<p><strong>ಅರಕಲಗೂಡು: </strong>ಅನಾರೋಗ್ಯದಿಂದ ಮೃತಪಟ್ಟ ಪಟ್ಟಣದ ಯೋಧ ಬಿ.ಆರ್. ರಾಕೇಶ್ (24) ಅವರ ಪಾರ್ಥಿವ ಶರೀರದ ಅಂತ್ಯಸಂಸ್ಕಾರ ಸೋಮವಾರ ಸಕಲ ಸರ್ಕಾರಿ ಗೌರವಗಳೊಂದಿಗೆ ಸ್ವಗ್ರಾಮ ಬಾಣದಹಳ್ಳಿಯಲ್ಲಿ ನೆರವೇರಿತು.</p>.<p>ಹಿಮಾಚಲ ಪ್ರದೇಶದಲ್ಲಿ ಕರ್ತವ್ಯದಲ್ಲಿದ್ದಾಗ ಆರೋಗ್ಯದ ಸಮಸ್ಯೆ ಉಲ್ಭಣಿಸಿ ಅಸ್ವಸ್ಥರಾಗಿದ್ದ ಯೋಧನನ್ನು ಹರಿಯಾಣದ ಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆಗೆ ಸ್ಪಂದಿಸದೇ ಶನಿವಾರ ಮೃತಪಟ್ಟಿದ್ದರು. ಸೋಮವಾರ ಬೆಳಿಗ್ಗೆ 6 ಗಂಟೆಗೆ ತಾಲ್ಲೂಕು ಕಚೇರಿ ಆವರಣಕ್ಕೆ ಬಂದ ಯೋಧನ ಪಾರ್ಥಿವ ಶರೀರಕ್ಕೆ ತಹಶೀಲ್ದಾರ್ ವೈ.ಎಂ.ರೇಣುಕುಮಾರ್ ತಾಲ್ಲೂಕು ಆಡಳಿತದ ಪರವಾಗಿ ಪುಷ್ಪಗುಚ್ಛ ಇರಿಸಿ ಗೌರವ ಸಲ್ಲಿಸಿದರು.</p>.<p>ಬಳಿಕ 8.30ರವರೆಗೂ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಈ ವೇಳೆ ಶಾಸಕ ಎ.ಟಿ.ರಾಮಸ್ವಾಮಿ, ಸೇರಿದಂತೆ ಹಲವಾರು ಜನಪ್ರತಿನಿಧಿಗಳು, ಪ್ರಮುಖರು ಅಂತಿಮ ನಮನ ಸಲ್ಲಿಸಿ ಶ್ರದ್ಧಾಂಜಲಿ ಸಲ್ಲಿಸಿದರು.</p>.<p>ಬಳಿಕ ಪಟ್ಟಣದ ಕ್ರೀಡಾಂಗಣದಲ್ಲಿ ಕೆಲಕಾಲ ಸಾರ್ವಜನಿಕರ ದರ್ಶನಕ್ಕೆ ಇರಿಸಲಾಗಿತ್ತು. ಪೊಟ್ಯಾಟೊ ಕ್ಲಬ್ ಅಧ್ಯಕ್ಷ ಎಚ್.ಯೋಗಾರಮೇಶ್ ಅಂತಿಮ ನಮನ ಸಲ್ಲಿಸಿದರು. ನಂತರ ಪಟ್ಟಣದ ಮುಖ್ಯ ರಸ್ತೆಗಳಲ್ಲಿ ಯೋಧನ ಪಾರ್ಥಿವ ಶರೀರದ ಅಂತಿಮ ಯಾತ್ರೆ ನಡೆಸಲಾಯಿತು. ಈ ವೇಳೆ ಶಾಲಾ ವಿದ್ಯಾರ್ಥಿಗಳು, ಸಾರ್ವಜನಿಕರು ಪಾಲ್ಗೊಂಡಿದ್ದರು.</p>.<p>ಸ್ವಗ್ರಾಮ ಬಾಣದಹಳ್ಳಿ ಗ್ರಾಮಕ್ಕೆ ಯೋಧನ ಮೃತದೇಹ ಬಂದಾಗ ಕುಟುಂಬದವರ ರೋಧನ ಮುಗಿಲು ಮುಟ್ಟಿತು. ಸ್ವಲ್ಪ ಸಮಯ ಸಾರ್ವಜನಿಕರ ದರ್ಶನಕ್ಕೆ ಅವಕಾಶ ನೀಡಲಾಯಿತು. ಈ ವೇಳೆ ಮಾಜಿ ಸಚಿವ ಎ.ಮಂಜು ಅಂತಿಮ ನಮನ ಸಲ್ಲಿಸಿ ಶ್ರದ್ಧಾಂಜಲಿ ಸಲ್ಲಿಸಿದರು. ಬಳಿಕ ಕುಟುಂಬಕ್ಕೆ ಸೇರಿದ ಜಮೀನಿನಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಯಿತು.</p>.<p>ಸಶಸ್ತ್ರ ಮೀಸಲು ಪಡೆಯ ಪೊಲೀಸರು ಹಾಗೂ ಯೋಧರು ಕುಶಾಲ ತೋಪು ಹಾರಿಸಿ ಗೌರವ ಸಲ್ಲಿಸಿದರು. ವಿವಿಧ ಇಲಾಖೆ ಅಧಿಕಾರಿಗಳು, ಗಣ್ಯರು, ಸಾರ್ವಜನಿಕರು ಸಾವಿರಾರು ಸಂಖ್ಯೆಯಲ್ಲಿ ಅಂತ್ಯಸಂಸ್ಕಾರದಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅರಕಲಗೂಡು: </strong>ಅನಾರೋಗ್ಯದಿಂದ ಮೃತಪಟ್ಟ ಪಟ್ಟಣದ ಯೋಧ ಬಿ.