ಕಾರ್ಯಕ್ರಮಕ್ಕೂ ಮೊದಲು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಅಲ್ಲಿಂದ ಹೇಮಾವತಿ ಪ್ರತಿಮೆಗೆ ಪುಷ್ಪಾರ್ಚನೆ ಮಾಡಲಾಯಿತು. ಬಳಿಕ ಡಾ.ಬಿ.ಆರ್. ಅಂಬೇಡ್ಕರ್ ಹಾಗೂ ಡಾ. ಬಾಬು ಜಗಜೀವನ್ ರಾಮ್ ಅವರ ಭಾವಚಿತ್ರವನ್ನು ಮೆರವಣಿಗೆಯಲ್ಲಿ ನಗರಸಭೆಗೆ ತರಲಾಯಿತು.