<p><strong>ಹಾಸನ:</strong> ಹೊಳೆನರಸೀಪುರ ತಾಲ್ಲೂಕಿನ ಜೋಡಿಗುಬ್ಬಿ ಗ್ರಾಮದ ಎಸ್.ಎಂ.ಇಟ್ಟಿಗೆ ಕಾರ್ಖಾನೆಯಲ್ಲಿ ಜೀತದಾಳುಗಳಾಗಿ ದುಡಿಯುತ್ತಿದ್ದ ಒಂದೇ ಕುಟುಂಬದ ನಾಲ್ವರನ್ನು ರಕ್ಷಣೆ ಮಾಡಲಾಗಿದೆ.</p>.<p>ಹೊಳೆನರಸೀಪುರ ತಹಶೀಲ್ದಾರ್ ಕೃಷ್ಣಮೂರ್ತಿ ಸೂಚನೆ ಮೇರೆಗೆ ಹಳ್ಳಿಮೈಸೂರು ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಒಡಿಶಾದ ಬಲಂಗಿರ್ ಜಿಲ್ಲೆ ಪೆನ್ನಾಗೋಡ್ ತಾಲ್ಲೂಕಿನ ಕೋಪ್ರಾಕೋಲ್ ಗ್ರಾಮದ ಮೊಕರ್ದಾಜ್ ಪುಟೇಲ್, ಪತ್ನಿ ಊರ್ಮಿಳಾ ಪುಟೇಲ್, ಮಕ್ಕಳಾದ ವರ್ಷಿತಾ ಪುಟೇಲ್ ಹಾಗೂ ರಾಜ್ ಪುಟೇಲ್ ಎಂಬುವವರು ಜೀತಮುಕ್ತರಾದವರು.</p>.<p>ಗ್ರಾಮದ 1.06 ಎಕರೆ ಜಮೀನಿನಲ್ಲಿ ಸತೀಶ್ ಎಂಬುವವರ ಎಸ್.ಎಂ. ಇಟ್ಟಿಗೆ ಕಾರ್ಖಾನೆಯಲ್ಲಿ ಕೆಲಸ ಮಾಡಲು 3 ವರ್ಷಗಳಿಂದ ಇವರನ್ನು ಇರಿಸಿಕೊಳ್ಳಲಾಗಿತ್ತು. ಪ್ರತಿದಿನಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಕೆಲಸ ಮಾಡಿಸಲಾಗುತ್ತಿತ್ತು. 3 ವರ್ಷದ ಹಿಂದೆ ₹ 17 ಸಾವಿರ ಪಡೆದಿದ್ದು, ದಿನಕ್ಕೆ ₹1ಸಾವಿರ ಇಟ್ಟಿಗೆ ಮಾಡಿದರೆ ₹ 800 ನೀಡುವುದಾಗಿ ಈ ಕುಟುಂಬವನ್ನು ಕರೆದುಕೊಂಡು ಬರಲಾಗಿತ್ತು.</p>.<p>‘ಇಟ್ಟಿಗೆ ಕೆಲಸ ನಿರ್ವಹಿಸಿದ ಹಣವನ್ನು ನೀಡಿಲ್ಲ. ವಾರದಲ್ಲಿ ಒಂದು ದಿನವೂ ವಿಶ್ರಾಂತಿ ಇಲ್ಲದೆ ಕೆಲಸ ಮಾಡಿಸಿಕೊಳ್ಳುತಿದ್ದು, ಹೊರಗಡೆ ಮುಕ್ತವಾಗಿ ತಿರುಗಲು ಅವಕಾಶ ಕೊಡುತ್ತಿರಲಿಲ್ಲ. 3 ವರ್ಷದಿಂದ ಸ್ವಂತ ಗ್ರಾಮಕ್ಕೆ ತೆರಳಲು ಅವಕಾಶ ನೀಡಿರಲಿಲ್ಲ’ ಎಂದು ರಕ್ಷಣೆಗೆ ಒಳಗಾದ ಕಾರ್ಮಿಕರು ಪೊಲೀಸರಿಗೆ ತಿಳಿಸಿದ್ದಾರೆ.</p>.<p> ಕಾರ್ಖಾನೆ ಮಾಲೀಕ ಸತೀಶ್ ವಿರುದ್ದ ಹಳ್ಳಿಮೈಸೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ:</strong> ಹೊಳೆನರಸೀಪುರ ತಾಲ್ಲೂಕಿನ ಜೋಡಿಗುಬ್ಬಿ ಗ್ರಾಮದ ಎಸ್.