ಆರ್. ರಾಕೇಶ್ (24) ಅವರ ಪಾರ್ಥಿವ ಶರೀರದ ಅಂತ್ಯಸಂಸ್ಕಾರ ಸೋಮವಾರ ಸಕಲ ಸರ್ಕಾರಿ ಗೌರವಗಳೊಂದಿಗೆ ಸ್ವಗ್ರಾಮ ಬಾಣದಹಳ್ಳಿಯಲ್ಲಿ ನೆರವೇರಿತು.</p>.<p>ಹಿಮಾಚಲ ಪ್ರದೇಶದಲ್ಲಿ ಕರ್ತವ್ಯದಲ್ಲಿದ್ದಾಗ ಆರೋಗ್ಯದ ಸಮಸ್ಯೆ ಉಲ್ಭಣಿಸಿ ಅಸ್ವಸ್ಥರಾಗಿದ್ದ ಯೋಧನನ್ನು ಹರಿಯಾಣದ ಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆಗೆ ಸ್ಪಂದಿಸದೇ ಶನಿವಾರ ಮೃತಪಟ್ಟಿದ್ದರು. ಸೋಮವಾರ ಬೆಳಿಗ್ಗೆ 6 ಗಂಟೆಗೆ ತಾಲ್ಲೂಕು ಕಚೇರಿ ಆವರಣಕ್ಕೆ ಬಂದ ಯೋಧನ ಪಾರ್ಥಿವ ಶರೀರಕ್ಕೆ ತಹಶೀಲ್ದಾರ್ ವೈ.ಎಂ.ರೇಣುಕುಮಾರ್ ತಾಲ್ಲೂಕು ಆಡಳಿತದ ಪರವಾಗಿ ಪುಷ್ಪಗುಚ್ಛ ಇರಿಸಿ ಗೌರವ ಸಲ್ಲಿಸಿದರು.</p>.<p>ಬಳಿಕ 8.30ರವರೆಗೂ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಈ ವೇಳೆ ಶಾಸಕ ಎ.ಟಿ.ರಾಮಸ್ವಾಮಿ, ಸೇರಿದಂತೆ ಹಲವಾರು ಜನಪ್ರತಿನಿಧಿಗಳು, ಪ್ರಮುಖರು ಅಂತಿಮ ನಮನ ಸಲ್ಲಿಸಿ ಶ್ರದ್ಧಾಂಜಲಿ ಸಲ್ಲಿಸಿದರು.</p>.<p>ಬಳಿಕ ಪಟ್ಟಣದ ಕ್ರೀಡಾಂಗಣದಲ್ಲಿ ಕೆಲಕಾಲ ಸಾರ್ವಜನಿಕರ ದರ್ಶನಕ್ಕೆ ಇರಿಸಲಾಗಿತ್ತು. ಪೊಟ್ಯಾಟೊ ಕ್ಲಬ್ ಅಧ್ಯಕ್ಷ ಎಚ್.ಯೋಗಾರಮೇಶ್ ಅಂತಿಮ ನಮನ ಸಲ್ಲಿಸಿದರು. ನಂತರ ಪಟ್ಟಣದ ಮುಖ್ಯ ರಸ್ತೆಗಳಲ್ಲಿ ಯೋಧನ ಪಾರ್ಥಿವ ಶರೀರದ ಅಂತಿಮ ಯಾತ್ರೆ ನಡೆಸಲಾಯಿತು. ಈ ವೇಳೆ ಶಾಲಾ ವಿದ್ಯಾರ್ಥಿಗಳು, ಸಾರ್ವಜನಿಕರು ಪಾಲ್ಗೊಂಡಿದ್ದರು.</p>.<p>ಸ್ವಗ್ರಾಮ ಬಾಣದಹಳ್ಳಿ ಗ್ರಾಮಕ್ಕೆ ಯೋಧನ ಮೃತದೇಹ ಬಂದಾಗ ಕುಟುಂಬದವರ ರೋಧನ ಮುಗಿಲು ಮುಟ್ಟಿತು. ಸ್ವಲ್ಪ ಸಮಯ ಸಾರ್ವಜನಿಕರ ದರ್ಶನಕ್ಕೆ ಅವಕಾಶ ನೀಡಲಾಯಿತು. ಈ ವೇಳೆ ಮಾಜಿ ಸಚಿವ ಎ.ಮಂಜು ಅಂತಿಮ ನಮನ ಸಲ್ಲಿಸಿ ಶ್ರದ್ಧಾಂಜಲಿ ಸಲ್ಲಿಸಿದರು. ಬಳಿಕ ಕುಟುಂಬಕ್ಕೆ ಸೇರಿದ ಜಮೀನಿನಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಯಿತು.</p>.<p>ಸಶಸ್ತ್ರ ಮೀಸಲು ಪಡೆಯ ಪೊಲೀಸರು ಹಾಗೂ ಯೋಧರು ಕುಶಾಲ ತೋಪು ಹಾರಿಸಿ ಗೌರವ ಸಲ್ಲಿಸಿದರು. ವಿವಿಧ ಇಲಾಖೆ ಅಧಿಕಾರಿಗಳು, ಗಣ್ಯರು, ಸಾರ್ವಜನಿಕರು ಸಾವಿರಾರು ಸಂಖ್ಯೆಯಲ್ಲಿ ಅಂತ್ಯಸಂಸ್ಕಾರದಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>