ಅರಸೀಕೆರೆ: ನಾಗರಿಕರ ಜೀವನ ನಿರ್ವಹಣೆಗೆ ಅಗತ್ಯ ವಸ್ತುಗಳ ಕೊರತೆ ತಲೆದೋರಿದ್ದು, ಬಡವರಿಗೆ ಹಾಗೂ ನಗರ ಪ್ರದೇಶದಲ್ಲಿರುವ ಕೊಳೆಗೇರಿ ಪ್ರದೇಶದ ನಿವಾಸಿಗಳಿಗೆ ಉಚಿತವಾಗಿ ಹಾಲು ವಿತರಿಸಲು ನಿರ್ಧರಿಸಿದೆ. ಶನಿವಾರ ಬೆಳಿಗ್ಗೆ ನಗರದ ಬಿ ಹೆಚ್ ರಸ್ತೆಯಲ್ಲಿರುವ ಸರಸ್ವತಿ ಪುರಂ ಕೊಳಗೇರಿ ನಿವಾಸಿಗಳಿಗೆ ಉಚಿತವಾಗಿ ಶಾಸಕ ಕೆ ಎಂ ಶಿವಲಿಂಗೇಗೌಡ ಹಾಲು ವಿತರಿಸಿದರು.