ಎಂ.ಇಟ್ಟಿಗೆ ಕಾರ್ಖಾನೆಯಲ್ಲಿ ಜೀತದಾಳುಗಳಾಗಿ ದುಡಿಯುತ್ತಿದ್ದ ಒಂದೇ ಕುಟುಂಬದ ನಾಲ್ವರನ್ನು ರಕ್ಷಣೆ ಮಾಡಲಾಗಿದೆ.</p>.<p>ಹೊಳೆನರಸೀಪುರ ತಹಶೀಲ್ದಾರ್ ಕೃಷ್ಣಮೂರ್ತಿ ಸೂಚನೆ ಮೇರೆಗೆ ಹಳ್ಳಿಮೈಸೂರು ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಒಡಿಶಾದ ಬಲಂಗಿರ್ ಜಿಲ್ಲೆ ಪೆನ್ನಾಗೋಡ್ ತಾಲ್ಲೂಕಿನ ಕೋಪ್ರಾಕೋಲ್ ಗ್ರಾಮದ ಮೊಕರ್ದಾಜ್ ಪುಟೇಲ್, ಪತ್ನಿ ಊರ್ಮಿಳಾ ಪುಟೇಲ್, ಮಕ್ಕಳಾದ ವರ್ಷಿತಾ ಪುಟೇಲ್ ಹಾಗೂ ರಾಜ್ ಪುಟೇಲ್ ಎಂಬುವವರು ಜೀತಮುಕ್ತರಾದವರು.</p>.<p>ಗ್ರಾಮದ 1.06 ಎಕರೆ ಜಮೀನಿನಲ್ಲಿ ಸತೀಶ್ ಎಂಬುವವರ ಎಸ್.ಎಂ. ಇಟ್ಟಿಗೆ ಕಾರ್ಖಾನೆಯಲ್ಲಿ ಕೆಲಸ ಮಾಡಲು 3 ವರ್ಷಗಳಿಂದ ಇವರನ್ನು ಇರಿಸಿಕೊಳ್ಳಲಾಗಿತ್ತು. ಪ್ರತಿದಿನಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಕೆಲಸ ಮಾಡಿಸಲಾಗುತ್ತಿತ್ತು. 3 ವರ್ಷದ ಹಿಂದೆ ₹ 17 ಸಾವಿರ ಪಡೆದಿದ್ದು, ದಿನಕ್ಕೆ ₹1ಸಾವಿರ ಇಟ್ಟಿಗೆ ಮಾಡಿದರೆ ₹ 800 ನೀಡುವುದಾಗಿ ಈ ಕುಟುಂಬವನ್ನು ಕರೆದುಕೊಂಡು ಬರಲಾಗಿತ್ತು.</p>.<p>‘ಇಟ್ಟಿಗೆ ಕೆಲಸ ನಿರ್ವಹಿಸಿದ ಹಣವನ್ನು ನೀಡಿಲ್ಲ. ವಾರದಲ್ಲಿ ಒಂದು ದಿನವೂ ವಿಶ್ರಾಂತಿ ಇಲ್ಲದೆ ಕೆಲಸ ಮಾಡಿಸಿಕೊಳ್ಳುತಿದ್ದು, ಹೊರಗಡೆ ಮುಕ್ತವಾಗಿ ತಿರುಗಲು ಅವಕಾಶ ಕೊಡುತ್ತಿರಲಿಲ್ಲ. 3 ವರ್ಷದಿಂದ ಸ್ವಂತ ಗ್ರಾಮಕ್ಕೆ ತೆರಳಲು ಅವಕಾಶ ನೀಡಿರಲಿಲ್ಲ’ ಎಂದು ರಕ್ಷಣೆಗೆ ಒಳಗಾದ ಕಾರ್ಮಿಕರು ಪೊಲೀಸರಿಗೆ ತಿಳಿಸಿದ್ದಾರೆ.</p>.<p> ಕಾರ್ಖಾನೆ ಮಾಲೀಕ ಸತೀಶ್ ವಿರುದ್ದ ಹಳ್ಳಿಮೈಸೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>