೈನರ್ ವಾಹನಗಳಿಗೆ ಸಂಪೂರ್ಣ ನಿಷೇಧಿಸಲಾಗಿದೆ. ಹಾಸನ-ಬೇಲೂರು-ಮೂಡಿಗೆರೆ ಚಾರ್ಮಾಡಿ ಘಾಟ್ ಮೂಲಕ ಮಂಗಳೂರಿಗೆ ತೆರಳುವಂತೆ ಜಿಲ್ಲಾಧಿಕಾರಿ ಆರ್.ಗಿರೀಶ್ ಆದೇಶ ಹೊರಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ:</strong> ಜಿಲ್ಲೆಯಲ್ಲಿ ಧಾರಾಕಾರ ಮಳೆಯಿಂದ ಮೂರು ಮನೆಗಳು ಕುಸಿದು ಬಿದ್ದಿವೆ.<br /><br />ಸಕಲೇಶಪುರ ತಾಲ್ಲೂಕಿನ ನಾಗರ ಗ್ರಾಮದಲ್ಲಿ ಗಾಳಿ , ಮಳೆಯಿಂದ ವಿದ್ಯುತ್ ತಂತಿ ಬಿದ್ದು ನಾಲ್ಕು ಹಸುಗಳು ಸಾವನ್ನಪ್ಪಿವೆ. ಹೇಮಾವತಿ ಜಲಾಶಯದ ಒಳ ಹರಿವು 20 ಸಾವಿರ ಕ್ಯುಸೆಕ್ ಗೆ ಏರಿಕೆಯಾಗಿದೆ. ವಾಟೆಹೊಳೆ ಜಲಾಶಯ ಭರ್ತಿಯಾಗಿದೆ.<br /><br />ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ಸಕಲೇಶಪುರ, ಆಲೂರು ತಾಲ್ಲೂಕಿನ ಕಾಫಿ, ಅಡಿಕೆ ತೋಟ, ಭತ್ತ ದ ಗದ್ದೆ ಜಲಾವೃತಗೊಂಡಿದೆ.</p>.<p>ಬಿತ್ತನೆಗಾಗಿ ಸಿದ್ದಪಡಿಸಿಕೊಂಡಿದ್ದ ಭತ್ತದ ಪೈರು ಮತ್ತು ನಾಟಿ ಮಾಡಿದ್ದ ಗದ್ದೆಗಳೂ ಜಲಾವೃತಗೊಂಡಿದೆ. ಸಕಲೇಶಪುರ ತಾಲ್ಲೂಕಿನ ಈಶ್ವರಹಳ್ಳಿಯಲ್ಲಿ ಚಕ್ರತೀರ್ಥ ಉಕ್ಕಿ ಹರಿದಿದೆ. ಮಠಸಾಗರ -ಹಣ್ಣಳ್ಳಿ ನಡುವೆ ಸೇತುವೆ ತುಂಬಿ ಹರಿಯುತ್ತಿದ್ದು, ಗ್ರಾಮಕ್ಕೆ ಸಂಪರ್ಕ ಕಡಿತಗೊಂಡಿದೆ.</p>.<p>ಬೇಲೂರು ತಾಲ್ಲೂಕಿನ ಇಂಟಿತೊಳಲು ಗ್ರಾಮದಲ್ಲಿ ದನದ ಕೊಟ್ಟಿಗೆ ಕುಸಿದು ಬಿದ್ದಿದೆ. ಆಲೂರು ತಾಲ್ಲೂಕಿನ ಹೊಸ ಹಳ್ಳಿಯಲ್ಲಿ ಸೋಮೆಗೌಡರ ಮನೆ ಕುಸಿದಿದೆ.</p>.<p>ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಶಿರಾಡಿಘಾಟ್ ರಸ್ತೆಯಲ್ಲಿ ಶುಕ್ರವಾರದಿಂದ ಮುಂದಿನ ಆದೇಶದವರೆಗೂ ಬೃಹತ್ ವಾಹನಗಳ ಸಂಚಾರ ನಿರ್ಬಂಧ ಹೇರಲಾಗಿದೆ. ಲಘು ವಾಹನಗಳು ಬೆಳ್ಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮಾತ್ರ ಸಂಚರಿಸಲು ಅವಕಾಶ ನೀಡಲಾಗಿದೆ.</p>.<p>ಸಂಜೆ 6 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ಎಲ್ಲಾ ವಾಹನ ಸಂಚಾರ ನಿಷೇಧಿಸಲಾಗಿದೆ. ಕಾರು, ಜೀಪ್, ದ್ವಿಚಕ್ರ ವಾಹನಗಳು, ಮಿನಿ ಟೆಂಪೋ, ಸಾರಿಗೆ ಬಸ್ ಗಳಿಗೆ ಮಾತ್ರ ಸಂಚರಿಸಲು ಅವಕಾಶ ನೀಡಲಾಗಿದೆ.</p>.<p>ಟ್ಯಾಂಕರ್, ರಾಜಹಂಸ, ಐರಾವತ ಕಂಟೈನರ್ ವಾಹನಗಳಿಗೆ ಸಂಪೂರ್ಣ ನಿಷೇಧಿಸಲಾಗಿದೆ. ಹಾಸನ-ಬೇಲೂರು-ಮೂಡಿಗೆರೆ ಚಾರ್ಮಾಡಿ ಘಾಟ್ ಮೂಲಕ ಮಂಗಳೂರಿಗೆ ತೆರಳುವಂತೆ ಜಿಲ್ಲಾಧಿಕಾರಿ ಆರ್.ಗಿರೀಶ್ ಆದೇಶ ಹೊರಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>