ಪಟ್ಟಣದ ಕುಡುಗರಹಳ್ಳಿ ಬಡಾವಣೆ ನಿವಾಸಿ ಮನೋಜ್ ಎಂಬುವವರು ಭಾನುವಾರ ರಾತ್ರಿ ದೋಣಿಗಾಲ್ ಕಡೆಯಿಂದ ಪಟ್ಟಣಕ್ಕೆ ಬರುವಾಗ ಈ ಅಪಘಾತ ಸಂಭವಿಸಿದೆ. ರಸ್ತೆಯಿಂದ ಸುಮಾರು 80 ಅಡಿ ಆಳದ ಪ್ರಪಾತಕ್ಕೆ ಉರುಳಿ ಬಿದ್ದಿದೆ. ಕಾರಿನ ಹಿಂಭಾಗ ಬರುತ್ತಿದ್ದ ಆನೇಮಹಲ್ ಕಾಫಿ ಬಡ್ಡೆ ಮೋಣು ಎಂಬುವವರು ಹಾಗೂ ಅವರ ಸ್ನೇಹಿತರು ಗಾಯಗೊಂಡಿದ್ದ ಮನೋಜ್ ಅವರನ್ನು ಮೇಲೆ ಎತ್ತಿಕೊಂಡು ಬಂದು ಆಸ್ಪತ್ರೆಗೆ ಕರೆದುಕೊಂಡು ಬಂದು ಪ್ರಥಮ ಚಿಕಿತ್ಸೆ ಕೊಡಿಸಿ ಮಾನವೀಯತೆ ಮೆರೆದರು.